AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ!

ಕರ್ನಾಟಕದ ಜಲಾಶಯಗಳ (ಆಗಸ್ಟ್ 05) ನೀರಿನ ಮಟ್ಟ: ಕಾವೇರಿ ಜಲಾನಯನ ಮತ್ತು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕೆಆರ್‌ಎಸ್ ಹಾಗೂ ತುಂಗಭದ್ರಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಬೆಂಬಲ ಸಿಕ್ಕಂತಾಗಿದೆ. ಇದರಿಂದ ರಾಜ್ಯದ ರೈತರಲ್ಲಿ ಸಂತಸದ ವಾತಾವರಣ ಮೂಡಿದ್ದು, ಕಾವೇರಿ ಮತ್ತು ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳ ಜಲಸಂಪನ್ಮೂಲ ಸ್ಥಿತಿ ಉತ್ತಮಗೊಂಡಿದೆ.

Karnataka Dam Water Level: ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ!
ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ!
ಭಾವನಾ ಹೆಗಡೆ
|

Updated on: Aug 05, 2026 | 10:38 AM

Share

ಮುಖ್ಯಾಂಶಗಳು

  • ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರೆ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಹರಿವು ಹೆಚ್ಚಾಗಿದೆ.
  • ಕೆಆರ್‌ಎಸ್ ಮತ್ತು ತುಂಗಭದ್ರಾ ಡ್ಯಾಂ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.
  • ನೀರಿನ ಮಟ್ಟ ಏರಿಕೆಯಿಂದ ರಾಜ್ಯದ ರೈತರ ಮುಖದಲ್ಲಿ ಹರ್ಷ ವ್ಯಕ್ತವಾಗಿದೆ.

ಬೆಂಗಳೂರು, ಆಗಸ್ಟ್ 05: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ (Dam water level) ಭಾರಿ ಏರಿಕೆ ಕಂಡಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳು ಭರ್ತಿಯತ್ತ ಸಾಗುತ್ತಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಡ್ಯಾಂಗಳಲ್ಲಿಯೂ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದೆ.

1. ತುಂಗಭದ್ರಾ ಜಲಾಶಯ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ. 105 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಒಂದೇ ದಿನದಲ್ಲಿ 9 ಟಿಎಂಸಿ ನೀರು ಸಂಗ್ರಹವಾಗಿದ್ದು, ಪ್ರಸ್ತುತ 59 ಟಿಎಂಸಿ ನೀರಿದೆ. ಇದರಿಂದ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಲ್ಲಿ ಸಂತಸ ಮನೆಮಾಡಿದೆ.

2. ಆಲಮಟ್ಟಿ ಜಲಾಶಯ (ವಿಜಯಪುರ)

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯಕ್ಕೆ 1,45,675 ಕ್ಯೂಸೆಕ್ ಒಳಹರಿವು ಇದ್ದು, 1,51,297 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಇಂದಿನ ಮಟ್ಟ 518.87 ಮೀಟರ್ ತಲುಪಿದೆ.

3. ಕೆಆರ್‌ಎಸ್ ಜಲಾಶಯ (ಮಂಡ್ಯ)

ಕಾವೇರಿ ಕೊಳ್ಳದ ಪ್ರಮುಖ ಡ್ಯಾಂ ಕೆಆರ್‌ಎಸ್‌ನಲ್ಲಿ ಇಂದಿನ ನೀರಿನ ಮಟ್ಟ 105.10 ಅಡಿಯಷ್ಟಿದೆ (ಗರಿಷ್ಠ ಮಟ್ಟ: 124.80 ಅಡಿ). 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಪ್ರಸ್ತುತ 27.077 ಟಿಎಂಸಿ ನೀರು ಸಂಗ್ರಹವಿದ್ದು, 19,275 ಕ್ಯೂಸೆಕ್ ಒಳಹರಿವು ಮತ್ತು 1,985 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.

4. ಕಬಿನಿ ಜಲಾಶಯ (ಮೈಸೂರು)

ಕಬಿನಿ ಜಲಾಶಯದಲ್ಲಿ ಕಳೆದ 24 ಗಂಟೆಗಳಲ್ಲಿ 45 ಮಿ.ಮೀ. ಮಳೆಯಾಗಿದ್ದು, 22,256 ಕ್ಯೂಸೆಕ್ ಒಳಹರಿವಿದೆ. 19.52 ಟಿಎಂಸಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ 18.26 ಟಿಎಂಸಿ ನೀರು ಸಂಗ್ರಹವಾಗಿದ್ದು, 27,000 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ (ಇಂದಿನ ಮಟ್ಟ: 82.04 ಅಡಿ).

5. ಹೇಮಾವತಿ ಜಲಾಶಯ (ಗೊರೂರು, ಹಾಸನ)

37 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ 28.782 ಟಿಎಂಸಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಮಟ್ಟ 2912.70 ಅಡಿಯಿದ್ದು, 4,879 ಕ್ಯೂಸೆಕ್ ಒಳಹರಿವು ಹಾಗೂ 500 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ