
ಬೆಂಗಳೂರು, (ಅಕ್ಟೋಬರ್ 30): 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025 ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ (Actor Prakash Raj) ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ ಆಯ್ಕೆ ಮಾಡಲಾಗಿದ್ದು, ನಾಲ್ಕೈದು ಬಾರಿ ಸಭೆ ನಡೆಸಿದ ಸದಸ್ಯರು ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ಶಿವಾರಜ್ ತಂಗಡಗಿ ತಿಳಿಸಿದರು.
ಮೊದಲೇ ನಿರ್ಧರಿಸಿದಂತೆ ಈ ಬಾರಿ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. ಇನ್ನು ಈ ಬಾರಿ 12 ಮಂದಿ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ ಮಾಡಲಾಗಿದೆ. ಇನ್ನು ನವಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿಯು 5 ಲಕ್ಷ ನಗದು, 25ಗ್ರಾಂ ಚಿನ್ನದ ಪದಕ ಪ್ರಶಸ್ತಿ ಫಲಕವನ್ನು ರಾಜ್ಯೋತ್ಸವ ಪ್ರಶಸ್ತಿ ಒಳಗೊಂಡಿದೆ.
ಜಾನಪದ
ಸಾಹಿತ್ಯ ಕ್ಷೇತ್ರ
ಚಲನಚಿತ್ರ /ಕಿರುತೆರೆ
ಆಡಳಿತ
ವೈದ್ಯಕೀಯ
ಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ-ಬೀದರ್
ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು
ಸಂಕೀರ್ಣ:
ಹೊರನಾಡು/ ಹೊರದೇಶ: ಜಕರಿಯ ಬಜಪೆ (ಸೌದಿ), ಪಿ ವಿ ಶೆಟ್ಟಿ (ಮುಂಬೈ)
ಪರಿಸರ: ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ
ಕೃಷಿ: ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ, ಎಂ ಸಿ ರಂಗಸ್ವಾಮಿ-ಹಾಸನ.
ಮಾಧ್ಯಮ: ಕೆ.ಸುಬ್ರಮಣ್ಯ-ಬೆಂಗಳೂರು, ಅಂಶಿ ಪ್ರಸನ್ನಕುಮಾರ್-ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ.
ವಿಜ್ಞಾನ ಮತ್ತು ತಂತ್ರಜ್ಞಾನ : ರಾಮಯ್ಯ ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ-ದಾವಣಗೆರೆ, ಡಾ. ಆರ್. ವಿ ನಾಡಗೌಡ- ಗದಗ.
ಸಹಕಾರ: ಶೇಖರಗೌಡ ವಿ ಮಾಲಿಪಾಟೀಲ್ -ಕೊಪ್ಪಳ.
ಯಕ್ಷಗಾನ: ಕೋಟ ಸುರೇಶ ಬಂಗೇರ- ಉಡುಪಿ , ಐರಬೈಲ್ಆನಂದ ಶೆಟ್ಟಿ ಉಡುಪಿ, ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ)- ಉತ್ತರ ಕನ್ನಡ.
ಬಯಲಾಟ: ಗುಂಡೂರಾಜ್-ಹಾಸನ
ರಂಗಭೂಮಿ: ಹೆಚ್.ಎಂ. ಪರಮಶಿವಯ್ಯ,ಬೆಂಗಳೂರು ದಕ್ಷಿಣ (ರಾಮನಗರ), ಎಲ್.ಬಿ.ಶೇಖ್ (ಮಾಸ್ತರ್)-ವಿಜಯಪುರ, ಬಂಗಾರಪ್ಪ ಖುದಾನ್ಪುರ-ಬೆಂಗಳೂರು, ಮೈಮ್ ರಮೇಶ್- ದಕ್ಷಿಣ ಕನ್ನಡ, ಡಿ.ರತ್ನಮ್ಮ ದೇಸಾಯಿ- ರಾಯಚೂರು.
ಕ್ರೀಡೆ: ಆಶೀಶ್ ಕುಮಾರ್ ಬಲ್ಲಾಳ್-ಬೆಂಗಳೂರು, ಎಂ ಯೋಗೇಂದ್ರ-ಮೈಸೂರು, ಡಾ. ಬಬಿನಾ ಎನ್.ಎಂ (ಯೋಗ)ಕೊಡಗು.
ಶಿಕ್ಷಣ: ಡಾ. ಎಂ.ಆರ್. ಜಯರಾಮ್-ಬೆಂಗಳೂರು, ಡಾ. ಎನ್ ಎಸ್ ರಾಮೇಗೌಡ-ಮೈಸೂರು , ಎಸ್. ಬಿ. ಹೊಸಮನಿ- ಕಲಬುರಗಿ, ರಾಜ್ ಶ್ರೀ ನಾಗರಾಜು- ಬೆಳಗಾವಿ.
ನ್ಯಾಯಾಂಗ: ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ (ಪವನ್ ಕುಮಾರ್ ಭಜಂತ್ರಿ )-ಬಾಗಲಕೋಟೆ.
ಶಿಲ್ಪಕಲೆ: ಬಸಣ್ಣ ಮೋನಪ್ಪ ಬಡಿಗೇರ- ಯಾದಗಿರಿ, ನಾಗಲಿಂಗಪ್ಪ ಜಿ ಗಂಗೂರ- ಬಾಗಲಕೋಟೆ.
ಚಿತ್ರಕಲೆ: ಬಿ. ಮಾರುತಿ-ವಿಜಯನಗರ
ಕರಕುಶಲ: ಎಲ್. ಹೇಮಾಶೇಖರ್-ಮೈಸೂರು
Published On - 5:22 pm, Thu, 30 October 25