AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್

ದೆಹಲಿಯಲ್ಲಿ ಕೈಗಾರಿಕಾ ಇಲಾಖೆ ಸಚಿವ ಎಂ.ಬಿ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಅನೇಕ ದೇಶಗಳ ರಾಯಭಾರಿ ಜೊತೆಗೆ ಉದ್ಯಮಿಗಳನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಬೇರೆ ಬೇರೆ ವಲಯಗಳಲ್ಲಿ ಕಳೆದ 1 ವರ್ಷದಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಕೋಟಿ ರೂ. ಹೂಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್
ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್
ಹರೀಶ್ ಜಿ.ಆರ್​.
| Edited By: |

Updated on: Sep 11, 2024 | 8:41 PM

Share

ದೆಹಲಿ/ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ ಬೇರೆ ಬೇರೆ ವಲಯಗಳಲ್ಲಿ 1.35 ಲಕ್ಷ ಕೋಟಿ ರೂ. ಹೂಡಿಕೆ ಬಂದಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಗ್ರೀನ್ ಹೈಡ್ರೋಜನ್ ಯೋಜನೆಯಡಿ 1.5 ಲಕ್ಷ ಕೋಟಿ ರೂ. ಹೂಡಿಕೆ ಬಂದಿತ್ತು. ಆದರೆ ಮೂಲ ಸೌಕರ್ಯಗಳ ಕೊರತೆಯಿಂದ ಆ ಹೂಡಿಕೆ ಬರಲಿಲ್ಲ ಎಂದು ತಿಳಿಸಿದ್ದಾರೆ.

2 ದಿನ: ಅನೇಕ ದೇಶಗಳ ರಾಯಭಾರಿಗಳ ಭೇಟಿ

ದೆಹಲಿಗೆ ತೆರಳಿರುವ ಸಚಿವ ಎಂ.ಬಿ.ಪಾಟೀಲ್​ 2 ದಿನಗಳಿಂದ ಅನೇಕ ದೇಶಗಳ ರಾಯಭಾರಿಗಳ ಭೇಟಿಯಾಗಿದ್ದಾರೆ. ಸಿಂಗಾಪುರ ಹೈಕಮಿಷನರ್​ ಭೇಟಿಯಾಗಿ ವಿವಿಧ ವಲಯಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದೇವೆ. ಆಸ್ಟ್ರೇಲಿಯಾ ಹೈಕಮಿಷನರ್ ಭೇಟಿ ಮಾಡಿ ಶಿಕ್ಷಣ, ಬಾಹ್ಯಾಕಾಶ, ಬಯೋಟೆಕ್, ಐಟಿ ಅಭಿವೃದ್ಧಿ ಮತ್ತು ಹೂಡಿಕೆ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

ಜರ್ಮನಿ, ದಕ್ಷಿಣ ಕೊರಿಯಾ ರಾಯಭಾರಿಗಳ ಭೇಟಿಯಾಗಿದ್ದೇನೆ. ಇನ್ವೆಸ್ಟ್​ ಕರ್ನಾಟಕ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಟಾಯ್ ಝೋನ್, ಎಂಎಂಡಿ, ವ್ಯಾಟ್ಲೊ, ಹೆಚ್​ಎಂಇಎಲ್​ ಹಾಗೂ ಅಂಬೇರ್ ಎಂಟರ್​ಪ್ರೈಸಸ್​ ಕಂಪನಿ ಜೊತೆಗೂ ಹೂಡಿಕೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಟ್ವೀಟ್​

ರಾಯಭಾರಿಗಳ ಜೊತೆಗೆ ಉದ್ಯಮಿಗಳನ್ನು ಸಹ ಭೇಟಿ ಮಾಡಿದ್ದೇನೆ. ಇನ್ವೆಸ್ಟ್​ ಕರ್ನಾಟಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಿದ್ದೇನೆ. ಮೊದಲ ಬಾರಿಗೆ ಸ್ಟಾರ್ಟ್​ ಅಪ್ ಚಾಲೆಂಜ್ ಮಾಡಿದೆ. ವಿಭಿನ್ನವಾಗಿ ಜಾಗತಿಕ ಬಂಡವಾಳ ಹೂಡಿಕೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾರ್ಯಕ್ರಮದ ಮೂಲ ಥೀಮ್​ನ್ನು ಬದಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಡಿಫೆನ್ಸ್ ಕಾರಿಡಾರ್ ನೀಡುವಂತೆ ಮನವಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕರ್ನಾಟಕಕ್ಕೆ ಡಿಫೆನ್ಸ್ ಕಾರಿಡಾರ್ ನೀಡುವಂತೆ ಮನವಿ ಮಾಡಿದ್ದೇನೆ. ಹೆಲಿಕಾಪ್ಟರ್ ಸೇರಿ ಸೇನಾ ಸಾಮಗ್ರಿ ಉತ್ಪಾದನೆಗೆ ಅನುಕೂಲವಾಗಲಿದೆ. ಕಾರವಾರ ಸೇನಾ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಬಳಕೆಗೆ ಮತ್ತು ರನ್​ವೇ ವಿಸ್ತರಿಸಲು ಕೇಳಿದ್ದೇನೆ ಎಂದಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿರನ್ನು ಭೇಟಿ ಮಾಡಿದ್ದೇನೆ. ಇವಿ ಕಂಪನಿಗಳಿಗೆ ಹೂಡಿಕೆ ಹಣದ ಪ್ರಮಾಣ ಕಡಿಮೆ ಮಾಡಲು, ರಾಜ್ಯದಲ್ಲೂ ಒಂದು ಸೆಮಿಕಂಡಕ್ಟರ್ ಕಂಪನಿ ಆರಂಭಿಸುವಂತೆ ಮನವಿ ಮಾಡಲಾಗಿದೆ. 12 ಇಂಡಸ್ಟ್ರಿಯಲ್ ಕಾರಿಡಾರ್​ಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯಕ್ಕೆ ಒಂದೂ ನೀಡಿಲ್ಲ, ಒಂದು ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದ ರೈಲ್ವೆ ಯೋಜನೆ ಕಾಮಗಾರಿಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವದ್ವಯರು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಚರ್ಚಿಸಿದ್ದೇನೆ. ಸಣ್ಣ ಉದ್ದಿಮೆದಾರರ ಮೇಲೆ ಹಾಕಿರುವ ಜಿಎಸ್​ಟಿ ರದ್ದು, ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಆಮದು ತೆರಿಗೆ ಸುಂಕ ಇಳಿಸಲು ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ