AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾಲೇಜುಗಳ ಶುಲ್ಕ ಏರಿಕೆಗೆ ಬೀಳುತ್ತಾ ಕಡಿವಾಣ? ಶುಲ್ಕ ನಿಯಂತ್ರಣ ಕಾಯ್ದೆಗೆ ಎಸ್ಇಪಿ ಶಿಫಾರಸು

ಪ್ರತಿ ವರ್ಷವೂ ಖಾಸಗಿ ಕಾಲೇಜುಗಳು ಶುಲ್ಕ ಏರಿಕೆ ಮಾಡಿ ಬರೆ ಎಳೆಯಲು ಮುಂದಾಗುತ್ತವೆ. ಹೀಗಾಗಿ ಕಂಗಾಲಾಗಿರುವ ಪೋಷಕರು ಸರ್ಕಾರಕ್ಕೆ ಕಳೆದ ಕೆಲ ವರ್ಷಗಳಿಂದ ಶುಲ್ಕ ನಿಯಂತ್ರಣ ಕಾಯ್ದೆ ಜಾರಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈಗ ಈ ಬಗ್ಗೆ ರಾಜ್ಯ ಪಠ್ಯಕ್ರಮ ಸಮಿತಿ ಶಿಫಾರಸು ಮಾಡಿದೆ.

ಖಾಸಗಿ ಕಾಲೇಜುಗಳ ಶುಲ್ಕ ಏರಿಕೆಗೆ ಬೀಳುತ್ತಾ ಕಡಿವಾಣ? ಶುಲ್ಕ ನಿಯಂತ್ರಣ ಕಾಯ್ದೆಗೆ ಎಸ್ಇಪಿ ಶಿಫಾರಸು
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Aug 16, 2025 | 6:20 PM

Share

ಬೆಂಗಳೂರು, ಆಗಸ್ಟ್ 16: ಪ್ರತಿ ವರ್ಷ ಖಾಸಗಿ ಶಾಲಾ ಕಾಲೇಜುಗಳು (Private Colleges) ಲಕ್ಷ ಲಕ್ಷ ರೂಪಾಯಿ ಶುಲ್ಕ ಏರಿಕೆ ಮಾಡಿ ಸುಲಿಗೆ ಮಾಡುತ್ತವೆ. ಇದಕ್ಕೆ ಕಡಿವಾಣ ಹಾಕುವಂತೆ ಪೋಷಕರು ಆಗ್ರಹಿಸುತ್ತಲೇ ಬಂದಿದ್ದಾರೆ. ಈಗ ಪ್ರೊಫೆಸರ್ ಥೋರಟ್ ನೇತೃತ್ವದ ರಾಜ್ಯ ಪಠ್ಯಕ್ರಮ ಸಮಿತಿ (SEP) ಶುಲ್ಕ ನಿಯಂತ್ರಣ ಕಾಯ್ದೆ ಜಾರಿ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಲ್ಕ ನಿಯಂತ್ರಣ ವಿಚಾರದಲ್ಲಿ ಕಾಯ್ದೆ ರೂಪಿಸಲು ಪ್ರತ್ಯೇಕ ಸಮಿತಿ ರಚಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರೊಂದಿಗೆ, ಖಾಸಗಿ ಶಾಲೆಗಳಿಗೆ ಮೂಗುದಾರ ಹಾಕಲು ಶಿಕ್ಷಣ (Education) ಇಲಾಖೆ ತಯಾರಿ ಮಾಡಿದಂತಾಗಿದೆ.

ಪ್ರತ್ಯೇಕ ಶಾಲಾ ಶುಲ್ಕ ನಿಯಂತ್ರಣ ಮಂಡಳಿಗೆ ಎಸ್​ಇಪಿ ಶಿಫಾರಸು ಮಾಡಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೂ ವರದಿ ಸಲ್ಲಿಸಿದೆ. ಈ ವರದಿಯಲ್ಲಿ, ಶಾಲಾ ಹಂತದಲ್ಲಿ ಆಗಬೇಕಾದ ಬದಲಾವಣೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಖಾಸಗಿ ಕಾಲೇಜುಗಳು ಆಡಿದ್ದೇ ಆಟ ಎಂಬಂತಾಗಿದೆ. ಅವರು ನಿಗದಿ ಮಾಡಿದ್ದೇ ಶುಲ್ಕ ಎನ್ನುವಂತಾಗಿದೆ. ಪ್ರತಿವರ್ಷ ಶೇ 20 ರಿಂದ 30 ರಷ್ಟು ಶುಲ್ಕ ಏರಿಕೆ ಮಾಡಿಕೊಂಡು ಪೋಷಕರ ಪರದಾಟಕ್ಕೆ ಕಾರಣವಾಗಿದೆ. ಹೀಗಾಗಿ ಎಸ್ಇಪಿ ಖಾಸಗಿ ಶಾಲಾ ಕಾಲೇಜುಗಳ ಶುಲ್ಕಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಎಸ್​ಇಪಿ ಮಾಡಿರುವ ಶಿಫಾರಸಿಗೆ ಕೆಲವು ಖಾಸಗಿ ಶಾಲಾ ಒಕ್ಕೂಟಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: ಶಿಕ್ಷಣದಲ್ಲೂ ಮುಸ್ಲಿಂ ಓಲೈಕೆ: ಸಿದ್ದರಾಮಯ್ಯ ಸರ್ಕಾರದ ಎಸ್ಇಪಿ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ

ಒಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾತ್ರ ಯಾವುದನ್ನೂ ಲೆಕ್ಕಿಸದೇ, ಪ್ರತಿ ವರ್ಷ ಶುಲ್ಕ ಏರಿಕೆ ಮಾಡಿಕೊಂಡು ಕಾಸು ಮಾಡಲು ಮುಂದಾಗಿದ್ದು ಪೋಷಕರು ಪರದಾಡುವ ಸ್ಥಿತಿ ಎದುರಗಿದೆ. ಹೀಗಾಗಿ ಶುಲ್ಕ ನಿಯಂತ್ರಣ ಸಮಿತಿ ರಚನೆಗೆ ಎಸ್ಇಪಿ ಈಗ ಶಿಫಾರಸು ಮಾಡಿದ್ದು, ಸರ್ಕಾರ ಮುಂದಿನ ವರ್ಷದಿಂದಲೇ ಸಮಿತಿ ರಚಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್