AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ರಂಗು ಹೆಚ್ಚಾಗುತ್ತಿದೆ. ಈ ಬಾರಿ ತೆರೆದ ಜಮೀನಿನಲ್ಲಿ ಬೆಳೆದ ಹೂವುಗಳು ಮಳೆಯಿಂದಾಗಿ ಹಾನಿಗೊಳಗಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ರೈತರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಇದ್ದಾರೆ.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 04, 2022 | 12:57 PM

Share

ಬೆಂಗಳೂರು ಗ್ರಾಮಾಂತರ: ಮಳೆಯ ಆರ್ಭಟದ ನಡುವೆ ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ತಯಾರಿಗಳು ನಡೆಯುತ್ತಿವೆ. ಈ ನಡುವೆ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ನಾಗರ ಪಂಚಮಿಯ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗಲಿದ್ದು, ರೈತರು ಹೂವುಗಳನ್ನು ಬೆಳೆದಿದ್ದಾರೆ. ಸದ್ಯ ರೈತರ ತೋಟದಲ್ಲಿ  ಬಣ್ಣಬಣ್ಣದ ಹೂವುಗಳು ಅರಳಲು ಆರಂಭವಾಗಿವೆ. ಆದರೆ ಮಳೆರಾಯನ ಅಬ್ಬರಕ್ಕೆ ಹೂವಿನ ತೋಟಗಳಿಗೆ ಹಾನಿ ಉಂಟಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ನಾಗರಪಂಚಮಿ ಹಬ್ಬವನ್ನು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನೇಕ ಹಿಂದೂ ಹಬ್ಬಗಳು ಬರಲಿವೆ. ಈ ಎಲ್ಲಾ ಹಬ್ಬಗಳಿಗೆ ಹೂವುಗಳು ಅವಶ್ಯಕವಾಗಿರುವುದರಿಂದ ಹೂವುಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಬೇಡಿಕೆ ವ್ಯಕ್ತವಾಗಿದೆ. ಆಗಸ್ಟ್ 12ರಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹೂಗಳು ಹೆಚ್ಚು ಮಾರಾಟವಾಗುವ ಹಿನ್ನೆಲೆ ಪಾಲಿಹೌಸ್​ನಲ್ಲಿ ಬೆಳೆದ ಅಲಂಕಾರಿಕ ಹೂಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಅವುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ದೊಡ್ಡಬಳ್ಳಾಪುರ ಸುತ್ತಾಮುತ್ತ ಇರುವ ಎಕರೆಗಟ್ಟಲೆ ಪ್ರದೇಶಗಳಲ್ಲಿ ಗುಲಾಬಿ ಸೇರಿದಂತೆ ಅನೇಕ ರೀತಿಯ ಅಲಂಕಾರಿಕ ಹೂವುಗಳನ್ನು ಬೆಳೆಯಲಾಗಿದ್ದು, ಬೆಂಗಳೂರು ನಗರ, ಹೈದರಾಬಾದ್, ದೆಹಲಿ ಸೇರಿದಂತೆ ಅನೇಕ ಕಡೆಗಳಿಂದ ದೊಡ್ಡಬಳ್ಳಾಪುರದಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗಿದೆ.

ನೂರಾರು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಪಾಲಿಹೌಸ್​​ನಲ್ಲಿ ರೈತರು ಹೂಗಳನ್ನ ಬೆಳೆದಿದ್ದು, ಬಣ್ಣ ಬಣ್ಣದ ಹೂವುಗಳನ್ನು ಮಾರುಕಟ್ಟೆಗೆ ರವಾನಿಸಲಾಗುತ್ತಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾದ ಹಿನ್ನೆಲೆ ಪ್ರತಿನಿತ್ಯ ದಿನಕ್ಕೆ ಒಂದು ಪಾಲಿಹೌಸ್​ನಿಂದ 30ಸಾವಿರಕ್ಕೂ ಹೆಚ್ಚು ಬಂಚ್​ಗಳನ್ನು ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ತೆರೆದ ಪ್ರದೇಶದಲ್ಲಿ ಹೂವುಗಳನ್ನು ಬೆಳೆದ ರೈತರಿಗೆ ನಷ್ಟವಾಗಿದ್ದು, ಪಾಲಿಹೌಸ್​ನಲ್ಲಿ ಬೆಳೆದ ಹೂವಿನ ರೈತರು ಹೆಚ್ಚಿನ ಲಾಭದ ನಿರೀಕ್ಷಿಸುತ್ತಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!