AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೇಷನ್ ಕಾರ್ಡ್​ ಇಲ್ಲದೇ 4 ವರ್ಷಗಳಿಂದ ಬರೋಬ್ಬರಿ 4,05,216 ಜನರ ಪರದಾಟ

ಸಾಮಾನ್ಯವಾಗಿ ರೇಷನ್ ಪಡೆದುಕೊಳ್ಳಲು ಜಿಲ್ಲೆಗಳಲ್ಲಿ ಗ್ರಾಮಪಂಚಾತ್​ಗಳಲ್ಲಿ ಅರ್ಜಿ ಹಾಕಬೇಕು. ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಆಫೀಸ್ ಗಳಲ್ಲಿ ಅರ್ಜಿಹಾಕಬೇಕು. ಅರ್ಜಿಗೆ ಲಗತ್ತಿಸಿರುವ ದಾಖಲೆಗಳಯ ಎಲ್ಲ ಸರಿ ಇದ್ದದ್ದೇ ಆದಲ್ಲಿ 15 - 20 ದಿನಗಳಲ್ಲಿ ರೇಷನ್ ಕಾರ್ಡ್ ಜನರ ಕೈ ಸೇರುತ್ತವೆ.

ಕರ್ನಾಟಕದಲ್ಲಿ ರೇಷನ್ ಕಾರ್ಡ್​ ಇಲ್ಲದೇ 4 ವರ್ಷಗಳಿಂದ ಬರೋಬ್ಬರಿ 4,05,216 ಜನರ ಪರದಾಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 08, 2021 | 9:44 PM

Share

ಬೆಂಗಳೂರು: ಕೊರೊನಾದಿಂದ ಅತಂತ್ರವಾಗಿರುವ ಈ ವೇಳೆ ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ಆಹಾರ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಜನರಿಗೆ ಸಿಗಬೇಕಿದ್ದ ಪಡಿತರ ಚೀಟಿಗಳು ಆಹಾರ ಇಲಾಖೆಯಲ್ಲಿಯೇ ಕೊಳೆಯುತ್ತ ಬಿದ್ದಿವೆ. 4 ವರ್ಷಗಳಿಂದ ರೇಷನ್ ಕಾರ್ಡ್​ ಇಲ್ಲದೇ ಬರೋಬ್ಬರಿ 4,05,216 ಜನರು ಪರದಾಡುತ್ತಿದ್ದಾರೆ. ಹೊಸ ಬಿಪಿಎಲ್ ಕಾರ್ಡ್​ಗಳನ್ನು ನೀಡಲು 2017 ರಿಂದ 2021ರವರೆಗೆ ರಾಜ್ಯದಾದ್ಯಂತ 39,02, 745 ರಷ್ಟು ಜನರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 34,97, 529 ರಷ್ಟು ಅರ್ಜಿಗಳ ವಿಲೇವಾರಿಯಾಗಿದ್ದರೆ 4,05, 216 ಅರ್ಜಿಗಳು ಬಾಕಿ ಉಳಿದಿವೆಯಂತೆ. ಹೀಗಾಗಿ ಜನರು ಸರ್ಕಾರದಿಂದ ಸಿಗುವ ಮೂಲ ಸೌಕರ್ಯಗಳನ್ನ ಪಡೆದುಕೊಳ್ಳಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕಾರ್ಡ್​ಗಳು ಬಾಕಿ ಉಳಿಯಲು ಕಾರಣವೇನು ಅಂತ ಆಹಾರ ಇಲಾಖೆಯ ಆಯುಕ್ತೆ ಶಮ್ಲಾ ಇಕ್ಬಾಲ್, ಕೊರೊನಾದಿಂದಾಗಿ ಕಾರ್ಡ್​ಗಳು ಬಾಕಿ ಉಳಿದಿವೆ. ಸದ್ಯ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವ ಸರ್ಕಾರ ಹಲವು ನಿಯಾಮವಳಿ ಬಂದಿವೆ. ಅದರಲ್ಲಿ ಮನೆಯ ಆದಾಯ, ದಾಖಲೆಗಳನ್ನು ಸಂಪೂರ್ಣವಾಗಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯದಲ್ಲೆ ರೇಷನ್ ಕಾರ್ಡ್​ಗಳು ಜನರಿಗೆ ಸಿಗುವಂತೆ ವ್ಯವಸ್ಥೆ ಕಲ್ಪಿಸಿಕೊಡಲು ಕ್ರಮತೆಗೆದುಕೊಳ್ಳುತ್ತೇವೆ. ಸದ್ಯ ನಗರದಲ್ಲಿ 80 ಸಾವಿರದಷ್ಟು ಕಾರ್ಡ್​ಗಳು ಬಾಕಿ ಉಳಿದಿವೆ ಎಂದರು.

ಸಾಮಾನ್ಯವಾಗಿ ರೇಷನ್ ಪಡೆದುಕೊಳ್ಳಲು ಜಿಲ್ಲೆಗಳಲ್ಲಿ ಗ್ರಾಮಪಂಚಾತ್​ಗಳಲ್ಲಿ ಅರ್ಜಿ ಹಾಕಬೇಕು. ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಆಫೀಸ್ ಗಳಲ್ಲಿ ಅರ್ಜಿಹಾಕಬೇಕು. ಅರ್ಜಿಗೆ ಲಗತ್ತಿಸಿರುವ ದಾಖಲೆಗಳಯ ಎಲ್ಲ ಸರಿ ಇದ್ದದ್ದೇ ಆದಲ್ಲಿ 15 – 20 ದಿನಗಳಲ್ಲಿ ರೇಷನ್ ಕಾರ್ಡ್ ಜನರ ಕೈ ಸೇರುತ್ತವೆ. ಆದರೆ ಆಹಾರ ಇಲಾಖೆ ನಾಲ್ಕು ವರ್ಷಗಳಿಂದ ರೇಷನ್ ಕಾರ್ಡ್​ಗಳನ್ನು ನೀಡದೆ ಬಾಕಿ ಉಳಿಸಿಕೊಂಡಿರುವುದಿಂದ ಸರ್ಕಾರದಿಂದ ಸಿಗುವ ಆಸ್ಪತ್ರೆ ಸೌಕರ್ಯ, ಪಡಿತರ ಸೌಕರ್ಯ, ಮನೆ ಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳಿಂದ ಜನರು ವಂಚಿತರಾಗುತ್ತಿದ್ದಾರೆ.

ವರದಿ: ಪೂರ್ಣಿಮಾ ನಾಗರಾಜ್ ಟಿವಿ 9 ಬೆಂಗಳೂರು

ಇದನ್ನೂ ಓದಿ: 

ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್; ಬಿಎಂಟಿಸಿ ಖಾಸಗಿಕರಣದ ಮೊದಲ ಹೆಜ್ಜೆ? ಕಾರ್ಮಿಕರ ಆತಂಕ

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!