AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Results 2022: ನಾಳೆ ಶನಿವಾರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ಶನಿವಾರ (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ಇದೀಗತಾನೆ ತಿಳಿಸಿದೆ.

Karnataka 2nd PUC Results 2022: ನಾಳೆ ಶನಿವಾರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ನಂತರ ಮುಂದೇನು ಇಲ್ಲದೆ ಉತ್ತರ
TV9 Web
| Updated By: ಸಾಧು ಶ್ರೀನಾಥ್​|

Updated on:Jun 17, 2022 | 5:14 PM

Share

ಬೆಂಗಳೂರು: ನಾಳೆ (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ಇದೀಗತಾನೆ ತಿಳಿಸಿದೆ. ನಾಳೆ ಶನಿವಾರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಬವಾಗಲಿದೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ನಾಳೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ (Karnataka 2nd PUC Results 2022)

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.

ನೀವು ವೆಬ್‌ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ವಿಧಾನ:

1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.

2. ಓಪನ್‌ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.

3. ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಬಹುದು.

ಇದನ್ನೂ ಓದಿ:

ಅಗ್ನಿಪಥವೋ ಅಥವಾ ಅಗ್ನಿಕುಂಡವೋ -ಮತ್ತೊಂದು CAA, Farm laws ಆಗದಿದ್ದರೆ ಸಾಕು, ಆಗುಹೋಗುಗಳ ವಿಶ್ಲೇಷಣೆ ಇಲ್ಲಿದೆ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Fri, 17 June 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!