
ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon Rain) ಕೊರತೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜುಲೈ ತಿಂಗಳ ಆರಂಭದಲ್ಲಿ ದಕ್ಷಿಣ ಕನ್ನಡ, ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಳಗಾವಿ ಕಡೆ ಭಾರಿ ಮಳೆಯಾಗಿ ಜಲಾಶಯಗಳ ಒಳಹರಿವು ತುಸು ಹೆಚ್ಚಾಗಿದ್ದರೂ ಒಟ್ಟು ಲೆಕ್ಕದಲ್ಲಿ ನೀರಿನ ಸಂಗ್ರಹದಲ್ಲಿ ಭಾರಿ ಏರಿಕೆಯಾಗಿಲ್ಲ. ಕಳೆದ ವರ್ಷ ಜೂನ್ ಆರಂಭದಲ್ಲೇ ನೂರು ಅಡಿ ನೀರು ತುಂಬಿದ್ದ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಕೆಆರ್ಎಸ್ ಜಲಾಶಯದಲ್ಲಿ (KRS Dam) ಈ ವರ್ಷ ಇನ್ನೂ ನೀರಿನ ಮಟ್ಟ 92.15 ಅಡಿಗೆ ತಲುಪಿದೆಯಷ್ಟೆ. ಇದು ರಾಜ್ಯದ ಜನತೆಯನ್ನು ಆತಂಕ್ಕೆ ಈಡುಮಾಡಿದೆ.
ಈ ಜಲಾಶಯದಲ್ಲಿ ಕಳೆದ ವರ್ಷ ಇದೇ ದಿನ 2920.82 ಅಡಿ (35.963.TMC) ನೀರಿತ್ತು. 8780 ಕ್ಯೂಸೆಕ್ ನೀರಿನ ಒಳ ಹರಿವು ಮತ್ತು 5400 ಕ್ಯುಸೆಕ್ ಹೊರ ಹರಿವು ಇತ್ತು.
ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ: ಕೆರೆಗಳು ಬರಡು, ಬೆಳೆ ಒಣಗಿ ಅನ್ನದಾತ ಕಂಗಾಲು!
ಮತ್ತೊಂದೆಡೆ, ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲಗೊಂಡಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನೀರಿನ ಅಭಾವ ಸೃಷ್ಟಿಯಾಗಿ ತೀವ್ರತರದ ಸಮಸ್ಯೆ ಎದುರಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:37 am, Mon, 13 July 26