AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ.

ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 21, 2023 | 7:11 PM

Share

ಬೆಂಗಳೂರು: ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ (Rice Price) ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ (Karnataka Rice Millers Federation) ಚಿಂತನೆ ನಡೆಸಿದೆ. ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್​​​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ. ಇದರೊಂದಿಗೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​​​ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ಸರ್ಕಾರ ನೀಡಬೇಕಿದೆ. ಯೋಜನೆ ಇನ್ನಷ್ಟೇ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳಬೇಕಿದೆ. ಯೋಜನೆ ಜಾರಿಗೆ ಅಕ್ಕಿ ಖರೀದಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ಅಂತಿಮವಾಗಿ ಈ ಯೋಜನೆ ಜಾರಿಯಾದರೂ ಕೇವಲ ಬಿಪಿಎಲ್​ ಕಾರ್ಡ್​​​ದಾರರಿಗಷ್ಟೇ ಪ್ರಯೋಜನವಾಗುವುದರಿಂದ ಅಕ್ಕಿ ಬೆಲೆ ಹೆಚ್ಚಳವಾದರೆ ಅದರ ಬಿಸಿ ನೇರವಾಗಿ ಮಧ್ಯಮವರ್ಗದ ಜನರಿಗೆ ತಟ್ಟಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ