AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ

ಕಾಂತಾರ ಸಿನಿಮಾ ನೋಡಲೆಂದು ಹೋಗಿದ್ದ ಇಬ್ಬರು ನಾಲೆಯಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. ದನ ಮೇಯಿಸಲು ಹೋಗಿದ್ದವರು, ಆಟವಾಡಲು ಹೋಗಿದ್ದ ಮಕ್ಕಳು, ಹೀಗೆ ಒಟ್ಟಾರೆಯಾಗಿ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ನೀರುಪಾಲಾಗಿ 6 ಮಂದಿ ಇಹಲೋಕ ತ್ಯಜಿಸಿದ್ದಾರೆ.

ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ
ರಾಯಚೂರಿನಲ್ಲಿ ಯುವಕರು ಕೊಚ್ಚಿಹೋಗಿದ್ದ ನಾಲೆ
ಗಣಪತಿ ಶರ್ಮಾ
|

Updated on: Oct 06, 2025 | 7:36 AM

Share

ಬೆಂಗಳೂರು, ಅಕ್ಟೋಬರ್ 6: ಕಾಂತಾರ ಸಿನಿಮಾ ಎಲ್ಲೆಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲರೂ ನಾ ಮುಂದು ತಾ ಮುಂದು ಎಂದು ಸಿನಿಮಾ ವೀಕ್ಷಣೆಗೆ ಲಗ್ಗೆ ಇಡುತ್ತಿದ್ದಾರೆ. ರಾಯಚೂರಿನಲ್ಲಿ (Raichur) ಕಾಂತಾರ ಚಾಪ್ಟರ್ 1 ಚಿತ್ರ ನೋಡಲು ಹೋಗಿದ್ದ ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ರಾಯಚೂರು ಜಿಲ್ಲೆ ಮುದಗಲ್ ಪಟ್ಟಣದ ವೆಂಕಟೇಶ, ಯಲ್ಲಾಲಿಂಗ ಭಾನುವಾರ ಕಾಂತಾರ ಚಿತ್ರ ನೋಡಲು ಹೋಗಿದ್ದರು. ಮಧ್ಯಾಹ್ನದ ಶೋಗೆ ಚಿತ್ರದ ಟಿಕೆಟ್ ಸಿಗದಿದ್ದರಿಂದ ನಾಲೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ, ನಾಲೆಯಲ್ಲಿ ಯಲ್ಲಾಲಿಂಗ ಕೊಚ್ಚಿಹೋಗಿದ್ದಾನೆ. ಆತ ಕೊಚ್ಚಿಕೊಂಡು ಹೋಗುವುದನ್ನು ಕಂಡು ಆತನನ್ನು ರಕ್ಷಿಸಲು ಹೋಗಿ ವೆಂಕಟೇಶ ಕೂಡ ನೀರುಪಾಲಾಗಿದ್ದಾನೆ.

ಕೃಷಿ ಹೊಂಡದಲ್ಲಿ ಸಹೋದರಿಯರ ಶವ ಪತ್ತೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹರ್ಷಪುರ ನಿವಾಸಿ ಗಂಗಮ್ಮ ಎಂಬವರು ಸಹೋದರಿ ಶಕುಂತಲಾ ಜೊತೆ ದನ ಮೇಯಿಸಲು ಹೋಗಿದ್ದರು. ಭಾನುವಾರ ಸಂಜೆಯಾದರೂ ಇಬ್ಬರೂ ಮನೆಗೆ ಮರಳಿರಲಿಲ್ಲ. ಬಳಿಕ ಸಂಬಂಧಿಕರು ಎಲ್ಲೆಡೆ ಹುಡುಕಾಡಿದ್ದಾರೆ. ಕೃಷಿ ಹೊಂಡದ ಬಳಿ‌ ಅಕ್ಕತಂಗಿಯರ‌‌ ಚಪ್ಪಲಿ ಪತ್ತೆ ಆಗಿದ್ದು, ಶೋಧ ನಡೆಸಿದಾಗ ಕೃಷಿಹೊಂಡದಲ್ಲಿ ಇಬ್ಬರ ಶವ ಪತ್ತೆ ಆಗಿದೆ. ಸಾವಿನ ಸುತ್ತ ಹಲವು ಅನುಮಾನಗಳು ಸಹ ಮೂಡಿವೆ.

ಬಾಗಲಕೋಟೆ ಜಿಲ್ಲೆ ತಿಮ್ಮಾಪುರದ ಚಿಚಖಂಡಿ ಬಿ.ಕೆ ಗ್ರಾಮದ ಬಳಿ ದಸರಾ ಹಬ್ಬದಂದು ಘಟಪ್ರಭಾ ನದಿಗೆ ಸ್ನಾನಕ್ಕೆ ಹೋಗಿದ್ದ ಸಚಿನ್ ಮಾದರ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಬನ್ನಮ್ಮ ದೇವಿ ಸ್ನಾನಕ್ಕೆಂದು ಸಚಿನ್ ಮಾದರ ಘಟಪ್ರಭಾ ನದಿಗೆ ಇಳಿದಿದ್ದ. ಬಳಿಕ ನೀರುಪಾಲಾಗಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಸಚಿನ್ ಮಾದರನಿಗಾಗಿ ಶೋಧ ನಡೆಸುತ್ತಿದ್ದರು. ಇದೀಗ ಮೂರು ದಿನಗಳ ಬಳಿಕ ಸೇತುವೆ ಬಳಿ ಸಚಿನ್ ಶವ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನು, ಕೊಡಗು ಜಿಲ್ಲೆಯ ಹುದುಗೂರು ಗ್ರಾಮದ ಯುವಕ ಸಂತೋಷ್‌ ಹಾರಂಗಿ ನಾಲೆಯಲ್ಲಿ ಈಜಲು ತೆರಳಿದ್ದ. ನೀರಿನ ಸುಳಿ ಹೆಚ್ಚಾಗಿ ಮುಳುಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.11ರವರೆಗೂ ಮಳೆ

ಒಟ್ಟಾರೆಯಾಗಿ ರಾಜ್ಯದಾದ್ಯಂತ ಪ್ರತ್ಯೇಕ ಅವಘಢಗಳಲ್ಲಿ 6 ಮಂದಿ ನೀರುಪಾಲಾಗಿದ್ದಾರೆ. ಮತ್ತೊಂದೆಡೆ, ಮನೆಗೆ ಆಧಾರವಾಗಬೇಕಿದ್ದ ಮಕ್ಕಳನ್ನು ಕಳೆದುಕೊಂಡು ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿ ಹೋಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ