AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆಲಮಟ್ಟಿ ಭರ್ತಿ, ಕಾವೇರಿ ಕೊಳ್ಳದಲ್ಲಿ ಇಳಿಕೆ ಕಂಡ ಒಳಹರಿವು!

ಕರ್ನಾಟಕದ ಜಲಾಶಯಗಳ (ಆಗಸ್ಟ್ 19) ನೀರಿನ ಮಟ್ಟ: ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು ಭಾರಿ ಹೊರಹರಿವು ದಾಖಲಾಗಿದೆ. ಕೆಆರ್‌ಎಸ್‌ನಲ್ಲಿ ಒಳಹರಿವು ತಗ್ಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಕಬಿನಿ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಇಂದಿನ ನೀರು ಸಂಗ್ರಹ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿ ಓದಿ.

Karnataka Dam Water Level: ಆಲಮಟ್ಟಿ ಭರ್ತಿ, ಕಾವೇರಿ ಕೊಳ್ಳದಲ್ಲಿ ಇಳಿಕೆ ಕಂಡ ಒಳಹರಿವು!
ಲಿಂಗನಮಕ್ಕಿ ಜಲಾಶಯದ
ಭಾವನಾ ಹೆಗಡೆ
|

Updated on: Aug 19, 2026 | 11:33 AM

Share

ಮುಖ್ಯಾಂಶಗಳು

  • ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಬೃಹತ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
  • ಕೆಆರ್‌ಎಸ್ ಜಲಾಶಯದಲ್ಲಿ ಒಳಹರಿವು ಇಳಿಕೆ, ರೈತರಲ್ಲಿ ಹೆಚ್ಚಿದ ಆತಂಕ.
  • ಲಿಂಗನಮಕ್ಕಿ ಹಾಗೂ ಭದ್ರಾ ಜಲಾಶಯಗಳಿಗೆ ಹರಿದು ಬರುತ್ತಿರುವ ಸ್ಥಿರ ಒಳಹರಿವು.

ಬೆಂಗಳೂರು, ಆಗಸ್ಟ್ 19: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದಲ್ಲಿ ಏರಿಳಿತಗಳು ಕಂಡುಬಂದಿವೆ. ಕೃಷ್ಣಾ ನದಿ ಜಲಾನಯನ ಪ್ರದೇಶದ ಆಲಮಟ್ಟಿ ಜಲಾಶಯವು ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಬೃಹತ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೆಆರ್‌ಎಸ್ ಸೇರಿದಂತೆ ಪ್ರಮುಖ ಡ್ಯಾಂಗಳಿಗೆ ಒಳಹರಿವು ಗಣನೀಯವಾಗಿ ಇಳಿಕೆಯಾಗಿದೆ. ಇದರಿಂದ ಮಂಡ್ಯ ಭಾಗದ ರೈತರಲ್ಲಿ ಆತಂಕ ಮೂಡಿದ್ದು, ನದಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಆಲಮಟ್ಟಿ ಜಲಾಶಯ

  • ಒಳಹರಿವು: 48,348 ಕ್ಯೂಸೆಕ್
  • ಹೊರಹರಿವು: 52,410 ಕ್ಯೂಸೆಕ್

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿ ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್‌ಗೆ ಪ್ರಸ್ತುತ 519.56 ಮೀಟರ್ ನೀರಿದೆ.

ಕೆಆರ್‌ಎಸ್ ಜಲಾಶಯ

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಮಳೆ ಕೊರತೆಯಿಂದ ಒಳಹರಿವು 1,752 ಕ್ಯೂಸೆಕ್‌ಗೆ ಕುಸಿದಿದೆ. ಡ್ಯಾಂ ಗರಿಷ್ಠ ಮಟ್ಟ 124.80 ಅಡಿಯಿದ್ದು, ಇಂದಿನ ಮಟ್ಟ 109.22 ಅಡಿಯಾಗಿದೆ (30.944 TMC). ರೈತರ ಬೆಳೆಗೆ ನೀರು ನೀಡದ ಸರ್ಕಾರ, ತಮಿಳುನಾಡಿಗೆ ಕಾವೇರಿ ನದಿಗೆ 2,294 ಕ್ಯೂಸೆಕ್ ನೀರು ಬಿಡುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಕಬಿನಿ ಜಲಾಶಯ

  • ಒಳಹರಿವು: 7,326 ಕ್ಯೂಸೆಕ್
  • ಒಟ್ಟು ಹೊರಹರಿವು: 13,600 ಕ್ಯೂಸೆಕ್ (ನದಿಗೆ 11,940 ಕ್ಯೂಸೆಕ್ ಹಾಗೂ ಕಾಲುವೆಗಳಿಗೆ 1,660 ಕ್ಯೂಸೆಕ್)

ಮೈಸೂರಿನ ಕಬಿನಿ ಜಲಾಶಯದ ಗರಿಷ್ಠ ಮಟ್ಟ 84.00 ಅಡಿಯಿದ್ದು, ಪ್ರಸ್ತುತ 77.93 ಅಡಿ (15.87 TMC) ನೀರಿದೆ.

ಭದ್ರಾ ಜಲಾಶಯ

  • ಒಳಹರಿವು: 4,486 ಕ್ಯೂಸೆಕ್
  • ಹೊರಹರಿವು: 204 ಕ್ಯೂಸೆಕ್

ಚಿಕ್ಕಮಗಳೂರು/ಶಿವಮೊಗ್ಗ ಗಡಿಭಾಗದ ಭದ್ರಾ ಜಲಾಶಯದ ಗರಿಷ್ಠ ಮಟ್ಟ 186.00 ಅಡಿಯಿದ್ದು, ಪ್ರಸ್ತುತ ಮಟ್ಟ 174.00 ಅಡಿಯಾಗಿದೆ (57.257 TMC).

ಲಿಂಗನಮಕ್ಕಿ ಜಲಾಶಯ

  • ಒಳಹರಿವು: 9,544 ಕ್ಯೂಸೆಕ್
  • ಇಂದಿನ ಏರಿಕೆ: 0.20 ಅಡಿ

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819.00 ಅಡಿಯಿದ್ದು, ಪ್ರಸ್ತುತ ನೀರಿನ ಮಟ್ಟ 1795.35 ಅಡಿಗೆ (ಶೇ 55.90) ತಲುಪಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ