Karnataka Covid Update: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಕೊರೊನಾ ದೃಢ, 208 ಜನರ ಸಾವು

ಬೆಂಗಳೂರಿನಲ್ಲೊಂದೇ ಇಂದು 17,342 ಜನರಿಗೆ ಸೋಂಕು ಖಚಿತವಾಗಿದೆ. ಮೃತಪಟ್ಟವರ ಪೈಕಿ ಬೆಂಗಳೂರಿನವರ ಸಂಖ್ಯೆಯೇ ಹೆಚ್ಚಿದ್ದು 149 ಜನರು ಬಲಿಯಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಕೊರೊನಾ ದೃಢ, 208 ಜನರ ಸಾವು
ಕೊವಿಡ್ ಪರೀಕ್ಷೆ
Follow us
|

Updated on:Apr 24, 2021 | 9:13 PM

ಬೆಂಗಳೂರು: ರಾಜ್ಯದಲ್ಲಿಂದು 29,438 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಂದೇ ದಿನ ಸೋಂಕಿನಿಂದ 208 ಜನರ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೊಂದೇ ಇಂದು 17,342 ಜನರಿಗೆ ಸೋಂಕು ಖಚಿತವಾಗಿದೆ. ಮೃತಪಟ್ಟವರ ಪೈಕಿ ಬೆಂಗಳೂರಿನವರ ಸಂಖ್ಯೆಯೇ ಹೆಚ್ಚಿದ್ದು 149 ಜನರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13,04,397ಕ್ಕೇರಿಕೆಯಾಗಿದೆ ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟ 208 ಜನರನ್ನು ಸೇರಿಸಿ ಈವರೆಗೆ ಒಟ್ಟು 14,283 ಜನರು ಮೃತಪಟ್ಟಂತಾಗಿದೆ.  ಈವರೆಗೆ ರಾಜ್ಯದ ಸೋಂಕಿತರ ಪೈಕಿ 10,55,612 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,34,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಮಾಹಿತಿ

ಬೆಂಗಳೂರು ನಗರದಲ್ಲಿಯೇ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 17,342, ಬೆಂಗಳೂರು ಗ್ರಾಮಾಂತರದಲ್ಲಿ 684, ತುಮಕೂರಿನಲ್ಲಿ 1,559 ಸೋಂಕಿತರು ಪತ್ತೆಯಾಗಿದ್ದಾರೆ. ಬಳ್ಳಾರಿ 731,  ಬಾಗಲಕೋಟೆ 105, ಬೆಳಗಾವಿ 313, ಬೀದರ್ 365, ಚಾಮರಾಜನಗರ 295, ಚಿಕ್ಕಬಳ್ಳಾಪುರ 506, ಚಿಕ್ಕಮಗಳೂರು 185, ಚಿತ್ರದುರ್ಗ 114, ದಕ್ಷಿಣ ಕನ್ನಡ 517, ದಾವಣಗೆರೆ 254, ಧಾರವಾಡ 385, ಗದಗ 76, ಹಾಸನ 823, ಹಾವೇರಿ 92, ಕಲಬುರಗಿ 791, ಕೊಡಗು 196, ಕೋಲಾರ 373, ಕೊಪ್ಪಳ 266, ಮಂಡ್ಯ 688, ಮೈಸೂರು 536, ರಾಯಚೂರು 497, ರಾಮನಗರ 385, ಶಿವಮೊಗ್ಗ 266, ಉಡುಪಿ 403, ಉತ್ತರ ಕನ್ನಡ 185, ವಿಜಯಪುರ 411, ಯಾದಗಿರಿ 95 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊವಿಡ್ ಸೋಂಕಿಗೆ ಮೃತಪಟ್ಟ  208 ಜನರಲ್ಲಿ ಬೆಂಗಳೂರಿನಲ್ಲಿಯೇ  149 ಜನರು ಸಾವನ್ನಪ್ಪಿದ್ದಾರೆ.  ಕಲಬುರಗಿ ಜಿಲ್ಲೆಯಲ್ಲಿ  8 ಜನರು,  ಕೋಲಾರ ಜಿಲ್ಲೆಯಲ್ಲಿ 6, ಧಾರವಾಡ ಜಿಲ್ಲೆಯಲ್ಲಿ 5,  ಮೈಸೂರು ಜಿಲ್ಲೆಯಲ್ಲಿ 4,  ಮಂಡ್ಯ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ತಲಾ ಮೂವರು ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಕೊಡಗು, ವಿಜಯಪುರ, ರಾಯಚೂರು, ಉತ್ತರಕನ್ನಡ ಜಿಲ್ಲೆಯಲ್ಲಿ ತಲಾ ಇಬ್ಬರು ಬಲಿಯಾಗಿದ್ದಾರೆ. ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Karnataka records new 29438 covid 19 cases and 208 people died in one day)

Published On - 7:57 pm, Sat, 24 April 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ