ಪಂಜಾಬ್​, ಉತ್ತರ ಪ್ರದೇಶಕ್ಕೆ ರಾಜ್ಯದಿಂದ ವಿದ್ಯುತ್​ ವಾಪಸ್​​​

ರಾಜ್ಯದಲ್ಲಿ ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಕೊರತೆಯಿಂದ ಕಳೆದ ವರ್ಷ ಅಗಸ್ಟನಲ್ಲೇ ಬೇಸಿಗೆ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಜಲವಿದ್ಯುತ್​ ಉತ್ಪಾದನೆಗೆ ಭಾರಿ ಹೊಡೆತ ಬಿದ್ದಿತ್ತು. ಉಷ್ಣ ವಿದ್ಯುತ್ ​ಸ್ಥಾವರದಲ್ಲೂ ವಿದ್ಯುತ್​ ಉತ್ಪಾದನೆ ಕಡಿಮೆಯಾಗಿದ್ದರಿಂದ ಪೂರೈಕೆಗೆ ಹೊಡೆತ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಂಜಾಬ್​ ಮತ್ತು ಉತ್ತರ ಪ್ರದೇಶ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಒಪ್ಪಂದ ಮಾಡಿಕೊಂಡಿದೆ.

ಪಂಜಾಬ್​, ಉತ್ತರ ಪ್ರದೇಶಕ್ಕೆ ರಾಜ್ಯದಿಂದ ವಿದ್ಯುತ್​ ವಾಪಸ್​​​
ಕೆಜೆ ಜಾರ್ಜ್​
Follow us
|

Updated on: Jun 11, 2024 | 9:47 AM

ಬೆಂಗಳೂರು, ಜೂನ್​ 08: ರಾಜ್ಯದಲ್ಲಿ ತಲೆದೂರಿದ್ದ ವಿದ್ಯುತ್​ ಕ್ಷಾಮವನ್ನು ನೀಗಿಸಲು ಸರ್ಕಾರ (Karnataka Government) ಪಂಜಾಬ್ (Punjab)​​ ಮತ್ತು ಉತ್ತರ ಪ್ರದೇಶದೊಂದಿಗೆ (Uttar Pradesh) 2023ರ ನವೆಂಬರ್​ನಿಂದ 2024ರ ಮೇವರೆಗೂ ವಿದ್ಯುತ್​​ ವಿನಿಮಯದ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಂತೆ ಇದೀಗ ಸರ್ಕಾರ ಜೂನ್​ 16ರಿಂದ ಪಂಜಾಬ್​ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ವಿದ್ಯುತ್​ (Electricity) ಹಿಂದುರುಗಿಸುತ್ತದೆ.

ರಾಜ್ಯದಲ್ಲಿ ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಕೊರತೆಯಿಂದ ಕಳೆದ ವರ್ಷ ಅಗಸ್ಟನಲ್ಲೇ ಬೇಸಿಗೆ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಜಲವಿದ್ಯುತ್​ ಉತ್ಪಾದನೆಗೆ ಭಾರಿ ಹೊಡೆತ ಬಿದ್ದಿತು. ಸಮರ್ಪಕ ಪ್ರಮಾಣದಲ್ಲಿ ವಿದ್ಯತ್​ ಉತ್ಪಾದನೆಯಾಗಲಿಲ್ಲ. ಮತ್ತು ಉಷ್ಣ ವಿದ್ಯುತ್ ​ಸ್ಥಾವರದಲ್ಲೂ ವಿದ್ಯುತ್​ ಉತ್ಪಾದನೆ ಕಡಿಮೆಯಾಗಿದ್ದರಿಂದ ಪೂರೈಕೆಗೆ ಹೊಡೆತ ಬಿತ್ತು. ಅಲ್ಲದೆ, ಯಾವುದೇ ಕಾರಣಕ್ಕೂ ಲೋಡ್​ ಶೆಡ್ಡಿಂಗ್​ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪಂಜಾಬ್​ ಮತ್ತು ಉತ್ತರ ಪ್ರದೇಶನಿಂದ ವಿದ್ಯುತ್​ ವಿನಿಮಯ ಮಾಡಿಕೊಳ್ಳಲಾಯಿತು.

ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ

2023ರ ಅಕ್ಟೋಬರ್​ನಿಂದ 2024ರ ಮೇ ವರೆಗೆ ಪ್ರತಿದಿನ ಉತ್ತರ ಪ್ರದೇಶದಿಂದ 300 ರಿಂದ 600 ಮೆಗಾವ್ಯಾಟ್​ ವಿದ್ಯುತ್​​ ಪಡೆದುಕೊಳ್ಳಲಾಗಿದೆ. ಇದೇ ರೀತಿ ಪಂಜಾಬ್​ನಿಂದ 2023ರ ನವೆಂಬರ್​​ನಿಂದ 2024ರ ಮೇ ವರೆಗೆ ಪ್ರತಿದಿನ 500 ಮೆಗಾವ್ಯಾಟ್​ ವಿದ್ಯುತ್​ ಪಡೆದುಕೊಳ್ಳಲಾಗಿದೆ. ಇದೀಗ, ಜೂನ್​ 16ರಿಂದ ಸೆಪ್ಟೆಂಬರ್​ 30ರವರೆಗೆ ಹಿಂತಿರುಗಿಸಲಾಗುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್​​ ಹೇಳಿದರು.

ಈ ವರ್ಷ ಫೆಬ್ರವರಿ 12 ರಂದು ರಾಜ್ಯದಲ್ಲಿ 17,220 ಮೆಗಾವ್ಯಾಟ್​ ವಿದ್ಯುತ್​ ಬಳಕೆಯಾಗಿದೆ. 2023ರ ಅಗಸ್ಟ್​ 25 ರಂದು 16,950 ಮೆಗಾವ್ಯಾಟ್​ ವಿದ್ಯುತ್​ ಬಳಕೆಯಾಗಿದೆ. ಇದೇ ದಿನಾಂಕದಂದು 2022ರಲ್ಲಿ 11,268 ಮೆಗಾವ್ಯಾಟ್​ ವಿದ್ಯುತ್​ ಬಳಕೆಯಾಗಿತ್ತು. ಕಳೆದ ವರ್ಷ ಅಗಸ್ಟ್​ನಲ್ಲಿ ರಾಜ್ಯದಲ್ಲಿ ಪ್ರತಿದಿನ 1500-2000 ಮೆಗಾವ್ಯಾಟ್​ ವಿದ್ಯುತ್​ ಕೊರತೆಯಾಗಿತ್ತು ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್