AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಮನೆ ಕೆಲಸ ಮಾಡುತ್ತಿದ್ದ ಮಹಿಳೆ ರೇವಣ್ಣ ಹಾಗೂ ಪುತ್ರ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ ರೇವಣ್ಣಗೆ ಬಂಧನ ಭೀತಿ ಇರಲಿಲ್ಲ. ಆದರೆ ದೂರು ನೀಡಿದ್ದ ಮಹಿಳೆಯನ್ನ ರೇವಣ್ಣ ಕಿಡ್ನ್ಯಾಪ್‌ ಮಾಡಿಸಿದ್ದಾರೆ ಅಂತಾ ಮತ್ತೊಂದು ಕೇಸ್‌ ದಾಖಲಾಗಿತ್ತು. ಹೀಗಾಗಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣರನ್ನು ಬಂಧಿಸಲಾಗಿದೆ.

ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಗಂಗಾಧರ​ ಬ. ಸಾಬೋಜಿ
|

Updated on: May 04, 2024 | 9:06 PM

Share

ಬೆಂಗಳೂರು, ಮೇ 04: ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಕಿಡ್ನ್ಯಾಪ್​​ ಆರೋಪದ ಸುಳಿಯಲ್ಲಿ ಸಿಲುಕಿದ್ದ ಮಾಜಿ ಸಚಿವ ಹೆಚ್​.ಡಿ.ರೇವಣ್ಣ (HD Revanna) ಇಂದು ಅರೆಸ್ಟ್​ ಆಗಿದ್ದಾರೆ. ನಿರೀಕ್ಷಣಾ ಜಾಮೀನು ನಿರಾಕರಣೆ ಆದ ಬೆನ್ನಲ್ಲೆ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪುತ್ರ ಎಸ್​ಐಟಿ ಖೆಡ್ಡಾಗೆ ಬಿದ್ದಿದ್ದಾರೆ. ಪ್ರಜ್ವಲ್​ ರೇವಣ್ಣ (Prajwal Revanna) ಪೆನ್​ಡ್ರೈವ್​ ಪ್ರಕರಣ ರಾಜ್ಯ ಮಾತ್ರವಲ್ಲ, ದೇಶಾದ್ಯಂತ ಕೋಲಾಹಲ ಸೃಷ್ಟಿಸಿತ್ತು. ಇದರ ನಡುವೆ ರೇವಣ್ಣ ವಿರುದ್ಧ ಹೊಳೆನರಸೀಪುರ ಸ್ಟೇಷನ್​​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪದ ಕೇಸ್​ ದಾಖಲಾಗಿತ್ತು. ಹಾಗೇ, ನಿನ್ನೆಯಷ್ಟೇ ಮೈಸೂರಿನ ಕೆ.ಆರ್​.ನಗರ ಸ್ಟೇಷನ್​​ನಲ್ಲಿ ಮಹಿಳೆಯೊಬ್ಬರ ಅಪಹರಣದ ಆರೋಪವೂ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಇದೀಗ, ಇದೇ ಪ್ರಕರಣದಡಿ ಬಂಧಿಸಲಾಗಿದೆ.

ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ?

ಮನೆ ಕೆಲಸ ಮಾಡುತ್ತಿದ್ದ ಮಹಿಳೆ ರೇವಣ್ಣ ಹಾಗೂ ಪುತ್ರ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ ರೇವಣ್ಣಗೆ ಬಂಧನ ಭೀತಿ ಇರಲಿಲ್ಲ. ಆದರೆ ದೂರು ನೀಡಿದ್ದ ಮಹಿಳೆಯನ್ನ ರೇವಣ್ಣ ಕಿಡ್ನ್ಯಾಪ್‌ ಮಾಡಿಸಿದ್ದಾರೆ ಅಂತಾ ಮತ್ತೊಂದು ಕೇಸ್‌ ದಾಖಲಾಗಿತ್ತು. ಹೀಗಾಗಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣರನ್ನು ಬಂಧಿಸಲಾಗಿದೆ. ಬಂಧನಕ್ಕೂ ಮೊದಲು ಇದೇ ಕೇಸ್​ ವಿಚಾರವಾಗಿ ನಿರೀಕ್ಷಣಾ ಜಾಮೀನಿಗಾಗಿ ರೇವಣ್ಣ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಮೇ 6 ಕ್ಕೆ ವಿಚಾರಣೆ ಮುಂದೂಡಿದೆ. ಅಷ್ಟೇ ಅಲ್ಲ ಮಧ್ಯಂತರ ನಿರೀಕ್ಷಣಾ ಜಾಮೀನು ಕೊಡಲು ನಿರಾಕರಿಸಿದೆ.

ಇದನ್ನೂ ಓದಿ: HD Revanna Arrest: ಕೊನೆಗೂ ಹೆಚ್​ಡಿ ರೇವಣ್ಣ ಬಂಧನ; ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಅರೆಸ್ಟ್

ಪ್ರಕರಣ ಸಂಬಂಧ ಹೆಚ್‌ಡಿ ರೇವಣ್ಣ, ಹಾಗೂ ರೇವಣ್ಣ ಆಪ್ತ ಸತೀಶ್ ಬಾಬು ಮೇಲೆ ಮೈಸೂರಿನ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಆಗಿರುವ ಸಂತ್ರಸ್ತೆ ಪುತ್ರ ದೂರು ನೀಡಿದ್ದ. ಕೂಡಲೇ ಅಲಾರ್ಟ್ ಆದ ಪೊಲೀಸರು ಪ್ರಕರಣದ ಎ2 ಆರೋಪಿ ಸತೀಶ್ ಬಾಬುನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಬಳಿಕ ನ್ಯಾಯಾಧೀಶರ ಮುಂದೆ ಆರೋಪಿಯನ್ನ ಹಾಜರು ಪಡಿಸಿದ ಹಿನ್ನಲೆ ನ್ಯಾಯಾಧೀಶರು ಆರೋಪಿ ಸತೀಶ್ ಬಾಬುವನ್ನ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ತಡರಾತ್ರಿ ಕೆ.ಆರ್‌ ನಗರ ಠಾಣೆಗೆ ಹಾಜರಾದ ಸಂತ್ರಸ್ತೆ ಪುತ್ರ ಹೆಚ್.ಡಿ.ರೇವಣ್ಣ ಹಾಗೂ ರೇವಣ್ಣ ಆಪ್ತ ಸತೀಶ್ ಬಾಬು ನನ್ನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ದೂರು ನೀಡಿದ್ದ. ಸಂತ್ರಸ್ತೆ ಹೆಚ್.ಡಿ.ರೇವಣ್ಣ ಮನೆಯಲ್ಲಿ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಏಪ್ರಿಲ್ 29 ರಾತ್ರಿ 9 ಗಂಟೆಗೆ ಸಂತ್ರಸ್ತೆ ಮನೆಗೆ ಬಂದ ಹೆಚ್.ಡಿ.ರೇವಣ್ಣ ಆಪ್ತ ಸತೀಶ್ ಬಾಬು ಸಂತ್ರಸ್ತೆಯನ್ನ ಒತ್ತಾಯ ಮಾಡಿ ಕರೆದೊಯ್ದಿದ್ದಾನೆ.

ಸತೀಶ್ ಹಿರೋಹೊಂಡ ಸ್ಪೈಂಡರ್ ಬೈಕ್​ನಲ್ಲಿ ಕರೆದೊಯ್ದರು‌. ನನ್ನ ತಾಯಿಯನ್ನ ಎಲ್ಲಿಗೆ ಕರೆದೊಯ್ದರು ಗೊತ್ತಿಲ್ಲ. ಮೇ. 1 ರಂದು ಗೆಳೆಯರ ಮೂಲಕ ಅಶ್ಲೀಲ ವಿಡಿಯೋ ಬಂತು. ನಿನ್ನ ಅಮ್ಮ ಕಾಲು ಕಟ್ಟಿದ್ದು, ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂದು ಗೆಳೆಯರು ತಿಳಿಸಿದರು. ಈ ಸಂಬಂಧ ದೊಡ್ಡ ಕೇಸ್ ಆಗಿದೆ ಎಂದು ಗೆಳೆಯರೇ ಮಾಹಿತಿ ನೀಡಿದರು ಎಂದು ಉಲ್ಲೇಖಿಸಿದ್ದ ಸಂತ್ರಸ್ತೆ ಪುತ್ರ ನನ್ನ ತಾಯಿಯನ್ನ ಒತ್ತಾಯ ಪೂರ್ವಕವಾಗಿ ಕೂಡಿ ಹಾಕಿದ್ದಾರೆ ಎಂದು ಸಂತ್ರಸ್ತೆ ಪುತ್ರ ದೂರಿನಲ್ಲಿ ಅಳಲು ತೋಡಿಕೊಂಡಿದ್ದ.

ಇದನ್ನೂ ಓದಿ: ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ: ಮಧ್ಯಂತರ ನಿರೀಕ್ಷಣಾ ಜಾಮೀನು ವಜಾ

ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಆಪ್ತ ಸತೀಶ್ ಬಾಬು ಮೇಲೆ ದಾಖಲಾಗಿದ್ದ ಕಿಡ್ನಾಪ್ ಕೇಸ್​​ನಲ್ಲಿ ಈಗಾಗಲೇ ಪ್ರಕರಣದ ಎರಡನೇ ಆರೋಪಿ ಸತೀಶ್ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ ಈ ಎರಡನೇ ಆರೋಪಿ ಸಿಕ್ರೂ ಸಂತ್ರಸ್ತೆ ಮಾತ್ರ ಪತ್ತೆಯಾಗಿಲ್ಲ. ನಾಪತ್ತೆಯಾಗಿರೋ ಸಂತ್ರಸ್ತೆ ಎಲ್ಲಿ ಅನ್ನೋ ಪ್ರಶ್ನೆ ಇದೀಗ ಎದುರಾಗಿದೆ. ಸಂತ್ರಸ್ತೆ ಪೊಲೀಸರ ಮುಂದೆ ಬಂದ್ರೆ ರೇವಣ್ಣಗೆ ಕಂಟಕ ಎದುರಾಗುತ್ತೆ ಅನ್ನೋ ಕಾರಣಕ್ಕೆ ಸಂತ್ರಸ್ತೆಯನ್ನ ಕಿಡ್ನಾಪ್ ಮಾಡಲಾಗಿದೆ ಎನ್ನಲಾಗಿದೆ. ಹೀಗಾಗಿ ಕೆ.ಆರ್. ನಗರದ ಮನೆಯಿಂದಲೇ ಸಂತ್ರಸ್ತೆಯನ್ನ ಕಿಡ್ನಾಪ್ ಮಾಡಿ ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ ಎನ್ನಲಾಗಿದ್ದು ಮಹಿಳೆ ಸಿಕ್ರೆ ಹೆಚ್.ಡಿ. ರೇವಣ್ಣ ಬಣ್ಣ ಬಯಲಾಗುತ್ತೆ ಅನ್ನೋ ಕಾರಣಕ್ಕೆ ಸಂತ್ರಸ್ತೆ ಗುರುತು ಪತ್ತೆಹಚ್ಚಲು ಸಾಧ್ಯವಾಗದ ರೀತಿ ನೋಡಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ