AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka rains: ಮಂಗಳೂರಿನಲ್ಲಿ ಕೊನೆಗೂ ಬಂತು ಮಳೆ; ಕೊಪ್ಪಳ, ಗದಗ ಸೇರಿ ರಾಜ್ಯದ ಹಲವೆಡೆ ವರ್ಷಧಾರೆ

ಕೊನೆಗೂ ಮಂಗಳೂರಿಗೆ ವರುಣನ ಸಿಂಚನವಾಗಿದ್ದು, ಸಂಜೆ ವೇಳೆಗೆ ನಗರದಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗರು ತುಸು ನಿರಾಳರಾಗುವಂತಾಗಿದೆ.

ಗಣಪತಿ ಶರ್ಮಾ
|

Updated on:Jun 08, 2023 | 8:57 PM

Share

ಬೆಂಗಳೂರು: ನೀರಿನ ಅಭಾವದಿಂದ ಕಂಗೆಟ್ಟಿದ್ದ ಮಂಗಳೂರಿನಲ್ಲಿ ಹಾಗೂ ಕೊಪ್ಪಳ, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ಗುರುವಾರ ಸಂಜೆ (Karnataka Rains) ಮಳೆಯಾಗಿದೆ. ಕೊನೆಗೂ ಮಂಗಳೂರಿಗೆ ವರುಣನ ಸಿಂಚನವಾಗಿದ್ದು, ಸಂಜೆ ವೇಳೆಗೆ ನಗರದಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗರು ತುಸು ನಿರಾಳರಾಗುವಂತಾಗಿದೆ. ಮಂಗಳೂರಿನ ನದಿಗಳಲ್ಲಿ ನೀರು ಬತ್ತಿಹೋಗಿ ನಗರದಲ್ಲಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹಾಹಾಕಾರ ಸೃಷ್ಟಿಯಾಗಿತ್ತು. ಪ್ರಸಿದ್ಧ ಯಾತ್ರಾಸ್ಥಳ ಕಟೀಲು ದುರ್ಗಾಪರಮೇಶ್ವರಿ ದೇಗುಲದಲ್ಲಿಯೂ ನೀರಿಗೆ ತತ್ವಾರ ಉಂಟಾಗಿತ್ತು.

ಮತ್ತೊಂದೆಡೆ, ಉತ್ತರ ಕರ್ನಾಟಕ ಭಾಗದ ಕೊಪ್ಪಳ ನಗರದಲ್ಲಿಯೂ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ನಗರದ ಹೊರವಲಯದಲ್ಲಿರುವ ವಿಶ್ವತೇಜ ಮೋಟಾರ್ಸ್ ಬಳಿ ಮರ ಬಿದ್ದು ಡಸ್ಟರ್‌ ಕಾರಿಗೆ ಹಾನಿಯಾಗಿದೆ. ವಿಶ್ವತೇಜ ಮೋಟರ್ಸ್​​​ನಲ್ಲಿ ಸರ್ವಿಸ್​​ಗಾಗಿ ಕಾರು ನಿಲ್ಲಿಸಲಾಗಿತ್ತು.

ಗದಗ-ಬೆಟಗೇರಿ ಅವಳಿ ನಗರ ಸೇರಿ ಹಲವಡೆ ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಪರಿಣಾಮವಾಗಿ ಮುಂಗಾರು ಮಳೆಗಾಗಿ‌ ಕಾಯುತ್ತಿರೋ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸುಮಾರು ಅರ್ಧ ತಾಸು ಮಳೆಯಾಗಿದೆ.

ಬಾಗಲಕೋಟೆಯ ಇಳಕಲ್ ನಗರದಲ್ಲಿ ಕೂಡ ಸುಮಾರು ಅರ್ಧ ಗಂಟೆವರೆಗೆ ಮಳೆಯಾಗಿದೆ. ಇದರಿಂದ ಇಳಕಲ್ ಭಾಗದ ರೈತರು ಸಂತಸಗೊಂಡಿದ್ದಾರೆ. ಈ ಮಧ್ಯೆ, ಸಾಮಾನ್ಯಕ್ಕಿಂತ ಒಂದು ವಾರ ತಡವಾಗಿ ಮುಂಗಾರು ಮಾರುತ ಕೇರಳ ಪ್ರವೇಶಿಸಿದ್ದು, ಮುಂದಿನ 24ರಿಂದ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಓದಿ: Karnataka Rains: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಕರಾವಳಿ ಭಾಗದಲ್ಲಿ 3 ದಿನ ಕಟ್ಟೆಚ್ಚರ, ಯೆಲ್ಲೋ ಅಲರ್ಟ್​​ ಘೋಷಣೆ

ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮುಂಗಾರು ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್​ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿರುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:57 pm, Thu, 8 June 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್