
ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದಲ್ಲಿ ಮುಂಗಾರು ಮಳೆಯ ಏರಿಳಿತದಿಂದಾಗಿ ಕಾವೇರಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಮಟ್ಟದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬರುತ್ತಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತದಲ್ಲಿದ್ದರೆ, ದಕ್ಷಿಣ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್ಎಸ್) ಹಾಗೂ ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಸ್ಥಿತಿಗತಿ ಹಾಗೂ ಇಂದಿನ ಅಧಿಕೃತ ವಿವರ ಇಲ್ಲಿದೆ.
ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೆಆರ್ಎಸ್ನಲ್ಲಿ ನೀರಿನ ಸಂಗ್ರಹ ಕುಸಿತ ಕಂಡಿದೆ.
ಮೈಸೂರು ಮತ್ತು ಸುತ್ತಮುತ್ತಲಿನ ಭಾಗಕ್ಕೆ ಕುಡಿಯುವ ನೀರು ಒದಗಿಸುವ ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಮಧ್ಯಮ ಹಂತದಲ್ಲಿದೆ.
ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಉತ್ತಮ ನೀರಿನ ಮಟ್ಟ ಕಾಯ್ದುಕೊಂಡಿದೆ. ಜಲಾಶಯ ಭರ್ತಿಯಾಗಿದ್ದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಮಾಧಾನ ತಂದಿದ್ದರೆ, ಕೆಆರ್ಎಸ್ ಹಾಗೂ ಕಬಿನಿ ಭಾಗದಲ್ಲಿ ಹೊರಹರಿವು ಹೆಚ್ಚಿ ಒಳಹರಿವು ಕಡಿಮೆಯಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಆತಂಕ ಎದುರಾಗುವ ಸಾಧ್ಯತೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ