
ಬೆಂಗಳೂರು, ಸೆಪ್ಟೆಂಬರ್ 04: ರಾಜ್ಯಾದ್ಯಂತ ಮುಂಗಾರು ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹದಲ್ಲಿಯೂ ಹೆಚ್ಚು ಕಮ್ಮಿಯಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಜಲಾಶಯವು ಸಂಪೂರ್ಣ ಭರ್ತಿಯಾಗಿ ಗರಿಷ್ಠ ಮಟ್ಟ ತಲುಪಿದ್ದು, ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಆದರೆ, ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಒಳಹರಿವು ಗಣನೀಯವಾಗಿ ಕಡಿಮೆಯಾಗಿದ್ದು, ಕೆಆರ್ಎಸ್ ಹಾಗೂ ಹೇಮಾವತಿ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದೇ ವೇಳೆ, ಚಾಮರಾಜನಗರದಲ್ಲಿ ಒಪ್ಪಂದದಂತೆ ಕಬ್ಬು ಕಟಾವು ಮಾಡದ ನಂಜನಗೂಡಿನ ಸಕ್ಕರೆ ಕಾರ್ಖಾನೆ ವಿರುದ್ಧ ರೈತ ಆಕ್ರೋಶ ಹೊರಹಾಕಿದ್ದು, ಜಮೀನಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಸಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಳಹರಿವು ಮತ್ತು ನೀರು ಸಂಗ್ರಹ ಕಡಿಮೆಯಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಡ್ಯಾಂನಲ್ಲಿ ನೀರಿನ ಸಂಗ್ರಹ ಕುಸಿದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:42 am, Fri, 4 September 26