AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆ

ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದೆ. ಬೆಂಗಳೂರಿನಲ್ಲಿ ಕೂಡ ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೂ ಮಳೆಯಾಗಿದೆ. ಬೆಂಗಳೂರು ನಗರ, ಚಾಮರಾಜನಗರ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಮಗಳೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೌರಿಬಿದನೂರು, ಅಫ್ಝಲ್​​ಪುರ, ತಾವರಗೇರಾ, ಬರಗೂರು, ಕೆರೂರು, ಕೆಂಭಾವಿ, ಬಿಳಗಿ, ಹುನಗುಂದ, ಚಿಂಚೋಳಿ, ಬೆಳ್ಳಟ್ಟಿ, ಮಂಠಾಳ, ಹೊಸಕೋಟೆ, ಗಂಗಾವತಿ, ಬೆಂಗಳೂರು ನಗರ, ಗಂಗಾಪುರ, ಸಿಂದಗಿ, ಕೂಡಲಸಂಗಮ, ಹರಪನಹಳ್ಳಿ, ದೇವರಹಿಪ್ಪರಗಿ, ತಾಳಿಕೋಟೆ, ನಾಯಕನಹಟ್ಟಿ, ನಾರಾಯಣಪುರ, ಮದ್ದೂರು, ಕಮಲಾಪುರ, ಕಲಬುರಗಿ, ಜಗಳೂರಿನಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Aug 11, 2025 | 7:29 AM

Share

ಬೆಂಗಳೂರು, ಆಗಸ್ಟ್​ 11: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ ಅಲರ್​ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಚಾಮರಾಜನಗರ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಮಗಳೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗೌರಿಬಿದನೂರು, ಅಫ್ಝಲ್​​ಪುರ, ತಾವರಗೇರಾ, ಬರಗೂರು, ಕೆರೂರು, ಕೆಂಭಾವಿ, ಬಿಳಗಿ, ಹುನಗುಂದ, ಚಿಂಚೋಳಿ, ಬೆಳ್ಳಟ್ಟಿ, ಮಂಠಾಳ, ಹೊಸಕೋಟೆ, ಗಂಗಾವತಿ, ಬೆಂಗಳೂರು ನಗರ, ಗಂಗಾಪುರ, ಸಿಂದಗಿ, ಕೂಡಲಸಂಗಮ, ಹರಪನಹಳ್ಳಿ, ದೇವರಹಿಪ್ಪರಗಿ, ತಾಳಿಕೋಟೆ, ನಾಯಕನಹಟ್ಟಿ, ನಾರಾಯಣಪುರ, ಮದ್ದೂರು, ಕಮಲಾಪುರ, ಕಲಬುರಗಿ, ಜಗಳೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

ತಿಪಟೂರು, ಸಿದ್ದಾಪುರ, ಶೋರಾಪುರ, ಮಹಾಲಿಂಗಪುರ, ಲೋಕಾಪುರ, ಮುದಗಲ್, ಕೃಷ್ಣರಾಜಪೇಟೆ, ಕಮ್ಮರಡಿ, ಕೆಆರ್​ ನಗರ, ಹಿರಿಯೂರು, ಗುಳೇಗೋಡು, ಅಜ್ಜಂಪುರ, ಬಸವನಬಾಗೇವಾಡಿ, ಅಥಣಿ, ಆಲಮಟ್ಟಿ, ವಿಜಯಪುರ, ತರೀಕೆರೆ, ಟಿಜಿ ಹಳ್ಳಿ, ಶಿರಹಟ್ಟಿ, ರಬಕವಿ, ನಾಗಮಂಗಲ, ಮಿಡಿಗೇಶಿ, ಮೈಸೂರು, ಕೋಲಾರ, ಜೇವರ್ಗಿ, ಜಯಪುರ, ಹುಕ್ಕೇರಿ, ಗುಬ್ಬಿ, ಧರ್ಮಸ್ಥಳ, ಚಿತ್ತಾಪುರ, ಚಿಕ್ಕೋಡಿ, ಚನ್ನರಾಯಪಟ್ಟಣ, ಚಾಮರಾಜನಗರ, ಭದ್ರಾವತಿ, ಬನವಾಸಿ, ಔರಾದ್​​ನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ