AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಪ್ರಕರಣಗಳು ದೃಢ, 18 ಮಂದಿ ಸಾವು

ಕರ್ನಾಟಕದಲ್ಲಿ ಇಂದು (ಭಾನುವಾರ, ಫೆ.20) 1,001 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ 18 ಜನರು ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಪ್ರಕರಣಗಳು ದೃಢ, 18 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Feb 20, 2022 | 9:23 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಫೆ.20, ಭಾನುವಾರ) 1,001 ಕೊರೊನಾ ಪ್ರಕರಣಗಳು (Corona Cases) ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,36,586 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 38,84,120 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,780 ಜನರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ (Karnataka Health Department) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 39,795ಕ್ಕೇರಿದೆ. ರಾಜ್ಯದಲ್ಲಿ 12,634 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.42 ಇದೆ. ಬೆಂಗಳೂರಿನಲ್ಲಿ (Bengaluru) ಇಂದು 485 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೊರೊನಾದಿಂದ 12 ಜನ ಸಾವಿಗೀಡಾಗಿದ್ದಾರೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 15, ಬಳ್ಳಾರಿ 46, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 485, ಬೀದರ್ 2, ಚಾಮರಾಜನಗರ 20, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 5, ಚಿತ್ರದುರ್ಗ 22, ದಕ್ಷಿಣ ಕನ್ನಡ 14, ದಾವಣಗೆರೆ 3, ಧಾರವಾಡ 17, ಗದಗ 2, ಹಾಸನ 20, ಹಾವೇರಿ 12, ಕಲಬುರಗಿ 16, ಕೊಡಗು 42, ಕೋಲಾರ 4, ಕೊಪ್ಪಳ 1, ಮಂಡ್ಯ 10, ಮೈಸೂರು 48, ರಾಯಚೂರು 4, ರಾಮನಗರ 4, ಶಿವಮೊಗ್ಗ 22, ತುಮಕೂರು 93, ಉಡುಪಿ 23, ಉತ್ತರ ಕನ್ನಡ 3, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 4 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿ ಇಲ್ಲಿದೆ:

ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಸದ್ಯ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಕೆಲ ದಿನಗಳ ಹಿಂದೆ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.

ಇದನ್ನೂ ಓದಿ:

Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,579 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?