AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆಲಮಟ್ಟಿ ಭರ್ತಿ, ಕೆಆರ್‌ಎಸ್ ಹಾಗೂ ಹೇಮಾವತಿಯಲ್ಲಿ ಜಲಮಟ್ಟ ಏರಿಕೆ!

ಕರ್ನಾಟಕದ ಜಲಾಶಯಗಳ (ಆಗಸ್ಟ್ 29) ನೀರಿನ ಮಟ್ಟ: ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಆಲಮಟ್ಟಿ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಇನ್ನು ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಆಲಮಟ್ಟಿ ಭರ್ತಿ, ಕೆಆರ್‌ಎಸ್ ಹಾಗೂ ಹೇಮಾವತಿಯಲ್ಲಿ ಜಲಮಟ್ಟ ಏರಿಕೆ!
ಕೆಆರ್‌ಎಸ್ ಜಲಾಶಯ
ಭಾವನಾ ಹೆಗಡೆ
|

Updated on: Aug 29, 2026 | 11:01 AM

Share

ಮುಖ್ಯಾಂಶಗಳು

  • ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ.
  • ಹೇಮಾವತಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದ್ದು ಒಳಹರಿವು ಹೆಚ್ಚಳವಾಗಿದೆ.
  • ಕೆಆರ್‌ಎಸ್ ಜಲಾಶಯಕ್ಕೆ ಎಂಟು ಸಾವಿರ ಕ್ಯೂಸೆಕ್ ಹತ್ತಿರ ಒಳಹರಿವು ದಾಖಲಾಗಿದೆ.

ಬೆಂಗಳೂರು, ಆಗಸ್ಟ್ 29: ರಾಜ್ಯದ ಪ್ರಮುಖ ಜಲಾಶಯಗಳಿಗೆ ಮಳೆಯಿಂದಾಗಿ ನೀರು ಹರಿದುಬರುತ್ತಿದ್ದು, ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಅದೇ ರೀತಿ ಹಾಸನದ ಹೇಮಾವತಿ ಹಾಗೂ ಮಂಡ್ಯದ ಕೆಆರ್‌ಎಸ್ ಜಲಾಶಯಗಳಿಗೂ ಉತ್ತಮ ಒಳಹರಿವು ದಾಖಲಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀ ಪೂರೈಕೆಗೆ ರೈತರಲ್ಲಿ ನಿರಾಳತೆ ಮೂಡಿಸಿದೆ. ಪ್ರಮುಖ ಜಲಾಶಯಗಳ ಇಂದಿನ ವಿವರವಾದ ನೀರಿನ ಮಟ್ಟ ಹಾಗೂ ಹರಿವಿನ ಮಾಹಿತಿ ಇಲ್ಲಿದೆ.

ಹೇಮಾವತಿ ಜಲಾಶಯ (ಹಾಸನ)

ಹಾಸನ ತಾಲೂಕಿನ ಗೊರೂರು ಸಮೀಪವಿರುವ ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2,922 ಅಡಿಗಳಾಗಿದ್ದು (37 TMC), ಇಂದಿನ ನೀರಿನ ಮಟ್ಟ 2,913.58 ಅಡಿಗಳಿಗೆ (29.496 TMC) ತಲುಪಿದೆ. ಜಲಾಶಯಕ್ಕೆ ಪ್ರಸ್ತುತ 2,173 ಕ್ಯೂಸೆಕ್ ನೀರಿನ ಒಳಹರಿವಿದ್ದು, ನದಿಗೆ 1,800 ಕ್ಯೂಸೆಕ್ ಹಾಗೂ ಕಾಲುವೆಗೆ 3,700 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 2,921.81 ಅಡಿ (36.919 TMC) ನೀರಿತ್ತು. ಆಗ ಒಳಹರಿವು 7,523 ಕ್ಯೂಸೆಕ್ ಹಾಗೂ ನದಿಗೆ 2,400 ಕ್ಯೂಸೆಕ್ ಮತ್ತು ಕಾಲುವೆಗೆ 5,075 ಕ್ಯೂಸೆಕ್ ಹೊರಹರಿವು ದಾಖಲಾಗಿತ್ತು.

ಆಲಮಟ್ಟಿ ಜಲಾಶಯ (ವಿಜಯಪುರ)

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತದಲ್ಲಿದೆ. ಡ್ಯಾಂನ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಇಂದಿನ ನೀರಿನ ಮಟ್ಟ 519.58 ಮೀಟರ್ ತಲುಪಿದೆ. ಜಲಾಶಯಕ್ಕೆ 26,883 ಕ್ಯೂಸೆಕ್ ನೀರಿನ ಒಳಹರಿವಿದ್ದು, ಅಷ್ಟೇ ಪ್ರಮಾಣದ (26,883 ಕ್ಯೂಸೆಕ್) ನೀರನ್ನು ನದಿಗೆ ಹೊರಬಿಡಲಾಗುತ್ತಿದೆ.

ಕೆಆರ್‌ಎಸ್ ಜಲಾಶಯ (ಮಂಡ್ಯ)

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು (ಗರಿಷ್ಠ ಸಾಮರ್ಥ್ಯ 49.452 TMC), ಇಂದಿನ ನೀರಿನ ಮಟ್ಟ 110.28 ಅಡಿಗಳಷ್ಟಿದೆ (ಸಂಗ್ರಹ 32.004 TMC). ಜಲಾಶಯಕ್ಕೆ ಪ್ರಸ್ತುತ 7,955 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, 6,972 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ