AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ರಂಗು ಹೆಚ್ಚಾಗುತ್ತಿದೆ. ಈ ಬಾರಿ ತೆರೆದ ಜಮೀನಿನಲ್ಲಿ ಬೆಳೆದ ಹೂವುಗಳು ಮಳೆಯಿಂದಾಗಿ ಹಾನಿಗೊಳಗಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ರೈತರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಇದ್ದಾರೆ.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 04, 2022 | 12:57 PM

Share

ಬೆಂಗಳೂರು ಗ್ರಾಮಾಂತರ: ಮಳೆಯ ಆರ್ಭಟದ ನಡುವೆ ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ತಯಾರಿಗಳು ನಡೆಯುತ್ತಿವೆ. ಈ ನಡುವೆ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ನಾಗರ ಪಂಚಮಿಯ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗಲಿದ್ದು, ರೈತರು ಹೂವುಗಳನ್ನು ಬೆಳೆದಿದ್ದಾರೆ. ಸದ್ಯ ರೈತರ ತೋಟದಲ್ಲಿ  ಬಣ್ಣಬಣ್ಣದ ಹೂವುಗಳು ಅರಳಲು ಆರಂಭವಾಗಿವೆ. ಆದರೆ ಮಳೆರಾಯನ ಅಬ್ಬರಕ್ಕೆ ಹೂವಿನ ತೋಟಗಳಿಗೆ ಹಾನಿ ಉಂಟಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ನಾಗರಪಂಚಮಿ ಹಬ್ಬವನ್ನು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನೇಕ ಹಿಂದೂ ಹಬ್ಬಗಳು ಬರಲಿವೆ. ಈ ಎಲ್ಲಾ ಹಬ್ಬಗಳಿಗೆ ಹೂವುಗಳು ಅವಶ್ಯಕವಾಗಿರುವುದರಿಂದ ಹೂವುಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಬೇಡಿಕೆ ವ್ಯಕ್ತವಾಗಿದೆ. ಆಗಸ್ಟ್ 12ರಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹೂಗಳು ಹೆಚ್ಚು ಮಾರಾಟವಾಗುವ ಹಿನ್ನೆಲೆ ಪಾಲಿಹೌಸ್​ನಲ್ಲಿ ಬೆಳೆದ ಅಲಂಕಾರಿಕ ಹೂಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಅವುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ದೊಡ್ಡಬಳ್ಳಾಪುರ ಸುತ್ತಾಮುತ್ತ ಇರುವ ಎಕರೆಗಟ್ಟಲೆ ಪ್ರದೇಶಗಳಲ್ಲಿ ಗುಲಾಬಿ ಸೇರಿದಂತೆ ಅನೇಕ ರೀತಿಯ ಅಲಂಕಾರಿಕ ಹೂವುಗಳನ್ನು ಬೆಳೆಯಲಾಗಿದ್ದು, ಬೆಂಗಳೂರು ನಗರ, ಹೈದರಾಬಾದ್, ದೆಹಲಿ ಸೇರಿದಂತೆ ಅನೇಕ ಕಡೆಗಳಿಂದ ದೊಡ್ಡಬಳ್ಳಾಪುರದಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗಿದೆ.

ನೂರಾರು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಪಾಲಿಹೌಸ್​​ನಲ್ಲಿ ರೈತರು ಹೂಗಳನ್ನ ಬೆಳೆದಿದ್ದು, ಬಣ್ಣ ಬಣ್ಣದ ಹೂವುಗಳನ್ನು ಮಾರುಕಟ್ಟೆಗೆ ರವಾನಿಸಲಾಗುತ್ತಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾದ ಹಿನ್ನೆಲೆ ಪ್ರತಿನಿತ್ಯ ದಿನಕ್ಕೆ ಒಂದು ಪಾಲಿಹೌಸ್​ನಿಂದ 30ಸಾವಿರಕ್ಕೂ ಹೆಚ್ಚು ಬಂಚ್​ಗಳನ್ನು ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ತೆರೆದ ಪ್ರದೇಶದಲ್ಲಿ ಹೂವುಗಳನ್ನು ಬೆಳೆದ ರೈತರಿಗೆ ನಷ್ಟವಾಗಿದ್ದು, ಪಾಲಿಹೌಸ್​ನಲ್ಲಿ ಬೆಳೆದ ಹೂವಿನ ರೈತರು ಹೆಚ್ಚಿನ ಲಾಭದ ನಿರೀಕ್ಷಿಸುತ್ತಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ