AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ರಂಗು ಹೆಚ್ಚಾಗುತ್ತಿದೆ. ಈ ಬಾರಿ ತೆರೆದ ಜಮೀನಿನಲ್ಲಿ ಬೆಳೆದ ಹೂವುಗಳು ಮಳೆಯಿಂದಾಗಿ ಹಾನಿಗೊಳಗಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ರೈತರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಇದ್ದಾರೆ.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 04, 2022 | 12:57 PM

Share

ಬೆಂಗಳೂರು ಗ್ರಾಮಾಂತರ: ಮಳೆಯ ಆರ್ಭಟದ ನಡುವೆ ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ತಯಾರಿಗಳು ನಡೆಯುತ್ತಿವೆ. ಈ ನಡುವೆ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ನಾಗರ ಪಂಚಮಿಯ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗಲಿದ್ದು, ರೈತರು ಹೂವುಗಳನ್ನು ಬೆಳೆದಿದ್ದಾರೆ. ಸದ್ಯ ರೈತರ ತೋಟದಲ್ಲಿ  ಬಣ್ಣಬಣ್ಣದ ಹೂವುಗಳು ಅರಳಲು ಆರಂಭವಾಗಿವೆ. ಆದರೆ ಮಳೆರಾಯನ ಅಬ್ಬರಕ್ಕೆ ಹೂವಿನ ತೋಟಗಳಿಗೆ ಹಾನಿ ಉಂಟಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ನಾಗರಪಂಚಮಿ ಹಬ್ಬವನ್ನು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನೇಕ ಹಿಂದೂ ಹಬ್ಬಗಳು ಬರಲಿವೆ. ಈ ಎಲ್ಲಾ ಹಬ್ಬಗಳಿಗೆ ಹೂವುಗಳು ಅವಶ್ಯಕವಾಗಿರುವುದರಿಂದ ಹೂವುಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಬೇಡಿಕೆ ವ್ಯಕ್ತವಾಗಿದೆ. ಆಗಸ್ಟ್ 12ರಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹೂಗಳು ಹೆಚ್ಚು ಮಾರಾಟವಾಗುವ ಹಿನ್ನೆಲೆ ಪಾಲಿಹೌಸ್​ನಲ್ಲಿ ಬೆಳೆದ ಅಲಂಕಾರಿಕ ಹೂಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಅವುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ದೊಡ್ಡಬಳ್ಳಾಪುರ ಸುತ್ತಾಮುತ್ತ ಇರುವ ಎಕರೆಗಟ್ಟಲೆ ಪ್ರದೇಶಗಳಲ್ಲಿ ಗುಲಾಬಿ ಸೇರಿದಂತೆ ಅನೇಕ ರೀತಿಯ ಅಲಂಕಾರಿಕ ಹೂವುಗಳನ್ನು ಬೆಳೆಯಲಾಗಿದ್ದು, ಬೆಂಗಳೂರು ನಗರ, ಹೈದರಾಬಾದ್, ದೆಹಲಿ ಸೇರಿದಂತೆ ಅನೇಕ ಕಡೆಗಳಿಂದ ದೊಡ್ಡಬಳ್ಳಾಪುರದಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗಿದೆ.

ನೂರಾರು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಪಾಲಿಹೌಸ್​​ನಲ್ಲಿ ರೈತರು ಹೂಗಳನ್ನ ಬೆಳೆದಿದ್ದು, ಬಣ್ಣ ಬಣ್ಣದ ಹೂವುಗಳನ್ನು ಮಾರುಕಟ್ಟೆಗೆ ರವಾನಿಸಲಾಗುತ್ತಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾದ ಹಿನ್ನೆಲೆ ಪ್ರತಿನಿತ್ಯ ದಿನಕ್ಕೆ ಒಂದು ಪಾಲಿಹೌಸ್​ನಿಂದ 30ಸಾವಿರಕ್ಕೂ ಹೆಚ್ಚು ಬಂಚ್​ಗಳನ್ನು ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ತೆರೆದ ಪ್ರದೇಶದಲ್ಲಿ ಹೂವುಗಳನ್ನು ಬೆಳೆದ ರೈತರಿಗೆ ನಷ್ಟವಾಗಿದ್ದು, ಪಾಲಿಹೌಸ್​ನಲ್ಲಿ ಬೆಳೆದ ಹೂವಿನ ರೈತರು ಹೆಚ್ಚಿನ ಲಾಭದ ನಿರೀಕ್ಷಿಸುತ್ತಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್