AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Prajwal D'Souza
Prajwal D'Souza| Edited By: |

Updated on:Jul 14, 2023 | 7:19 PM

Share

ಬೆಂಗಳೂರು, ಜುಲೈ 14 : ಕರಾವಳಿ ಕರ್ನಾಟಕದಲ್ಲಿ (Coastal Karnataka) ಶನಿವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಆ ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗಿನ ಜಾವದವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು (115.6 ಮಿ.ಮೀ ನಿಂದ 204.4 ಮಿ.ಮೀ.) ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಮಹಾರಾಷ್ಟ್ರದಿಂದ ಉತ್ತರ ಕೇರಳ ಕರಾವಳಿಯವರೆಗೆ ಸಮುದ್ರದಲ್ಲಿ ಸುಳಿ ಉಂಟಾಗಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ. ಶನಿವಾರದಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುರುವಾರ ಕರಾವಳಿ ಕರ್ನಾಟಕದ ಮೂರು ಕಡೆ ಅತಿ ಹೆಚ್ಚು ಮಳೆಯಾಗಿದ್ದು, ಎಂಟು ಕಡೆ ಭಾರಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದರೆ 15 ಸೆಂ.ಮೀ ಮಳೆಯಾಗಿದೆ. ಅಂಕೋಲಾ ಮತ್ತು ಕಾರವಾರದಲ್ಲಿ ಕ್ರಮವಾಗಿ 13 ಸೆಂ.ಮೀ ಮತ್ತು 12 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ತಿಳಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು ಅಥವಾ ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ ನೀಡಿಲ್ಲ.

ಇದನ್ನೂ ಓದಿ: Dengue: ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ; ತುರ್ತು ಸಂದರ್ಭದಲ್ಲಿ ರಕ್ತ, ಪ್ಲೇಟ್​​ಗಳು ಎಲ್ಲೆಲ್ಲ ಸಿಗುತ್ತವೆ? ಇಲ್ಲಿದೆ ವಿವರ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 14 July 23

Follow Us
Prajwal D'Souza
Prajwal D'Souza

Prajwal is a reporter who covers the politics and current affairs of Karnataka. He is a co-host of Deccan Vahini, a live blogger and has expertise in writing explainers and long-form articles. Contact: prajwal.dsouza@tv9.com

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ