AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ

ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ
ಸಚಿವ ಆರ್. ಅಶೋಕ್
Follow us
TV9 Web
| Updated By: guruganesh bhat

Updated on:Jun 28, 2021 | 5:37 PM

ಬೆಂಗಳೂರು: ಕೊವಿಡ್ 3ನೇ ಅಲೆ ನಿರ್ವಹಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಪ್ರತ್ಯೇಕ ಹೊಸ ಸಮಿತಿ ರಚಿಸಲಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಆರೋಪದ ಬಗ್ಗೆ ವೈಯಕ್ತಿಕ ಜಾಹೀರಾತಿಗೆ ಇಲಾಖೆ ಹಣ ಬಳಕೆ ಆರೋಪ ಕೇಳಿಬಂದಿರುವ ಕುರಿತೂ ಪ್ರತಿಕ್ರಿಯೆ ನೀಡಿರುವ ಅವರು, ಸಂಕಷ್ಟ ಬಂದಾಗ ಸುಧಾಕರ್ ನಮ್ಮ ಜೊತೆಗೂಡಿ ಕೆಲಸ ಮಾಡಿದ್ದಾರೆ. ಎಲ್ಲ ಜವಾಬ್ದಾರಿ ಹಂಚಿಕೊಂಡು ನಾನೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಲ್ಲರೂ ಕೆಲಸ ಮಾಡಿದ್ದೇವೆ. ಈ ಕುರಿತು ಸಚಿವ ಸುಧಾಕರ್ ಜತೆಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖ ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 3,36,73,392 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಪ್ರತಿನಿತ್ಯ ಒಂದೂವರೆ ಲಕ್ಷ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ. ಕಳೆದ 2 ದಿನಗಳಿಂದ 11 ಜಿಲ್ಲೆಗಳಲ್ಲಿ ಕೊವಿಡ್​ನಿಂದ ಸಾವಾಗಿಲ್ಲ. ಡಾ.ರೆಡ್ಡೀಸ್ ಲ್ಯಾಬ್‌ನಿಂದ 2ಜಿ ಔಷಧ ಬಿಡುಗಡೆಯಾಗಿದೆ. ಈ ಔಷಧವನ್ನು ಖರೀದಿ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 3ನೇ ಅಲೆ ವೇಳೆಗೆ ಅಗತ್ಯ ಪ್ರಮಾಣದ ಔಷಧ ಖರೀದಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

1001 ವೈದ್ಯರನ್ನು ಹೊರಗುತ್ತಿಗೆಯಲ್ಲಿ ತೆಗೆದುಕೊಂಡಿದ್ದೇವೆ. ಜಿಲ್ಲಾ, ತಾಲೂಕು ಐಸಿಯುನಲ್ಲಿ ಇವರನ್ನು ನೇಮಿಸುತ್ತೇವೆ. 666 ವೈದ್ಯರನ್ನ ಐಸಿಯುನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. 248 ವೈದ್ಯರನ್ನು NHMರಡಿಯಲ್ಲಿ ನೇಮಕ ಮಾಡಲಾಗಿದೆ. 90 ವೈದ್ಯರನ್ನ ಸಮುದಾಯ ಆರೋಗ್ಯ ವೈದ್ಯರಾಗಿ ನೇಮಕ ಮಾಡಲಾಗಿದೆ. ಒಟ್ಟಾರೆಯಾಗಿ 2,108 ವೈದ್ಯರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ 1,740 ವೈದ್ಯರ ನೇರ ನೇಮಕಾತಿ ಮಾಡಲಾಗಿದೆ . ಈ ಮೂಲಕ ಒಟ್ಟು 4 ಸಾವಿರ ವೈದ್ಯರನ್ನು ನೇಮಿಸಿಕೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಇದನ್ನೂ ಓದಿ: 

ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

(Karnataka Revenue Minister R Ashok says will form new committee to combat Covid 3rd wave in the state)

Published On - 5:10 pm, Mon, 28 June 21

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ