AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಯ ನಡುವೆ ಬದುಕು: ಕೊಚ್ಚಿಹೋಗುತ್ತಿದ್ದ ಎಮ್ಮೆ ರಕ್ಷಿಸಿದ ಯುವಕ; ಹೊಳೆ ದಾಟಿಕೊಂಡು ಶವ ಸಾಗಿಸಿ ಅಂತ್ಯಸಂಸ್ಕಾರ

Karnataka Rains: ಕೊಚ್ಚಿಕೊಂಡು ಹೋಗುತ್ತಿದ್ದ ಎರಡು ಎಮ್ಮೆ ಪೈಕಿ ಒಂದು ಎಮ್ಮೆಯನ್ನ ಎಳೆದು ದಡಕ್ಕೆ ತಂದು ಜೀವ ಉಳಿಸಿದ್ದಾರೆ. ಆನಂದ ಎಮ್ಮೆ ರಕ್ಷಣೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತೇಲಿ ಹೋದ ಇನ್ನೊಂದು ಎಮ್ಮೆಗಾಗಿ ಯುವಕರು ಶೋಧ ನಡೆಸುತ್ತಿದ್ದಾರೆ.

ನೆರೆಯ ನಡುವೆ ಬದುಕು: ಕೊಚ್ಚಿಹೋಗುತ್ತಿದ್ದ ಎಮ್ಮೆ ರಕ್ಷಿಸಿದ ಯುವಕ; ಹೊಳೆ ದಾಟಿಕೊಂಡು ಶವ ಸಾಗಿಸಿ ಅಂತ್ಯಸಂಸ್ಕಾರ
ಕೊಚ್ಚಿಹೋಗುತ್ತಿದ್ದ ಎಮ್ಮೆ ರಕ್ಷಣೆ (ಎಡ), ಶವಸಂಸ್ಕಾರಕ್ಕೆ ಹೊಳೆ ದಾಟಿದ ಜನರು (ಬಲ)
TV9 Web
| Updated By: ganapathi bhat|

Updated on:Jul 25, 2021 | 3:34 PM

Share

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಎರಡು ಎಮ್ಮೆಗಳು ಕೊಚ್ಚಿಹೋಗುತ್ತಿದ್ದ ಘಟನೆ ಸಂಭವಿಸಿದೆ. ಈ ಮಧ್ಯೆ, ಒಂದು ಎಮ್ಮೆಯನ್ನು ಯುವಕನೋರ್ವ ರಕ್ಷಣೆ ಮಾಡಿ ಮಾನವೀಯತೆ ತೋರಿದ್ದಾರೆ, ಸಾಹಸ ಮೆರೆದಿದ್ದಾರೆ. ಯುವಕ, ತನ್ನ ಪ್ರಾಣ ಲೆಕ್ಕಿಸದೆ ಎಮ್ಮೆಯನ್ನು ಕಾಪಾಡಿದ್ದಾರೆ. ಸತ್ತಿ ಗ್ರಾಮದ ಬಳಿ ಆನಂದ ಚಿನಗುಂಡಿ ಎಂಬ ಯುವಕ ಎಮ್ಮೆ ಕಾಪಾಡಿದ್ದಾರೆ.

ನದಿ ದಂಡೆ ಮೇಲೆ ಮೇಯುವಾಗ ಏಕಾಏಕಿ ನೀರು ಬಂದು ಎರಡು ಎಮ್ಮೆಗಳು ಕೊಚ್ಚಿಕೊಂಡು ಹೋಗುತ್ತಿದ್ದವು. ಸತ್ತಿ ಗ್ರಾಮದ ಮನೋಜ ಗಂಗಪ್ಪನವರ ಎಂಬುವವರಿಗೆ ಸೇರಿದ್ದ ಎಮ್ಮೆಗಳು ನೀರಿನ ರಭಸಕ್ಕೆ ಕೊಚ್ಚಿಹೋಗುತ್ತಿದ್ದವು. ಕೂಡಲೇ ತನ್ನ ಪ್ರಾಣದ ಹಂಗು ತೊರೆದು ನದಿಗೆ ಹಾರಿದ ಯುವಕ ಆನಂದ ಚಿನಗುಂಡಿ, ಒಂದು ಎಮ್ಮೆಯನ್ನು ರಕ್ಷಣೆ ಮಾಡಿದ್ದಾರೆ.

ಕೊಚ್ಚಿಕೊಂಡು ಹೋಗುತ್ತಿದ್ದ ಎರಡು ಎಮ್ಮೆ ಪೈಕಿ ಒಂದು ಎಮ್ಮೆಯನ್ನ ಎಳೆದು ದಡಕ್ಕೆ ತಂದು ಜೀವ ಉಳಿಸಿದ್ದಾರೆ. ಆನಂದ ಎಮ್ಮೆ ರಕ್ಷಣೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತೇಲಿ ಹೋದ ಇನ್ನೊಂದು ಎಮ್ಮೆಗಾಗಿ ಯುವಕರು ಶೋಧ ನಡೆಸುತ್ತಿದ್ದಾರೆ.

ಕಲಬುರಗಿ: ನೆರೆಯ ನಡುವೆ ಅಂತ್ಯಸಂಸ್ಕಾರ ತುಂಬಿ ಹರಿಯುವ ಹಳ್ಳ ದಾಟಿಕೊಂಡು ಹೋಗಿ ಶವಸಂಸ್ಕಾರ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಚಿಂಚೋಳಿ(H) ಗ್ರಾಮದಲ್ಲಿ ನಿನ್ನೆ (ಜುಲೈ 24) ನಡೆದಿದೆ. ಮುಲ್ಲಾಮಾರಿ ಹಳ್ಳ ದಾಟಿಕೊಂಡು ಜೀವದ ಹಂಗು ತೊರೆದು ಗ್ರಾಮಸ್ಥರು ಶವಸಂಸ್ಕಾರ ಮಾಡಿದ್ದಾರೆ.

ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಗ್ರಾಮಸ್ಥರು ಹಳ್ಳ ದಾಟಿಕೊಂಡು ಹೋಗಿದ್ದಾರೆ. ತುಂಬಿ ಹರಿಯುವ ಹಳ್ಳದಲ್ಲಿಯೇ ಗ್ರಾಮಸ್ಥರು ಶವ ಹೊತ್ತೊಯ್ದಿದ್ದಾರೆ. ಮಲ್ಲಿಕಾರ್ಜುನ ಹೂಗಾರ (50) ಅನ್ನುವ ವ್ಯಕ್ತಿಯ ಮೃತದೇಹವನ್ನು ಮಲ್ಲಿಕಾರ್ಜುನ ಅವರ ಕೃಷಿ ಜಮೀನಿಗೆ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

ದಾವಣಗೆರೆ: ಶಾಶ್ವತ ಪರಿಹಾರಕ್ಕೆ ಮಹಿಳೆ ಮನವಿ ಸಚಿವರು, ಶಾಸಕರು, ಅಧಿಕಾರಿಗಳು ಎಲ್ಲಾ ಬಂದು ಹೋದ್ರು, ಆದರೆ ಯಾರಿಂದಲೂ ನಮಗೆ ಯಾವುದೇ ಉಪಯೋಗವಾಗಿಲ್ಲ. ನಮ್ಮ ಸಮಸ್ಯೆ ಬಗೆಹರಿಸುವ ಕೆಲಸವನ್ನು ಯಾರೂ ಮಾಡಿಲ್ಲ. ಪ್ರವಾಹ ಬಂದರೆ ತುಂಗಭದ್ರಾ ನದಿ ನೀರು ಮನೆಗೆ ನುಗ್ಗುತ್ತೆ. ಮನೆಗೆ ನೀರು ನುಗ್ಗಿದಾಗ ಅಧಿಕಾರಿಗಳು ಬರುತ್ತಾರೆ. ಮನೆಯಿಂದ ಕಾಳಜಿ ಕೇಂದ್ರಕ್ಕೆ ನಮ್ಮನ್ನು ಕರೆದೊಯ್ಯುತ್ತಾರೆ. 2 ದಿನ ಕಾಳಜಿ ಕೇಂದ್ರದಲ್ಲಿಟ್ಟುಕೊಂಡು ವಾಪಸ್ ಕಳಿಸ್ತಾರೆ ಎಂದು ಟಿವಿ9 ಬಳಿ ನೆರೆ ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಳೆ ಕಡಿಮೆಯಾಗಿದೆ ಎಂದು ಹೇಳಿ ವಾಪಸ್ ಕಳಿಸ್ತಾರೆ. ನಾವು ಪುನಃ ಅದೇ ಮನೆಗೆ ಬಂದು ಸ್ವಚ್ಛ ಮಾಡಿಕೊಳ್ಳಬೇಕು. ನಾವು ಇರುವುದಕ್ಕೆ ಪರ್ಯಾಯ ವ್ಯವಸ್ಥೆಯನ್ನ ಕಲ್ಪಿಸಿಲ್ಲ. ಹರಿಹರದಲ್ಲಿ ಕೆಹೆಚ್‌ಬಿ ಕಾಲೋನಿಗೆ ಜಮೀನು ಸಿಗುತ್ತದೆ. ನಮ್ಮಂತಹ ಬಡವರಿಗೆ ನೀಡುವುದಕ್ಕೆ ಮನೆ ಸಿಗುವುದಿಲ್ಲ. ನಮ್ಮ ಸಮಸ್ಯೆಯನ್ನು ಎಲ್ಲರಿಗೂ ಹೇಳಿ ಸಾಕಾಗಿ ಹೋಗಿದೆ. ದಯವಿಟ್ಟು ನಮಗೆ ಶಾಶ್ವತ ಪರಿಹಾರವನ್ನು ಕಲ್ಪಿಸಿಕೊಡಿ ಎಂದು ದಾವಣಗೆರೆ ಜಿಲ್ಲೆಯ ಹರಿಹರದ ಗಂಗಾನಗರದಲ್ಲಿ ನೆರೆ ಸಂತ್ರಸ್ತ ಮಹಿಳೆ ಕೇಳಿಕೊಂಡಿದ್ದಾರೆ.

ಕಾರವಾರ: ನೆರೆ ಸಂತ್ರಸ್ತೆ ಅಳಲು ಗಂಗಾವಳಿ ನದಿ ಪ್ರವಾಹದಿಂದ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ಎಲ್ಲ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ನನ್ನ ಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈಗ ಮನೆ ಇಲ್ಲದೆ ದಿಕ್ಕು ತೋಚದ ಸ್ಥಿತಿಯಲ್ಲಿದ್ದೇನೆ. ಮನೆಯಲ್ಲಿ ಚಿಕ್ಕ ಮಕ್ಕಳಿದ್ದಾರೆ, ತಿನ್ನಲು ಅನ್ನವೂ ಇಲ್ಲ. ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಪ್ರೇಮಾ ಗೌಡರ್ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rains: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ; ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ, ಕಾಂಗ್ರೆಸ್ ನಾಯಕರ ಭೇಟಿ, ಪರಿಶೀಲನೆ

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

(Karnataka Rains Life amid Flood in many places of State Belagavi Kalaburgi Uttara Kannada)

Published On - 3:32 pm, Sun, 25 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ