AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ (ಆಗಸ್ಟ್ 04) ನೀರಿನ ಮಟ್ಟ: ರಾಜ್ಯಾದ್ಯಂತ ಮಳೆ ಚುರುಕುಗೊಂಡಿದ್ದು, ಕೆಆರ್‌ಎಸ್, ಆಲಮಟ್ಟಿ ಹಾಗೂ ಹೇಮಾವತಿ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಕೆಆರ್‌ಎಸ್ ನೀರಿನ ಮಟ್ಟ 103.40 ಅಡಿಗೆ ಏರಿಕೆಯಾಗಿದ್ದರೆ, ಆಲಮಟ್ಟಿಗೆ 1.4 ಲಕ್ಷ ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇನ್ನೊಂದೆಡೆ ತುಂಗಭದ್ರಾ ಎಡದಂಡೆ ಕಾಲುವೆ ಕುಸಿದಿದ್ದು, ನೀರು ಹರಿಸಿದರೆ ಕಾಲುವೆ ಒಡೆಯುವ ಭೀತಿಯಲ್ಲಿ ರೈತರು ಆಕ್ರೋಶ ಹೊರಹಾಕಿದ್ದಾರೆ.

Karnataka Dam Water Level: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಜಲಾಶಯಗಳ ಇಂದಿನ ನೀರಿನ ಮಟ್ಟ
ಭಾವನಾ ಹೆಗಡೆ
|

Updated on: Aug 04, 2026 | 9:13 AM

Share

ಮುಖ್ಯಾಂಶಗಳು

  • ಕೆಆರ್‌ಎಸ್ ಮತ್ತು ಆಲಮಟ್ಟಿ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಅಭಿವೃದ್ಧಿ.
  • ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಪ್ರಮುಖ ಡ್ಯಾಂಗಳು ಭರ್ತಿ.
  • ತುಂಗಭದ್ರಾ ಎಡದಂಡೆ ಕಾಲುವೆ ಕುಸಿತ, ನೀರು ಹರಿಸದಂತೆ ರೈತರ ಆಕ್ರೋಶ.

ಬೆಂಗಳೂರು, ಆಗಸ್ಟ್ 04: ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ರೈತರ ಮುಖದಲ್ಲಿ ಹರ್ಷ ಮೂಡಿಸುವ ಜೊತೆಗೆ, ಕೆಲವು ಕಡೆ ಕಾಲುವೆ ದುರಸ್ತಿ ಕೊರತೆಯಿಂದ ಭೀತಿಯೂ ಎದುರಾಗಿದೆ.

1. ಕೆಆರ್‌ಎಸ್ ಜಲಾಶಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಡ್ಯಾಂಗೆ ಬೃಹತ್ ಪ್ರಮಾಣದ ಒಳಹರಿವು ದಾಖಲಾಗಿದೆ.

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 103.40 ಅಡಿ
  • ಒಳಹರಿವು: 31,122 ಕ್ಯೂಸೆಕ್
  • ಹೊರಹರಿವು: 1,882 ಕ್ಯೂಸೆಕ್ (ಕುಡಿಯುವ ನೀರಿಗಾಗಿ)
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 25.594 ಟಿಎಂಸಿ

2. ಆಲಮಟ್ಟಿ ಜಲಾಶಯ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಭಾರಿ ಪ್ರಮಾಣದಲ್ಲಿ ನೀರು ಬಂದಿದ್ದು, ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ಮಟ್ಟ: 518.89 ಮೀಟರ್
  • ಒಳಹರಿವು: 1,40,257 ಕ್ಯೂಸೆಕ್
  • ಹೊರಹರಿವು: 1,49,597 ಕ್ಯೂಸೆಕ್

3. ಹೇಮಾವತಿ ಜಲಾಶಯ (ಹಾಸನ)

ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲೂ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಭರವಸೆ ಮೂಡಿಸಿದೆ.

  • ಗರಿಷ್ಠ ಮಟ್ಟ: 2922 ಅಡಿ (37 ಟಿಎಂಸಿ)
  • ಇಂದಿನ ಮಟ್ಟ: 2911.24 ಅಡಿ (28.409 ಟಿಎಂಸಿ)
  • ಒಳಹರಿವು: 5,041 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್ (ಕಾಲುವೆಗೆ: 00 ಕ್ಯೂಸೆಕ್)

ಕಳೆದ ವರ್ಷ ಇದೇ ದಿನ 2921.80 ಅಡಿ ಅಂದರೆ 36.910 ಟಿಎಂಸಿ ನೀರಿತ್ತು ಹಾಗೂ 9,859 ಕ್ಯೂಸೆಕ್ ಒಳಹರಿವಿತ್ತು.

4. ತುಂಗಭದ್ರಾ ಜಲಾಶಯ

ಮಲೆನಾಡಿನ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, 105 ಟಿಎಂಸಿ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 50 ಟಿಎಂಸಿ ನೀರು ಸಂಗ್ರಹವಾಗಿದೆ. ಸರ್ಕಾರ ಯಾವುದೇ ಕ್ಷಣದಲ್ಲಿ ಕೃಷಿಗೆ ನೀರು ಹರಿಸಲು ಸಿದ್ಧತೆ ನಡೆಸಿದೆಯಾದರೂ, ಕಾಲುವೆ ಒಡೆಯುವ ಭೀತಿ ಎದುರಾಗಿದೆ.

ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಈಗಾಗಲೇ ಕುಸಿದಿದ್ದು, ದುರಸ್ತಿ ಮಾಡದೆ ನೀರು ಬಿಟ್ಟರೆ ಕಾಲುವೆ ಕಟ್ಟೆಯೊಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗುವ ಸಾಧ್ಯತೆಯಿದೆ. ಕಳೆದ ವರ್ಷ ಬಸಾಪುರ ಬಳಿ ಕಾಲುವೆ ಒಡೆದಿದ್ದನ್ನು ನೆನಪಿಸಿಕೊಳ್ಳುತ್ತಿರುವ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ರೈತರು, ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನೀರು ಹರಿಸುವ ಮುನ್ನ ತಕ್ಷಣವೇ ಕಾಲುವೆ ದುರಸ್ತಿಗೊಳಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ