Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಜೋರಾಗಲಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ
ಮಳೆImage Credit source: PTI
Follow us
|

Updated on: Sep 25, 2024 | 7:38 AM

ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.

ಹೊನ್ನಾವರ, ಗೋಕರ್ಣ, ಸಿದ್ದಾಪುರ, ಅಥಣಿ, ವಿಜಯಪುರ, ಮಂಕಿ, ಶಿರಾಲಿ, ಕುಂದಾಪುರ, ಬಸವನ ಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಕೋಟಾ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರ, ಮುದಗಲ್, ಕವಡಿಮಟ್ಟಿ, ಧಾರವಾಡ, ಜಯಪುರ, ವೈಎನ್ ಹೊಸಕೋಟೆ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಬೆಳ್ತಂಗಡಿ, ಮುಲ್ಕಿ, ತಾಳಿಕೋಟೆ, ಸೇಡಂ, ಕಕ್ಕೇರಿ, ನಾರಾಯಣಪುರ, ಸೇಡಬಾಳ, ಕದ್ರಾ, ಹಳಿಯಾಳ, ಕಳಸ, ಧಾರವಾಡ, ಕುರ್ಡಿ, ಲಕ್ಷ್ಮೇಶ್ವರ, ಸೈದಾಪುರ, ಕೊಪ್ಪ, ತಿಪಟೂರು, ಬಾಳೆಹೊನ್ನೂರು, ಹಗರಿಬೊಮ್ಮನಹಳ್ಳಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ