AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ರಂಗು ಹೆಚ್ಚಾಗುತ್ತಿದೆ. ಈ ಬಾರಿ ತೆರೆದ ಜಮೀನಿನಲ್ಲಿ ಬೆಳೆದ ಹೂವುಗಳು ಮಳೆಯಿಂದಾಗಿ ಹಾನಿಗೊಳಗಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ರೈತರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಇದ್ದಾರೆ.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on: Aug 04, 2022 | 12:57 PM

Share

ಬೆಂಗಳೂರು ಗ್ರಾಮಾಂತರ: ಮಳೆಯ ಆರ್ಭಟದ ನಡುವೆ ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ತಯಾರಿಗಳು ನಡೆಯುತ್ತಿವೆ. ಈ ನಡುವೆ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ನಾಗರ ಪಂಚಮಿಯ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗಲಿದ್ದು, ರೈತರು ಹೂವುಗಳನ್ನು ಬೆಳೆದಿದ್ದಾರೆ. ಸದ್ಯ ರೈತರ ತೋಟದಲ್ಲಿ  ಬಣ್ಣಬಣ್ಣದ ಹೂವುಗಳು ಅರಳಲು ಆರಂಭವಾಗಿವೆ. ಆದರೆ ಮಳೆರಾಯನ ಅಬ್ಬರಕ್ಕೆ ಹೂವಿನ ತೋಟಗಳಿಗೆ ಹಾನಿ ಉಂಟಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ನಾಗರಪಂಚಮಿ ಹಬ್ಬವನ್ನು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನೇಕ ಹಿಂದೂ ಹಬ್ಬಗಳು ಬರಲಿವೆ. ಈ ಎಲ್ಲಾ ಹಬ್ಬಗಳಿಗೆ ಹೂವುಗಳು ಅವಶ್ಯಕವಾಗಿರುವುದರಿಂದ ಹೂವುಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಬೇಡಿಕೆ ವ್ಯಕ್ತವಾಗಿದೆ. ಆಗಸ್ಟ್ 12ರಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹೂಗಳು ಹೆಚ್ಚು ಮಾರಾಟವಾಗುವ ಹಿನ್ನೆಲೆ ಪಾಲಿಹೌಸ್​ನಲ್ಲಿ ಬೆಳೆದ ಅಲಂಕಾರಿಕ ಹೂಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಅವುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ದೊಡ್ಡಬಳ್ಳಾಪುರ ಸುತ್ತಾಮುತ್ತ ಇರುವ ಎಕರೆಗಟ್ಟಲೆ ಪ್ರದೇಶಗಳಲ್ಲಿ ಗುಲಾಬಿ ಸೇರಿದಂತೆ ಅನೇಕ ರೀತಿಯ ಅಲಂಕಾರಿಕ ಹೂವುಗಳನ್ನು ಬೆಳೆಯಲಾಗಿದ್ದು, ಬೆಂಗಳೂರು ನಗರ, ಹೈದರಾಬಾದ್, ದೆಹಲಿ ಸೇರಿದಂತೆ ಅನೇಕ ಕಡೆಗಳಿಂದ ದೊಡ್ಡಬಳ್ಳಾಪುರದಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗಿದೆ.

ನೂರಾರು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಪಾಲಿಹೌಸ್​​ನಲ್ಲಿ ರೈತರು ಹೂಗಳನ್ನ ಬೆಳೆದಿದ್ದು, ಬಣ್ಣ ಬಣ್ಣದ ಹೂವುಗಳನ್ನು ಮಾರುಕಟ್ಟೆಗೆ ರವಾನಿಸಲಾಗುತ್ತಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾದ ಹಿನ್ನೆಲೆ ಪ್ರತಿನಿತ್ಯ ದಿನಕ್ಕೆ ಒಂದು ಪಾಲಿಹೌಸ್​ನಿಂದ 30ಸಾವಿರಕ್ಕೂ ಹೆಚ್ಚು ಬಂಚ್​ಗಳನ್ನು ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ತೆರೆದ ಪ್ರದೇಶದಲ್ಲಿ ಹೂವುಗಳನ್ನು ಬೆಳೆದ ರೈತರಿಗೆ ನಷ್ಟವಾಗಿದ್ದು, ಪಾಲಿಹೌಸ್​ನಲ್ಲಿ ಬೆಳೆದ ಹೂವಿನ ರೈತರು ಹೆಚ್ಚಿನ ಲಾಭದ ನಿರೀಕ್ಷಿಸುತ್ತಿದ್ದಾರೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​