AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ

ಕಾಂತಾರ ಸಿನಿಮಾ ನೋಡಲೆಂದು ಹೋಗಿದ್ದ ಇಬ್ಬರು ನಾಲೆಯಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. ದನ ಮೇಯಿಸಲು ಹೋಗಿದ್ದವರು, ಆಟವಾಡಲು ಹೋಗಿದ್ದ ಮಕ್ಕಳು, ಹೀಗೆ ಒಟ್ಟಾರೆಯಾಗಿ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ನೀರುಪಾಲಾಗಿ 6 ಮಂದಿ ಇಹಲೋಕ ತ್ಯಜಿಸಿದ್ದಾರೆ.

ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ
ರಾಯಚೂರಿನಲ್ಲಿ ಯುವಕರು ಕೊಚ್ಚಿಹೋಗಿದ್ದ ನಾಲೆ
Ganapathi Sharma
|

Updated on: Oct 06, 2025 | 7:36 AM

Share

ಬೆಂಗಳೂರು, ಅಕ್ಟೋಬರ್ 6: ಕಾಂತಾರ ಸಿನಿಮಾ ಎಲ್ಲೆಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲರೂ ನಾ ಮುಂದು ತಾ ಮುಂದು ಎಂದು ಸಿನಿಮಾ ವೀಕ್ಷಣೆಗೆ ಲಗ್ಗೆ ಇಡುತ್ತಿದ್ದಾರೆ. ರಾಯಚೂರಿನಲ್ಲಿ (Raichur) ಕಾಂತಾರ ಚಾಪ್ಟರ್ 1 ಚಿತ್ರ ನೋಡಲು ಹೋಗಿದ್ದ ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ರಾಯಚೂರು ಜಿಲ್ಲೆ ಮುದಗಲ್ ಪಟ್ಟಣದ ವೆಂಕಟೇಶ, ಯಲ್ಲಾಲಿಂಗ ಭಾನುವಾರ ಕಾಂತಾರ ಚಿತ್ರ ನೋಡಲು ಹೋಗಿದ್ದರು. ಮಧ್ಯಾಹ್ನದ ಶೋಗೆ ಚಿತ್ರದ ಟಿಕೆಟ್ ಸಿಗದಿದ್ದರಿಂದ ನಾಲೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ, ನಾಲೆಯಲ್ಲಿ ಯಲ್ಲಾಲಿಂಗ ಕೊಚ್ಚಿಹೋಗಿದ್ದಾನೆ. ಆತ ಕೊಚ್ಚಿಕೊಂಡು ಹೋಗುವುದನ್ನು ಕಂಡು ಆತನನ್ನು ರಕ್ಷಿಸಲು ಹೋಗಿ ವೆಂಕಟೇಶ ಕೂಡ ನೀರುಪಾಲಾಗಿದ್ದಾನೆ.

ಕೃಷಿ ಹೊಂಡದಲ್ಲಿ ಸಹೋದರಿಯರ ಶವ ಪತ್ತೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹರ್ಷಪುರ ನಿವಾಸಿ ಗಂಗಮ್ಮ ಎಂಬವರು ಸಹೋದರಿ ಶಕುಂತಲಾ ಜೊತೆ ದನ ಮೇಯಿಸಲು ಹೋಗಿದ್ದರು. ಭಾನುವಾರ ಸಂಜೆಯಾದರೂ ಇಬ್ಬರೂ ಮನೆಗೆ ಮರಳಿರಲಿಲ್ಲ. ಬಳಿಕ ಸಂಬಂಧಿಕರು ಎಲ್ಲೆಡೆ ಹುಡುಕಾಡಿದ್ದಾರೆ. ಕೃಷಿ ಹೊಂಡದ ಬಳಿ‌ ಅಕ್ಕತಂಗಿಯರ‌‌ ಚಪ್ಪಲಿ ಪತ್ತೆ ಆಗಿದ್ದು, ಶೋಧ ನಡೆಸಿದಾಗ ಕೃಷಿಹೊಂಡದಲ್ಲಿ ಇಬ್ಬರ ಶವ ಪತ್ತೆ ಆಗಿದೆ. ಸಾವಿನ ಸುತ್ತ ಹಲವು ಅನುಮಾನಗಳು ಸಹ ಮೂಡಿವೆ.

ಬಾಗಲಕೋಟೆ ಜಿಲ್ಲೆ ತಿಮ್ಮಾಪುರದ ಚಿಚಖಂಡಿ ಬಿ.ಕೆ ಗ್ರಾಮದ ಬಳಿ ದಸರಾ ಹಬ್ಬದಂದು ಘಟಪ್ರಭಾ ನದಿಗೆ ಸ್ನಾನಕ್ಕೆ ಹೋಗಿದ್ದ ಸಚಿನ್ ಮಾದರ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಬನ್ನಮ್ಮ ದೇವಿ ಸ್ನಾನಕ್ಕೆಂದು ಸಚಿನ್ ಮಾದರ ಘಟಪ್ರಭಾ ನದಿಗೆ ಇಳಿದಿದ್ದ. ಬಳಿಕ ನೀರುಪಾಲಾಗಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಸಚಿನ್ ಮಾದರನಿಗಾಗಿ ಶೋಧ ನಡೆಸುತ್ತಿದ್ದರು. ಇದೀಗ ಮೂರು ದಿನಗಳ ಬಳಿಕ ಸೇತುವೆ ಬಳಿ ಸಚಿನ್ ಶವ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನು, ಕೊಡಗು ಜಿಲ್ಲೆಯ ಹುದುಗೂರು ಗ್ರಾಮದ ಯುವಕ ಸಂತೋಷ್‌ ಹಾರಂಗಿ ನಾಲೆಯಲ್ಲಿ ಈಜಲು ತೆರಳಿದ್ದ. ನೀರಿನ ಸುಳಿ ಹೆಚ್ಚಾಗಿ ಮುಳುಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.11ರವರೆಗೂ ಮಳೆ

ಒಟ್ಟಾರೆಯಾಗಿ ರಾಜ್ಯದಾದ್ಯಂತ ಪ್ರತ್ಯೇಕ ಅವಘಢಗಳಲ್ಲಿ 6 ಮಂದಿ ನೀರುಪಾಲಾಗಿದ್ದಾರೆ. ಮತ್ತೊಂದೆಡೆ, ಮನೆಗೆ ಆಧಾರವಾಗಬೇಕಿದ್ದ ಮಕ್ಕಳನ್ನು ಕಳೆದುಕೊಂಡು ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿ ಹೋಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ