AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಹೊಸದಾಗಿ 1,894 ಬಸ್​​ಗಳನ್ನು ಖರೀದಿಸಲು ರಾಜ್ಯ ಸಾರಿಗೆ ನಿಗಮ ಚಿಂತನೆ

ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮತ್ತು ಸುರಕ್ಷಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಈ ವರ್ಷ 1,894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಯೋಚಿಸಿವೆ.

Shakti Yojana: ಹೊಸದಾಗಿ 1,894 ಬಸ್​​ಗಳನ್ನು ಖರೀದಿಸಲು ರಾಜ್ಯ ಸಾರಿಗೆ ನಿಗಮ ಚಿಂತನೆ
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
|

Updated on:Jun 12, 2023 | 9:06 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ನಿನ್ನೆ (ಜೂ.11) ಶಕ್ತಿ ಯೋಜನೆಗೆ (Shakti Yojana) ಚಾಲನೆ ನೀಡಿತು. ಈ ಯೋಜನೆಯ ಅಡಿ ಮಹಿಳೆಯರು ರಾಜ್ಯ ಸಾರಿಗೆಯ ನಾಲ್ಕು ನಿಗಮದ (KSRTC, BMTC, NWKSRTC, KKRTC) ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮತ್ತು ಸುರಕ್ಷಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಈ ವರ್ಷ 1,894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಯೋಚಿಸಿವೆ. ಶಕ್ತಿ ಯೋಜನೆ ಅನುಷ್ಠಾನದ ನಂತರ, ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಬಸ್‌ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದು ವರದಿ ಮಾಡಿದೆ.

ಅಲ್ಲದೇ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸಾರಿಗೆ ನಿಮಗ ಮುಂದಾಗಿದೆ. ಹೆಚ್ಚಿನ ಬಸ್‌ಗಳ ಅಗತ್ಯವಿರುವ ಕೆಲವು ಮಾರ್ಗಗಳಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಅಂತಹ ಸಂದರ್ಭಗಳಲ್ಲಿ, ಬೇಡಿಕೆಯನ್ನು ಪೂರೈಸಲು ವೇಳಾಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ ಮತ್ತು ವೇಳಾಪಟ್ಟಿಗಳನ್ನು ತರ್ಕಬದ್ಧಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ. ನಾಲ್ಕು ನಿಗಮಗಳು 1,04,450 ಸಿಬ್ಬಂದಿ ಹೊಂದಿವೆ. ಮತ್ತು ಪ್ರಸ್ತುತ, ನಾಲ್ಕು ನಿಗಮಗಳು ರಾಜ್ಯದಾದ್ಯಂತ 23,989 ಬಸ್‌ಗಳನ್ನು ಹೊಂದಿದ್ದು, ಒಂದು ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಸಂಚರಿಸುತ್ತವೆ.

ಇದನ್ನೂ ಓದಿ: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನಈ ದಾಖಲಾತಿ ನಿಮ್ಮ ಬಳಿ ಇರಬೇಕು

ಶೂನ್ಯ ಟಿಕೆಟ್ ಅಥವಾ ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಿದ ಡೇಟಾದ ಆಧಾರದ ಮೇಲೆ ನಿಗಮಗಳಿಗೆ ಉಚಿತ ಪ್ರಯಾಣದ ವೆಚ್ಚವನ್ನು ಸರ್ಕಾರ ನೀಡುತ್ತದೆ. ವಿಶೇಷ ಅನುದಾನ ಮತ್ತು ಹಣಕಾಸಿನ ನೆರವಿನ ಹೊರತಾಗಿ ಬಸ್ ಪಾಸ್‌ಗಳಿಗೆ ಒದಗಿಸಲಾದ ಸಬ್ಸಿಡಿಯನ್ನು ಸರ್ಕಾರವು ವಾಡಿಕೆಯಂತೆ ಮರುಪಾವತಿ ಮಾಡುತ್ತದೆ.

ಸರ್ಕಾರವು ಏಪ್ರಿಲ್ 2022 ರಿಂದ ಮಾರ್ಚ್ 2023 ರವರೆಗೆ ನಾಲ್ಕು ನಿಗಮಗಳಿಗೆ 3,606.52 ಕೋಟಿ ರೂ. ಮರುಪಾವತಿ ಮಾಡಿದೆ. ಶಕ್ತಿ ಯೋಜನೆಗೆ ವಾರ್ಷಿಕ ಸುಮಾರು 4,051. 56 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಲೆಕ್ಕ ಹಾಕಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Mon, 12 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ