AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 7 ತಿಂಗಳ ಮಗು ಹಾಗೂ ವೃದ್ಧ ದಂಪತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರದ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಹಾಗೂ ಚಿಕ್ಕಬಳ್ಳಾಪುರದ ಸಾದಲಿ ಕ್ರಾಸ್ ಬಳಿ ಅಪಘಾತಗಳು ಸಂಭವಿಸಿವೆ.

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು
ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳುImage Credit source: tv9
ಗಣಪತಿ ಶರ್ಮಾ
|

Updated on: Jun 04, 2026 | 11:36 AM

Share

ಬೆಂಗಳೂರು, ಜೂನ್ 4: ಚಾಮರಾಜನಗರ (Chamarajanagar) ಮತ್ತು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗಳಲ್ಲಿ ಗುರುವಾರ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಈ ಎರಡೂ ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಮುಖ್ಯಾಂಶಗಳು

  • ಚಾಮರಾಜನಗರದ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ಡಿಕ್ಕಿ; ವೃದ್ಧ ಹಾಗೂ ಮಗು ಸಾವು.
  • ಚಿಕ್ಕಬಳ್ಳಾಪುರದ ಸಾದಲಿ ಕ್ರಾಸ್ ಬಳಿ ಟಿವಿಎಸ್ ಎಕ್ಸೇಲ್‌ಗೆ ಸರ್ಕಾರಿ ಬಸ್ ಡಿಕ್ಕಿ
  • ಬಸ್ ಚಕ್ರದಡಿ ಸಿಲುಕಿ ವೃದ್ಧ ದಂಪತಿ ಸ್ಥಳದಲ್ಲೇ ದುರ್ಮರಣ.

ಚಾಮರಾಜನಗರದಲ್ಲಿ ಕಾರುಗಳ ಡಿಕ್ಕಿ: ಇಬ್ಬರ ಸಾವು

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ವೇಗವಾಗಿ ಬಂದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಮುಬಾರಕ್ (70) ಹಾಗೂ ಕೇವಲ 7 ತಿಂಗಳ ಹಸುಗೂಸು ಸ್ಥಳದಲ್ಲೇ ಕೊನೆಯುಸಿರೆಳೆದಿವೆ. ಇನ್ನುಳಿದಂತೆ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐವರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಾಮರಾಜನಗರದ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಎಪಿಎಸ್ಆರ್ಟಿಸಿ ಬಸ್ ಧಾವಂತಕ್ಕೆ ದಂಪತಿ ಬಲಿ

ಇನ್ನೊಂದೆಡೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ (NH 44) ಸಾದಲಿ ಕ್ರಾಸ್ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಟಿವಿಎಸ್ ಎಕ್ಸೇಲ್ (TVS XL) ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೃದ್ಧ ದಂಪತಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ (APSRTC) ಬಸ್ ಡಿಕ್ಕಿ ಹೊಡೆದಿದೆ. ಕದರಿಯಿಂದ ಬೆಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಈ ಬಸ್ ಬರುವುದನ್ನು ಗಮನಿಸದೇ ದ್ವಿಚಕ್ರ ವಾಹನ ಸವಾರರು ದಿಢೀರ್ ರಸ್ತೆ ತಿರುವು (ಟರ್ನ್) ಪಡೆದಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಲಕ್ಷ್ಮಣ (75) ಹಾಗೂ ಅವರ ಪತ್ನಿ ರತ್ನಮ್ಮ (70) ಬಸ್ಸಿನ ಚಕ್ರದ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೈಕ್​ ಡಿಕ್ಕಿ ತಪ್ಪಿಸಲು ಹೋಗಿ 4 ಕಾರುಗಳ ನಡುವೆ ಸರಣಿ ಅಪಘಾತ

ಮೃತರು ಶಿಡ್ಲಘಟ್ಟ ತಾಲ್ಲೂಕಿನ ತಿರುಕಾಚೇನಹಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವರದಿ: ಸೂರಜ್ ಪ್ರಸಾದ್ ಎಸ್​ಎನ್ ಮತ್ತು ಭೀಮಪ್ಪ ಪಾಟೀಲ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’