AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ಟಪ್​ನಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ

ದೇಶದಲ್ಲೇ ನವೋದ್ಯಮದಲ್ಲಿ (ಸ್ಟಾರ್ಟ್‌ಅಪ್) ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಮತ್ತು ದೆಹಲಿ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ್ ರಾಜ್ಯಸಭೆಗೆ ಮಾಹಿತಿ ನೀಡಿದರು.

ಸ್ಟಾರ್ಟಪ್​ನಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ
ಸಾಂದರ್ಭಿಕ ಚಿತ್ರ
H P
| Updated By: ವಿವೇಕ ಬಿರಾದಾರ|

Updated on: Jul 27, 2024 | 2:31 PM

Share

ಬೆಂಗಳೂರು, ಜುಲೈ 27: ದೇಶದಲ್ಲೇ ನವೋದ್ಯಮದಲ್ಲಿ (ಸ್ಟಾರ್ಟಪ್) ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಮತ್ತು ದೆಹಲಿ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ್ (Jitin Prasad) ರಾಜ್ಯಸಭೆಗೆ ಮಾಹಿತಿ ನೀಡಿದರು. ಕರ್ನಾಟಕದಲ್ಲಿ 15,019 ನವೋದ್ಯಮಗಳು (Startup) ನೋಂದಣಿ ಮಾಡಿಕೊಂಡಿವೆ. ಮಹಾರಾಷ್ಟ್ರದಲ್ಲಿ 25,044 ನವೋದ್ಯಮ ಸಂಸ್ಥೆಗಳು ಆರಂಭವಾಗಿವೆ. ದೆಹಲಿಯಲ್ಲಿ 14,734 ನವೋದ್ಯಮ ಕಂಪನಿಗಳು ನೋಂದಣಿ ಮಾಡಿಕೊಂಡಿವೆ. ಉತ್ತರ ಪ್ರದೇಶ 13,299, ಗುಜರಾತ್ 11,436 ನವೋದ್ಯಮಗಳೊಂದಿಗೆ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ದೇಶದಲ್ಲಿ ನವೋದ್ಯಮಗಳ ನೋಂದಣಿ 1.4 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಕ್ಕೆ ಉತ್ತೇಜನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ಎಲಿವೇಟ್​ ಯೋಜನೆ ಆರಂಭಿಸಲಾಗಿದೆ. ನವೋದ್ಯಮಗಳನ್ನು ಆರಂಭಿಸುವ ಯುವಕ, ಯುವತಿಯರಿಗೆ ಈ ವರ್ಷ 4 ಕೋಟಿ ರೂ.ವರೆಗೆ ಧನಸಹಾಯ ನೀಡಲಾಗುತ್ತದೆ. ಈಗಾಗಲೆ 19 ನವೋದ್ಯಮಿಗಳಿಗೆ 2 ಕೋಟಿ ರೂ. ಧನಸಹಾಯ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನ ಸ್ಟಾರ್ಟಪ್ ಬ್ಲೂಲರ್ನ್ ಅಂತ್ಯ; ಹೂಡಿಕೆದಾರರಿಗೆ ಶೇ. 70 ಹಣ ಮರಳಿಸಿದ ಸಂಸ್ಥಾಪಕರು; ಕಂಪನಿ ಮುಚ್ಚಿದರೂ ಯುವಕರಿಗೆ ಕುಂದದ ಉತ್ಸಾಹ

ಕಲಬುರಗಿ ಜಿಲ್ಲೆಯ 11, ಬಳ್ಳಾರಿ ಜಿಲ್ಲೆಯ ಮೂರು, ಕೊಪ್ಪಳ ಹಾಗೂ ಬೀದರ್​ ತಲಾ ಎರಡು ಮತ್ತು ರಾಯಚೂರು ಜಿಲ್ಲೆಯ ಒಂದು ಸೇರಿದಂತೆ 19 ಸಂಸ್ಥೆಗಳನ್ನು ನವೋದ್ಯಮ ಸ್ಥಾಪನೆಗಾಗಿ ಗುರುತಿಸಲಾಗಿದೆ. ಆಯ್ಕೆಯಾಗಿರುವ 19 ಸಂಸ್ಥೆಗಳಲ್ಲಿ 7 ನವೋದ್ಯಮಗಳು ತಲಾ 25 ಲಕ್ಷ ರೂ. ಸಹಾಯಧನ ಮಂಜೂರಾತಿ ನೀಡಲಾಗಿದೆ. ಉಳಿದವಿಗಳಿಗೆ 20 ಲಕ್ಷ ರೂ.ಗಳಿಂದ 15 ಲಕ್ಷ ರೂ. ಸಹಾಯಧನ ಮಂಜೂರಾಗಿದೆ ಎಂದು ಹೇಳಿದರು.

2035ರ ವೇಳೆಗೆ ಬೆಂಗಳೂರಿನ ಜಿಡಿಪಿ ಶೇ 8.5 ರಷ್ಟು ಆಗಲಿದೆ. ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಉದ್ಯೋಗಿಗಳಿದ್ದಾರೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 1106 ಕಾಲೇಜುಗಳಿವೆ. 3600ಕ್ಕೂ ಹೆಚ್ಚು ನವೋದ್ಯಮಗಳು ಹೂಡಿಕೆ ಮಾಡಿವೆ. ಬೆಂಗಳೂರಿನಲ್ಲಿ 1100 ಮಹಿಳೆಯರು ನವೋದ್ಯಮಗಳನ್ನು ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ