AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೇಷನ್ ಕಾರ್ಡ್​ ಇಲ್ಲದೇ 4 ವರ್ಷಗಳಿಂದ ಬರೋಬ್ಬರಿ 4,05,216 ಜನರ ಪರದಾಟ

ಸಾಮಾನ್ಯವಾಗಿ ರೇಷನ್ ಪಡೆದುಕೊಳ್ಳಲು ಜಿಲ್ಲೆಗಳಲ್ಲಿ ಗ್ರಾಮಪಂಚಾತ್​ಗಳಲ್ಲಿ ಅರ್ಜಿ ಹಾಕಬೇಕು. ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಆಫೀಸ್ ಗಳಲ್ಲಿ ಅರ್ಜಿಹಾಕಬೇಕು. ಅರ್ಜಿಗೆ ಲಗತ್ತಿಸಿರುವ ದಾಖಲೆಗಳಯ ಎಲ್ಲ ಸರಿ ಇದ್ದದ್ದೇ ಆದಲ್ಲಿ 15 - 20 ದಿನಗಳಲ್ಲಿ ರೇಷನ್ ಕಾರ್ಡ್ ಜನರ ಕೈ ಸೇರುತ್ತವೆ.

ಕರ್ನಾಟಕದಲ್ಲಿ ರೇಷನ್ ಕಾರ್ಡ್​ ಇಲ್ಲದೇ 4 ವರ್ಷಗಳಿಂದ ಬರೋಬ್ಬರಿ 4,05,216 ಜನರ ಪರದಾಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 08, 2021 | 9:44 PM

Share

ಬೆಂಗಳೂರು: ಕೊರೊನಾದಿಂದ ಅತಂತ್ರವಾಗಿರುವ ಈ ವೇಳೆ ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ಆಹಾರ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಜನರಿಗೆ ಸಿಗಬೇಕಿದ್ದ ಪಡಿತರ ಚೀಟಿಗಳು ಆಹಾರ ಇಲಾಖೆಯಲ್ಲಿಯೇ ಕೊಳೆಯುತ್ತ ಬಿದ್ದಿವೆ. 4 ವರ್ಷಗಳಿಂದ ರೇಷನ್ ಕಾರ್ಡ್​ ಇಲ್ಲದೇ ಬರೋಬ್ಬರಿ 4,05,216 ಜನರು ಪರದಾಡುತ್ತಿದ್ದಾರೆ. ಹೊಸ ಬಿಪಿಎಲ್ ಕಾರ್ಡ್​ಗಳನ್ನು ನೀಡಲು 2017 ರಿಂದ 2021ರವರೆಗೆ ರಾಜ್ಯದಾದ್ಯಂತ 39,02, 745 ರಷ್ಟು ಜನರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 34,97, 529 ರಷ್ಟು ಅರ್ಜಿಗಳ ವಿಲೇವಾರಿಯಾಗಿದ್ದರೆ 4,05, 216 ಅರ್ಜಿಗಳು ಬಾಕಿ ಉಳಿದಿವೆಯಂತೆ. ಹೀಗಾಗಿ ಜನರು ಸರ್ಕಾರದಿಂದ ಸಿಗುವ ಮೂಲ ಸೌಕರ್ಯಗಳನ್ನ ಪಡೆದುಕೊಳ್ಳಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕಾರ್ಡ್​ಗಳು ಬಾಕಿ ಉಳಿಯಲು ಕಾರಣವೇನು ಅಂತ ಆಹಾರ ಇಲಾಖೆಯ ಆಯುಕ್ತೆ ಶಮ್ಲಾ ಇಕ್ಬಾಲ್, ಕೊರೊನಾದಿಂದಾಗಿ ಕಾರ್ಡ್​ಗಳು ಬಾಕಿ ಉಳಿದಿವೆ. ಸದ್ಯ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವ ಸರ್ಕಾರ ಹಲವು ನಿಯಾಮವಳಿ ಬಂದಿವೆ. ಅದರಲ್ಲಿ ಮನೆಯ ಆದಾಯ, ದಾಖಲೆಗಳನ್ನು ಸಂಪೂರ್ಣವಾಗಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯದಲ್ಲೆ ರೇಷನ್ ಕಾರ್ಡ್​ಗಳು ಜನರಿಗೆ ಸಿಗುವಂತೆ ವ್ಯವಸ್ಥೆ ಕಲ್ಪಿಸಿಕೊಡಲು ಕ್ರಮತೆಗೆದುಕೊಳ್ಳುತ್ತೇವೆ. ಸದ್ಯ ನಗರದಲ್ಲಿ 80 ಸಾವಿರದಷ್ಟು ಕಾರ್ಡ್​ಗಳು ಬಾಕಿ ಉಳಿದಿವೆ ಎಂದರು.

ಸಾಮಾನ್ಯವಾಗಿ ರೇಷನ್ ಪಡೆದುಕೊಳ್ಳಲು ಜಿಲ್ಲೆಗಳಲ್ಲಿ ಗ್ರಾಮಪಂಚಾತ್​ಗಳಲ್ಲಿ ಅರ್ಜಿ ಹಾಕಬೇಕು. ನಗರ ಪ್ರದೇಶದಲ್ಲಿ ಬೆಂಗಳೂರು ಒನ್ ಆಫೀಸ್ ಗಳಲ್ಲಿ ಅರ್ಜಿಹಾಕಬೇಕು. ಅರ್ಜಿಗೆ ಲಗತ್ತಿಸಿರುವ ದಾಖಲೆಗಳಯ ಎಲ್ಲ ಸರಿ ಇದ್ದದ್ದೇ ಆದಲ್ಲಿ 15 – 20 ದಿನಗಳಲ್ಲಿ ರೇಷನ್ ಕಾರ್ಡ್ ಜನರ ಕೈ ಸೇರುತ್ತವೆ. ಆದರೆ ಆಹಾರ ಇಲಾಖೆ ನಾಲ್ಕು ವರ್ಷಗಳಿಂದ ರೇಷನ್ ಕಾರ್ಡ್​ಗಳನ್ನು ನೀಡದೆ ಬಾಕಿ ಉಳಿಸಿಕೊಂಡಿರುವುದಿಂದ ಸರ್ಕಾರದಿಂದ ಸಿಗುವ ಆಸ್ಪತ್ರೆ ಸೌಕರ್ಯ, ಪಡಿತರ ಸೌಕರ್ಯ, ಮನೆ ಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳಿಂದ ಜನರು ವಂಚಿತರಾಗುತ್ತಿದ್ದಾರೆ.

ವರದಿ: ಪೂರ್ಣಿಮಾ ನಾಗರಾಜ್ ಟಿವಿ 9 ಬೆಂಗಳೂರು

ಇದನ್ನೂ ಓದಿ: 

ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್; ಬಿಎಂಟಿಸಿ ಖಾಸಗಿಕರಣದ ಮೊದಲ ಹೆಜ್ಜೆ? ಕಾರ್ಮಿಕರ ಆತಂಕ

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ