Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka rains: ಮಂಗಳೂರಿನಲ್ಲಿ ಕೊನೆಗೂ ಬಂತು ಮಳೆ; ಕೊಪ್ಪಳ, ಗದಗ ಸೇರಿ ರಾಜ್ಯದ ಹಲವೆಡೆ ವರ್ಷಧಾರೆ

ಕೊನೆಗೂ ಮಂಗಳೂರಿಗೆ ವರುಣನ ಸಿಂಚನವಾಗಿದ್ದು, ಸಂಜೆ ವೇಳೆಗೆ ನಗರದಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗರು ತುಸು ನಿರಾಳರಾಗುವಂತಾಗಿದೆ.

Follow us
Ganapathi Sharma
|

Updated on:Jun 08, 2023 | 8:57 PM

ಬೆಂಗಳೂರು: ನೀರಿನ ಅಭಾವದಿಂದ ಕಂಗೆಟ್ಟಿದ್ದ ಮಂಗಳೂರಿನಲ್ಲಿ ಹಾಗೂ ಕೊಪ್ಪಳ, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ಗುರುವಾರ ಸಂಜೆ (Karnataka Rains) ಮಳೆಯಾಗಿದೆ. ಕೊನೆಗೂ ಮಂಗಳೂರಿಗೆ ವರುಣನ ಸಿಂಚನವಾಗಿದ್ದು, ಸಂಜೆ ವೇಳೆಗೆ ನಗರದಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗರು ತುಸು ನಿರಾಳರಾಗುವಂತಾಗಿದೆ. ಮಂಗಳೂರಿನ ನದಿಗಳಲ್ಲಿ ನೀರು ಬತ್ತಿಹೋಗಿ ನಗರದಲ್ಲಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹಾಹಾಕಾರ ಸೃಷ್ಟಿಯಾಗಿತ್ತು. ಪ್ರಸಿದ್ಧ ಯಾತ್ರಾಸ್ಥಳ ಕಟೀಲು ದುರ್ಗಾಪರಮೇಶ್ವರಿ ದೇಗುಲದಲ್ಲಿಯೂ ನೀರಿಗೆ ತತ್ವಾರ ಉಂಟಾಗಿತ್ತು.

ಮತ್ತೊಂದೆಡೆ, ಉತ್ತರ ಕರ್ನಾಟಕ ಭಾಗದ ಕೊಪ್ಪಳ ನಗರದಲ್ಲಿಯೂ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ನಗರದ ಹೊರವಲಯದಲ್ಲಿರುವ ವಿಶ್ವತೇಜ ಮೋಟಾರ್ಸ್ ಬಳಿ ಮರ ಬಿದ್ದು ಡಸ್ಟರ್‌ ಕಾರಿಗೆ ಹಾನಿಯಾಗಿದೆ. ವಿಶ್ವತೇಜ ಮೋಟರ್ಸ್​​​ನಲ್ಲಿ ಸರ್ವಿಸ್​​ಗಾಗಿ ಕಾರು ನಿಲ್ಲಿಸಲಾಗಿತ್ತು.

ಗದಗ-ಬೆಟಗೇರಿ ಅವಳಿ ನಗರ ಸೇರಿ ಹಲವಡೆ ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಪರಿಣಾಮವಾಗಿ ಮುಂಗಾರು ಮಳೆಗಾಗಿ‌ ಕಾಯುತ್ತಿರೋ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸುಮಾರು ಅರ್ಧ ತಾಸು ಮಳೆಯಾಗಿದೆ.

ಬಾಗಲಕೋಟೆಯ ಇಳಕಲ್ ನಗರದಲ್ಲಿ ಕೂಡ ಸುಮಾರು ಅರ್ಧ ಗಂಟೆವರೆಗೆ ಮಳೆಯಾಗಿದೆ. ಇದರಿಂದ ಇಳಕಲ್ ಭಾಗದ ರೈತರು ಸಂತಸಗೊಂಡಿದ್ದಾರೆ.

ಬಿಸಿಲಿನ ತಾಪಕ್ಕೆ ಬೆಂದಿದ್ದ ಇಳೆಗೆ ತಂಪೆರೆದ ಮಳೆರಾಯ.. ಇಳಕಲ್ ನಗರದಲ್ಲಿ ಭಾರಿ ಮಳೆ.. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರ.. ಮಳೆಯಿಂದ ಇಳಕಲ್ ಭಾಗದ ರೈತರಲ್ಲಿ ಸಂತಸ.. ಬಿಸಿಲಿನಿಂದ ಕಂಗೆಟ್ಟವರಿಗೆ ತಂಪೆರೆದ ವರುಣ..
0 seconds of 1 minute, 48 secondsVolume 90%
Press shift question mark to access a list of keyboard shortcuts
00:00
01:48
01:48
 
ಈ ಮಧ್ಯೆ, ಸಾಮಾನ್ಯಕ್ಕಿಂತ ಒಂದು ವಾರ ತಡವಾಗಿ ಮುಂಗಾರು ಮಾರುತ ಕೇರಳ ಪ್ರವೇಶಿಸಿದ್ದು, ಮುಂದಿನ 24ರಿಂದ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಓದಿ: Karnataka Rains: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಕರಾವಳಿ ಭಾಗದಲ್ಲಿ 3 ದಿನ ಕಟ್ಟೆಚ್ಚರ, ಯೆಲ್ಲೋ ಅಲರ್ಟ್​​ ಘೋಷಣೆ

ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮುಂಗಾರು ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್​ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿರುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:57 pm, Thu, 8 June 23

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್