AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ

ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಜುಲೈ 23: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ 100 ಟಿಎಂಸಿ ದಾಟಿದೆ. ಇನ್ನೂ ಕೆಲ ದಿನ ಇದೇ ಪ್ರಮಾಣದ ಒಳಹರಿವು ಮುಂದುವರಿದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jul 23, 2026 | 9:47 AM

Share

ಬೆಂಗಳೂರು, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Monsoon Rain) ಪರಿಣಾಮ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ ಜಲಾಶಯದಲ್ಲಿನ ನೀರಿನ ಸಂಗ್ರಹ 100 ಟಿಎಂಸಿ ಗಡಿ ದಾಟಿ 101.37 ಟಿಎಂಸಿ ತಲುಪಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಹೆಚ್ಚಿದ ಒಳಹರಿವಿನ ಹಿನ್ನೆಲೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮವು ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಗಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡುತ್ತಿದೆ. ಆಲಮಟ್ಟಿ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ (ಜುಲೈ 23) ನೀರಿನ ಮಟ್ಟದ (Karnataka Dam Water Level) ವಿವರ ಇಲ್ಲಿದೆ.

ಆಲಮಟ್ಟಿ ಜಲಾಶಯ

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 518.41 ಮೀಟರ್
  • ಒಳಹರಿವು: 65,752 ಕ್ಯೂಸೆಕ್
  • ಹೊರಹರಿವು: 38,067 ಕ್ಯೂಸೆಕ್
  • ನೀರಿನ ಸಂಗ್ರಹ: 101.37 ಟಿಎಂಸಿ

ಕೆಆರ್‌ಎಸ್ ಜಲಾಶಯ (ಮಂಡ್ಯ)

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 92.08 ಅಡಿ
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ನೀರಿನ ಸಂಗ್ರಹ: 17.214 ಟಿಎಂಸಿ
  • ಒಳಹರಿವು: 703 ಕ್ಯೂಸೆಕ್
  • ಹೊರಹರಿವು: 1,800 ಕ್ಯೂಸೆಕ್

ಕಬಿನಿ ಜಲಾಶಯ (ಮೈಸೂರು)

  • ಇಂದಿನ ನೀರಿನ ಮಟ್ಟ: 72.85 ಅಡಿ
  • ಕಳೆದ ವರ್ಷ ಇದೇ ದಿನ: 83.63 ಅಡಿ
  • ಇಂದಿನ ನೀರಿನ ಸಂಗ್ರಹ: 13.12 ಟಿಎಂಸಿ
  • ಕಳೆದ ವರ್ಷ: 19.27 ಟಿಎಂಸಿ
  • ಒಳಹರಿವು: 1,805 ಕ್ಯೂಸೆಕ್
  • ಕಳೆದ ವರ್ಷ: 12,122 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್
  • ಕಳೆದ ವರ್ಷ: 12,000 ಕ್ಯೂಸೆಕ್
  • ಕಳೆದ 24 ಗಂಟೆಗಳ ಮಳೆ: 10 ಮಿ.ಮೀ.

ಹೇಮಾವತಿ ಜಲಾಶಯ (ಹಾಸನ)

  • ಗರಿಷ್ಠ ಮಟ್ಟ: 2922 ಅಡಿ (37 ಟಿಎಂಸಿ)
  • ಇಂದಿನ ಮಟ್ಟ: 2904.57 ಅಡಿ
  • ಇಂದಿನ ಸಂಗ್ರಹ: 22.767 ಟಿಎಂಸಿ
  • ಒಳಹರಿವು: 1,117 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್

ಕಳೆದ ವರ್ಷ ಇದೇ ದಿನ ಜಲಾಶಯದ ಮಟ್ಟ 2921.03 ಅಡಿ (36.165 ಟಿಎಂಸಿ) ಇತ್ತು. ಆಗ 6,862 ಕ್ಯೂಸೆಕ್ ಒಳಹರಿವು ಹಾಗೂ 2,400 ಕ್ಯೂಸೆಕ್ ಹೊರಹರಿವು ದಾಖಲಾಗಿತ್ತು. ಈ ಬಾರಿ ನೀರಿನ ಸಂಗ್ರಹ ಮತ್ತು ಒಳಹರಿವು ಎರಡೂ ಗಮನಾರ್ಹವಾಗಿ ಕಡಿಮೆಯಾಗಿದೆ.

ತುಂಗಭದ್ರಾ ಜಲಾಶಯ

  • ಗರಿಷ್ಠ ಮಟ್ಟ (FRL): 1633.00 ಅಡಿ
  • ಇಂದಿನ ನೀರಿನ ಮಟ್ಟ: 1604.55 ಅಡಿ
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 105.788 ಟಿಎಂಸಿ
  • ಇಂದಿನ ಸಂಗ್ರಹ: 28.002 ಟಿಎಂಸಿ
  • ಸರಾಸರಿ ಒಳಹರಿವು (24 ಗಂಟೆ): 21,089 ಕ್ಯೂಸೆಕ್
  • ಪ್ರಸ್ತುತ (Live) ಒಳಹರಿವು: 24,821 ಕ್ಯೂಸೆಕ್
  • ಸರಾಸರಿ ಹೊರಹರಿವು: 3,035 ಕ್ಯೂಸೆಕ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ