AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ರಂಗು ಹೆಚ್ಚಾಗುತ್ತಿದೆ. ಈ ಬಾರಿ ತೆರೆದ ಜಮೀನಿನಲ್ಲಿ ಬೆಳೆದ ಹೂವುಗಳು ಮಳೆಯಿಂದಾಗಿ ಹಾನಿಗೊಳಗಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ರೈತರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಇದ್ದಾರೆ.

Varamahalakshmi Festival: ದೊಡ್ಡಬಳ್ಳಾಪುರದ ಪಾಲಿಹೌಸ್​ನ ಹೂವುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on: Aug 04, 2022 | 12:57 PM

Share

ಬೆಂಗಳೂರು ಗ್ರಾಮಾಂತರ: ಮಳೆಯ ಆರ್ಭಟದ ನಡುವೆ ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ತಯಾರಿಗಳು ನಡೆಯುತ್ತಿವೆ. ಈ ನಡುವೆ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ನಾಗರ ಪಂಚಮಿಯ ನಂತರ ಸಾಲು ಸಾಲು ಹಬ್ಬಗಳು ಆರಂಭವಾಗಲಿದ್ದು, ರೈತರು ಹೂವುಗಳನ್ನು ಬೆಳೆದಿದ್ದಾರೆ. ಸದ್ಯ ರೈತರ ತೋಟದಲ್ಲಿ  ಬಣ್ಣಬಣ್ಣದ ಹೂವುಗಳು ಅರಳಲು ಆರಂಭವಾಗಿವೆ. ಆದರೆ ಮಳೆರಾಯನ ಅಬ್ಬರಕ್ಕೆ ಹೂವಿನ ತೋಟಗಳಿಗೆ ಹಾನಿ ಉಂಟಾದ ಪರಿಣಾಮ ಪಾಲಿಹೌಸ್​ನಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ನಾಗರಪಂಚಮಿ ಹಬ್ಬವನ್ನು ನಾಡಿನೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅನೇಕ ಹಿಂದೂ ಹಬ್ಬಗಳು ಬರಲಿವೆ. ಈ ಎಲ್ಲಾ ಹಬ್ಬಗಳಿಗೆ ಹೂವುಗಳು ಅವಶ್ಯಕವಾಗಿರುವುದರಿಂದ ಹೂವುಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಬೇಡಿಕೆ ವ್ಯಕ್ತವಾಗಿದೆ. ಆಗಸ್ಟ್ 12ರಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹೂಗಳು ಹೆಚ್ಚು ಮಾರಾಟವಾಗುವ ಹಿನ್ನೆಲೆ ಪಾಲಿಹೌಸ್​ನಲ್ಲಿ ಬೆಳೆದ ಅಲಂಕಾರಿಕ ಹೂಗಳಿಗೆ ಬೇಡಿಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಅವುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ದೊಡ್ಡಬಳ್ಳಾಪುರ ಸುತ್ತಾಮುತ್ತ ಇರುವ ಎಕರೆಗಟ್ಟಲೆ ಪ್ರದೇಶಗಳಲ್ಲಿ ಗುಲಾಬಿ ಸೇರಿದಂತೆ ಅನೇಕ ರೀತಿಯ ಅಲಂಕಾರಿಕ ಹೂವುಗಳನ್ನು ಬೆಳೆಯಲಾಗಿದ್ದು, ಬೆಂಗಳೂರು ನಗರ, ಹೈದರಾಬಾದ್, ದೆಹಲಿ ಸೇರಿದಂತೆ ಅನೇಕ ಕಡೆಗಳಿಂದ ದೊಡ್ಡಬಳ್ಳಾಪುರದಲ್ಲಿ ಬೆಳೆದ ಹೂವುಗಳಿಗೆ ಬೇಡಿಕೆ ವ್ಯಕ್ತವಾಗಿದೆ.

ನೂರಾರು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಪಾಲಿಹೌಸ್​​ನಲ್ಲಿ ರೈತರು ಹೂಗಳನ್ನ ಬೆಳೆದಿದ್ದು, ಬಣ್ಣ ಬಣ್ಣದ ಹೂವುಗಳನ್ನು ಮಾರುಕಟ್ಟೆಗೆ ರವಾನಿಸಲಾಗುತ್ತಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾದ ಹಿನ್ನೆಲೆ ಪ್ರತಿನಿತ್ಯ ದಿನಕ್ಕೆ ಒಂದು ಪಾಲಿಹೌಸ್​ನಿಂದ 30ಸಾವಿರಕ್ಕೂ ಹೆಚ್ಚು ಬಂಚ್​ಗಳನ್ನು ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ತೆರೆದ ಪ್ರದೇಶದಲ್ಲಿ ಹೂವುಗಳನ್ನು ಬೆಳೆದ ರೈತರಿಗೆ ನಷ್ಟವಾಗಿದ್ದು, ಪಾಲಿಹೌಸ್​ನಲ್ಲಿ ಬೆಳೆದ ಹೂವಿನ ರೈತರು ಹೆಚ್ಚಿನ ಲಾಭದ ನಿರೀಕ್ಷಿಸುತ್ತಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!