AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ವರದಿ: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ;

Bangalore Weather: ಕಳೆದೊಂದು ವಾರದಿಂದ ಕರ್ನಾಟಕದ ಹಲವೆಡೆ ಸುರಿಯುತ್ತಿರುವ ಮಳೆ ಭಾರೀ ಅವಾಂತರನ್ನೇ ಸೃಷ್ಟಿಸಿದೆ. ರೈತರು ಬೆಳೆದ ಬೆಳೆ ನೀರುಪಾಲಾಗಿದ್ದರೆ, ಮನೆಗಳು ಕುಸಿದು ಬಿದ್ದಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನರು ಮಳೆ ಸಾಕಪ್ಪ ಸಾಕು ಎನ್ನುತ್ತಿದ್ದಾರೆ. ಆದರೆ ಮಳೆರಾಯ ಇನ್ನೂ ಐದು ದಿನ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವರದಿ: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ;
ಕರ್ನಾಟಕದಲ್ಲಿ ಇನ್ನೂ 5 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
Vinayak Hanamant Gurav
| Edited By: |

Updated on:Oct 21, 2024 | 4:21 PM

Share

ಬೆಂಗಳೂರು, ಅಕ್ಟೋಬರ್​ 21: ಆಕಾಶಕ್ಕೆ ತೂತು ಬಿದ್ದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಿರಂತರ ಮಳೆ (Rain) ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಇನ್ನು ಸಿಲಿಕಾನ್​ ಸಿಟಿಯಲ್ಲಿ ಮಾತ್ರ ಸಿಕ್ಕಾಪಟ್ಟೆ ಅವಾಂತರಗಳು ಸೃಷ್ಟಿಯಾಗಿವೆ. ಇದೆಲ್ಲದರ ಮಧ್ಯೆ ರಾಜ್ಯದಲ್ಲಿ ಇನ್ನೂ ಐದು ದಿನ ವರುಣದೇವ ಆರ್ಭಟಿಸುವ ಮುನ್ಸೂಚನೆ ನೀಡಿದ್ದಾನೆ.

ಅಕ್ಟೋಬರ್ 23ರವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ: ಸಿ.ಎಸ್.ಪಾಟೀಲ್

ಈ ಬಗ್ಗೆ ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ಪ್ರತಿಕ್ರಿಯಿಸಿದ್ದು, ಕರ್ನಾಟಕದ ಹಲವೆಡೆ ಇನ್ನೂ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಅಕ್ಟೋಬರ್ 23ರವರೆಗೆ ಬೆಂಗಳೂರು ನಗರದಲ್ಲೂ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangalore Rains: ಬೆಂಗಳೂರಿನಲ್ಲಿ ರಾತ್ರಿ, ಮುಂಜಾನೆ ಅಬ್ಬರದ ಮಳೆ: ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ತ

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 23ರವರೆಗೆ ವ್ಯಾಪಕ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಕಡೆ ಕೂಡ ಮಳೆ ಆಗಿದೆ ಎಂದಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಮಳೆ

ಉತ್ತರ ಕನ್ನಡ 11 ಸೆ.ಮೀ., ಉಡುಪಿ 9 ಸೆ.ಮೀ, ಹಾವೇರಿ 10 ಸೆ.ಮೀ., ದಾವಣಗೆರೆ ಜಿಲ್ಲೆಯಲ್ಲಿ 8 ಸೆ.ಮೀ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಯಲ್ಲಿ ಮಳೆ‌ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ 17.7 ಮಿಲಿ ಮೀಟರ್ ಮಳೆ ಆಗಿದೆ. ಹೆಚ್​ಎಎಲ್​ ಏರ್​​ಪೋರ್ಟ್​ ವ್ಯಾಪ್ತಿಯಲ್ಲಿ 10.8 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಮಿ.ಮೀ., ಬಾಗಲಗುಂಟೆ 5.4 ಮಿ.ಮೀ., ಶೆಟ್ಟಿಹಳ್ಳಿ 4.2 ಮಿ.ಮೀ., ನಂದಿನಿ ಲೇಔಟ್ 3.3 ಮಿ.ಮೀ., ಹೇರೋಹಳ್ಳಿ 2.9 ಮಿ.ಮೀ., ಕೆಂಗೇರಿ ವ್ಯಾಪ್ತಿಯಲ್ಲಿ 2.1 ಮಿ.ಮೀ. ಮಳೆಯಾಗಿದೆ ಆಗಿದೆ.

ಇದನ್ನೂ ಓದಿ: Bangalore Rains: ಭಾರಿ ಮಳೆ ಕಾರಣ ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಊರನ್ನೇ ನುಂಗುವಂತೆ ನುಗ್ಗಿರುವ ಮಳೆ ನೀರು ಸಾವಿರಾರು ಜನರ ಸೂರನ್ನೇ ಕಸಿದುಕೊಂಡಿದೆ. ಮನೆಗಳಿಗೆ ಮಳೆ ನೀರು, ಚರಂಡಿ ನೀರು ನುಗ್ಗಿ ಸಂಪೂರ್ಣ ಬದುಕೇ ಅಸ್ತವ್ಯಸ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:58 pm, Mon, 21 October 24

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?