AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧವೆಯರಿಗೆ ಗುಡ್​​​ ನ್ಯೂಸ್ ನೀಡಿದ ರಾಜ್ಯ ಸರ್ಕಾರ​​​: ಈಗಲೇ ಅರ್ಜಿ ಸಲ್ಲಿಸಿ, 3 ಲಕ್ಷ ರೂ. ವರೆಗೆ ಹಣ ಪಡೆಯಿರಿ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ, SC ವಿಧವೆಯನ್ನು ವಿವಾಹವಾಗುವ ದಂಪತಿಗೆ 3 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಈ ಕ್ರಮವು ಮಹಿಳೆಯರಿಗೆ ಸಾಮಾಜಿಕ ಭದ್ರತೆ, ಗೌರವಯುತ ಸ್ಥಾನಮಾನ ನೀಡಿ, ಅವರ ಜೀವನವನ್ನು ಮರುರೂಪಿಸಲು ನೆರವಾಗುತ್ತದೆ. ಆನ್‌ಲೈನ್ ಅಥವಾ ಇಲಾಖೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.

ವಿಧವೆಯರಿಗೆ ಗುಡ್​​​ ನ್ಯೂಸ್ ನೀಡಿದ ರಾಜ್ಯ ಸರ್ಕಾರ​​​: ಈಗಲೇ ಅರ್ಜಿ ಸಲ್ಲಿಸಿ, 3 ಲಕ್ಷ ರೂ. ವರೆಗೆ ಹಣ ಪಡೆಯಿರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 27, 2026 | 4:14 PM

Share

ಸಾಮಾಜಿಕ ವ್ಯವಸ್ಥೆಯಲ್ಲಿ ಒಂದು ಹೆಣ್ಣಿಗೆ ಒಂದು ಗಂಡು ಬೇಕು. ಒಂದು ಗಂಡಿಗೆ ಒಂದು ಹೆಣ್ಣು ಬೇಕು. ಇದು ಈ ಪ್ರಕೃತಿಯ ನಿಯಮ ಹಾಗೂ ಕಾನೂನು ಕೂಡ ಅದನ್ನೇ ಹೇಳುವುದು. ಅದೂ ಕೂಡ ಕಾನೂನಿನ ಪ್ರಕಾರ ಮದುವೆಯಾದರೆ ಮಾತ್ರ ಈ ಸಮಾಜದಲ್ಲಿ ಅವರಿಗೆ ಗಂಡ – ಹೆಂಡತಿ ಸ್ಥಾನ ನೀಡುತ್ತಾರೆ. ಈ ಸಮಾಜ ಕೂಡ ಆ ಸಂಬಂಧವನ್ನೇ ಒಪ್ಪಿಕೊಳ್ಳುವುದು. ಅದರಲ್ಲೂ ಈ ಸಮಾಜದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದರೆ ಬೇರೆ ಸಂಬಂಧ ಕಟ್ಟಿಕೊಡುತ್ತಾರೆ. ಅದರಲ್ಲೂ ಮಹಿಳೆ ಮದುವೆಯಾಗಿ ಗಂಡನನ್ನು ಕಳೆದುಕೊಂಡರೆ, ಅದಕ್ಕೆ ಬೇರೆಯೇ ಕಲ್ಪನೆಗಳನ್ನು ಸೃಷ್ಟಿಸುತ್ತಾರೆ. ಅದಕ್ಕಾಗಿ ಅಂತಹ ಮಹಿಳೆಯ ಅಭಿವೃದ್ಧಿಗಾಗಿ ಹಾಗೂ ಅವರನ್ನು ಮದುವೆಯಾಗಲು ಪ್ರೋತ್ಸಾಹಧನವನ್ನು (Karnataka SC Widow Remarriage Scheme) ನೀಡಲು ರಾಜ್ಯ ಸರ್ಕಾರಗಳು ಹೊಸ ಯೋಜನೆಯನ್ನು ತಂದಿದೆ. ಕರ್ನಾಟಕ ಸರ್ಕಾರವು ವಿಧವಾ ಮರು ವಿವಾಹವನ್ನು ಉತ್ತೇಜಿಸಲು ನೀಡುವ ಪ್ರೋತ್ಸಾಹಧನವನ್ನು ಇತ್ತೀಚೆಗೆ ಪರಿಷ್ಕರಿಸಲಾಗಿದೆ. ಪ್ರಸ್ತುತ ಈ ಯೋಜನೆಯ ಅಡಿಯಲ್ಲಿ ಮೊತ್ತವನ್ನು 3 ಲಕ್ಷ ರೂ.ವರೆಗೂ ಹೆಚ್ಚಿಸಲಾಗಿದೆ. ಈ ಹಿಂದೆ ಯೋಜನೆಯಡಿ ವಿಧವೆಯನ್ನು ವಿವಾಹವಾಗುವ ವ್ಯಕ್ತಿಗೆ ಸರ್ಕಾರವು 2,00,000 (ಎರಡು ಲಕ್ಷ ರೂಪಾಯಿ) ಪ್ರೋತ್ಸಾಹಧನವನ್ನು ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲಾಗಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು (Social Welfare Department) ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಪ್ರೋತ್ಸಾಹಿಸಲು ಈ ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಪರಿಶಿಷ್ಟ ಜಾತಿಯ ವಿಧವೆಯನ್ನು ವಿವಾಹವಾಗುವ ದಂಪತಿಗೆ ಸರ್ಕಾರವು 3,00,000 (ಮೂರು ಲಕ್ಷ ರೂಪಾಯಿ) ಪ್ರೋತ್ಸಾಹಧನವನ್ನು ನೀಡುತ್ತದೆ ಎಂದು ಹೇಳಿದೆ.

ಯೋಜನೆಯ ಮುಖ್ಯ ಉದ್ದೇಶ:

ಪರಿಶಿಷ್ಟ ಜಾತಿಯ ವಿಧವೆಯರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ನೀಡುವುದು, ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಮತ್ತು ಮರು ವಿವಾಹದ ಮೂಲಕ ಅವರ ಜೀವನವನ್ನು ಮರುರೂಪಿಸಲು ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಅರ್ಹತಾ ಮಾನದಂಡಗಳು

ಜಾತಿ: ಮಹಿಳೆಯು ಕಡ್ಡಾಯವಾಗಿ ಪರಿಶಿಷ್ಟ ಜಾತಿ (Scheduled Caste) ವರ್ಗಕ್ಕೆ ಸೇರಿದವರಾಗಿರಬೇಕು.

ವಿವಾಹದ ಸ್ಥಿತಿ: ಇದು ಮಹಿಳೆಯ ಪಾಲಿಗೆ ಮರು ವಿವಾಹವಾಗಿರಬೇಕು (ಮೊದಲ ಪತಿ ಮರಣ ಹೊಂದಿರಬೇಕು).

ಪುರುಷನ ಅರ್ಹತೆ: ಮಹಿಳೆಯನ್ನು ಮದುವೆಯಾಗುವ ಪುರುಷನಿಗೆ ಇದು ಮೊದಲ ವಿವಾಹವಾಗಿರಬೇಕು.

ವಯೋಮಿತಿ: ಸರ್ಕಾರಿ ನಿಯಮದಂತೆ ಮಹಿಳೆಗೆ 18 ವರ್ಷ ಮತ್ತು ಪುರುಷನಿಗೆ 21 ವರ್ಷ ತುಂಬಿರಬೇಕು.

ಸಮಯದ ಮಿತಿ: ವಿವಾಹವಾದ ಒಂದು ವರ್ಷದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಅವಧಿ: ಮದುವೆಯಾದ 1 ವರ್ಷದೊಳಗೆ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯ.

ಇದನ್ನೂ ಓದಿ: ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ಹೊಸ ಮೈಲಿಗಲ್ಲು, 6.76 ಕೋಟಿ ಜನ ಭಾಗಿ

ಅಗತ್ಯ ದಾಖಲೆಗಳು :

ಜಾತಿ ಪ್ರಮಾಣಪತ್ರ: ದಂಪತಿಗಳಿಬ್ಬರ ಜಾತಿ ಪ್ರಮಾಣಪತ್ರ (ಮಹಿಳೆಯು SC ಎಂದು ದೃಢೀಕರಿಸಲು).

ಮರಣ ಪ್ರಮಾಣಪತ್ರ: ಮಹಿಳೆಯ ಮೊದಲ ಪತಿಯ ಮರಣ ಪ್ರಮಾಣಪತ್ರ.

ವಿವಾಹ ನೋಂದಣಿ ಪತ್ರ: ಮ್ಯಾರೇಜ್ ರಿಜಿಸ್ಟ್ರಾರ್ ಅವರಿಂದ ಪಡೆದ ಅಧಿಕೃತ ಪ್ರಮಾಣಪತ್ರ.

ಆಧಾರ್ ಕಾರ್ಡ್: ದಂಪತಿಗಳಿಬ್ಬರ ಆಧಾರ್ ಪ್ರತಿ.

ಬ್ಯಾಂಕ್ ವಿವರ: ದಂಪತಿಗಳ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆ (Joint Account) ವಿವರ.

ಭಾವಚಿತ್ರ: ವಿವಾಹದ ಸಂಭ್ರಮದ ಫೋಟೋಗಳು.

ಅರ್ಜಿ ಸಲ್ಲಿಸುವ ವಿಧಾನ

ಈ ಯೋಜನೆಯು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವುದರಿಂದ, ನೀವು ಈ ಕೆಳಗಿನ ಮೂಲಕ ಅರ್ಜಿ ಸಲ್ಲಿಸಬಹುದು:

ಆನ್‌ಲೈನ್: ಸೇವಾ ಸಿಂಧು ಪೋರ್ಟಲ್‌ನಲ್ಲಿ ‘ಸಮಾಜ ಕಲ್ಯಾಣ ಇಲಾಖೆ’ಯ ಅಡಿಯಲ್ಲಿರುವ ಈ ಯೋಜನೆಯನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ.

ಕಚೇರಿ: ನಿಮ್ಮ ಜಿಲ್ಲೆಯ ಅಥವಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ (Assistant Director of Social Welfare) ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ