AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು

ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದೆ, ಶನಿವಾರ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು
ಮಳೆ Image Credit source: PTI
ನಯನಾ ರಾಜೀವ್
|

Updated on: Jun 15, 2025 | 7:24 AM

Share

ಬೆಂಗಳೂರು, ಜೂನ್ 15: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆ(Rain)ಯಾಗುತ್ತಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಎಲ್ಲೆಲ್ಲಿ ಮಳೆಯಾಗಿದೆ? ಆಗುಂಬೆ, ಮಂಗಳೂರು, ಉಡುಪಿ, ಉಪ್ಪಿನಂಗಡಿ, ಗೇರುಸೊಪ್ಪ, ಭಟ್ಕಳ, ಪಣಂಬೂರು, ಬೆಳ್ತಂಗಡಿ, ಬಸವನ ಬಾಗೇವಾಡಿಯಲ್ಲಿ ಹೆಚ್ಚು ಮಳೆಯಾಗಿದೆ. ಸಿದ್ದಾಪುರ, ಮಾಣಿ, ಕುಂದಾಪುರ, ಗೋಕರ್ಣ, ಪುತ್ತೂರು, ಕೋಟಾ, ಮೂಡುಬಿದಿರೆ, ಕಾರ್ಕಳ, ಹೊನ್ನಾವರ, ಧರ್ಮಸ್ಥಳ, ಅಂಕೋಲಾ, ಮಂಗಳೂರು, ಕೊಟ್ಟಿಗೆಹಾರ, ಮುಲ್ಕಿ, ಕುಮಟಾ, ಶಿರಾಲಿ, ವಿಜಯಪುರ, ನಿಪ್ಪಾಣಿ, ಶೃಂಗೇರಿ, ಕೊಪ್ಪ, ಭಾಗಮಂಡಲ, ಮಂಕಿಯಲ್ಲಿ ಮಳೆಯಾಗಿದೆ. ಕಾರವಾರ, ಗಬ್ಬೂರು, ಹುಂಚದಕಟ್ಟೆ, ಕಳಸ, ನಾಪೋಕ್ಲು, ಬಾಳೆಹೊನ್ನೂರು, ಬನವಾಸಿ, ಯಲ್ಲಾಪುರ, ಜೋಯಿಡಾ, ಹುಕ್ಕೇರಿ, ಖಾನಾಪುರ, ಬಾದಾಮಿ, ಸೇಡಬಾಳ, ಸೋಮವಾರಪೇಟೆ, ಕೃಷ್ಣರಾಜಸಾಗರ, ಬಂಡೀಪುರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ