AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ಕಲಬೆರಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ., ಜರ್ಮನಿಯಿಂದ ಬುಧವಾರ ಕರ್ನಾಟಕಕ್ಕೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಒಂದು ಬಾರಿ ವಿಮಾನ ಟಿಕೆಟ್ ಮುಂದೂಡಿಕೆ ಮಾಡಿ ನಂತರ ರದ್ದು ಮಾಡಿದ್ದಾರೆ. ಮರಳಿ ಗುರುವಾರ ಬೆಳಗ್ಗೆಯ ವಿಮಾನಕ್ಕೆ ಟಿಕೆಟ್ ಕಾಯ್ದಿರಿಸಿದ್ದರೂ ಆ ವಿಮಾನದಲ್ಲಿಯೂ ಬಂದಿಲ್ಲ.

ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು
ಪ್ರಜ್ವಲ್ ರೇವಣ್ಣ
ನವೀನ್ ಕುಮಾರ್ ಟಿ
| Updated By: Ganapathi Sharma|

Updated on: May 16, 2024 | 6:53 AM

Share

ಬೆಂಗಳೂರು, ಮೇ 16: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಲೆಮರೆಸಿಕೊಂಡು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬುಧವಾರ ಬೆಂಗಳೂರಿಗೆ ಬರುತ್ತಾರೆ ಎಂದು ಹೇಳಲಾಗಿತ್ತು. ಎರಡು ಬಾರಿ ಟಿಕೆಟ್ ರದ್ದು ಮಾಡಿದ್ದ ಪ್ರಜ್ವಲ್, ಒಮ್ಮೆ ಟಿಕೆಟ್ ಮುಂದೂಡಿಕೆ ಮಾಡಿಕೊಂಡರು. ನಂತರ ಆ ಟಿಕೆಟನ್ನೂ ರದ್ದು ಮಾಡಿದರು. ಇದಾದ ಬಳಿಕ ಗುರುವಾರ ಬೆಳಗ್ಗೆಗೆ ಮತ್ತೆ LH764 ಲುಫ್ತಾನ್ಸ್ ವಿಮಾನದ ಟಿಕೆಟ್ ಕಾಯ್ದಿರಿಸಿದ್ದರು. ಹೀಗಾಗಿ ಬೆಂಗಳೂರಿಗೆ (Bengaluru) ಬರುತ್ತಾರೆ ಎಂದು ಎಸ್ಐಟಿ ಅಧಿಕಾರಿಗಳು (SIT Officials) ಕಾದು ಕುಳಿತಿದ್ದರು. ಆದರೆ ಅವರಿಗೆ ಪ್ರಜ್ವಲ್ ಮತ್ತೆ ಚಳ್ಳೆಹಣ್ಣು ತಿನ್ನಿಸಿದ್ದಾರೆ.

ಕೊನೇ ಕ್ಷಣದಲ್ಲಿ ಟಿಕೆಟ್ ಬುಕ್ ಆಗಿದ್ದರಿಂದ ಪ್ರಜ್ವಲ್ ಬರಬಹುದು ಎಂಬ ನಿರೀಕ್ಷೆ ಎಸ್​ಐಟಿ ಅಧಿಕಾರಿಗಳಲ್ಲಿ ಇತ್ತು. ಆದರೆ, ಜರ್ಮನಿಯ ಕಾಲಮಾನ ಪ್ರಕಾರ 12.20ಕ್ಕೆ ವಿಮಾನ ಟೇಕಾಫ್ ಆಗಿದೆ. ಅತ್ತ ಟೇಕಾಫ್ ಆಗುತ್ತಿದ್ದಂತೆಯೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಪಟ್ಟಿ ಬಂದಿದೆ. ಏರ್‌ಪೋರ್ಟ್‌ನಲ್ಲೇ ಇದ್ದ ಎಸ್​ಐಟಿ ಅಧಿಕಾರಿಗಳು, ಪ್ರಯಾಣಿಕರ ಹೆಸರು ಪರಿಶೀಲಿಸಿದ್ದಾರೆ. ಆದರೆ, ವಿಮಾನದಲ್ಲಿರುವ ಪ್ರಯಾಣಿಕರ ಪಟ್ಟಿಯಲ್ಲಿ ಪ್ರಜ್ವಲ್ ಹೆಸರು ಇರಲಿಲ್ಲ. ಬೆಳಗ್ಗೆ ಟಿಕೆಟ್ ಬುಕ್ ಮಾಡಿದ್ದರೂ ಪ್ರಜ್ವಲ್ ಪ್ರಯಾಣ ಮಾಡಿರಲಿಲ್ಲ.

ಪ್ರಜ್ವಲ್ ಆಗಮನದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಅವರು ಬರುವ ಬಗ್ಗೆ ಎಸ್‌ಐಟಿಗೆ ಗೊತ್ತಿರುತ್ತದೆ. ಎಲ್ಲವನ್ನೂ ಹೇಳಲು ಆಗಲ್ಲ ಅಂದರು. ಈ ಮಧ್ಯೆ ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ‘ತಪ್ಪು ಮಾಡಿಲ್ಲ, ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ’: ಕಾನೂನು ಹೋರಾಟದ ಜೊತೆಗೆ ರೇವಣ್ಣ ಟೆಂಪಲ್ ರನ್

ಚನ್ನರಾಯಪಟ್ಟಣದಲ್ಲಿ ಮಂಗವಾರ 18 ಕಡೆ ದಾಳಿ ನಡೆಸಿದ್ದ ಎಸ್ಐಟಿ, ಇಡೀ ರಾತ್ರಿ ಶೋಧ ನಡೆಸಿತ್ತು. ಮುಂಜಾನೆ ಮೂರುವರೆರೆಗೂ ಶೋಧ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿತ್ತು. ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿ ಹಲವರ ಮನೆ ಮೇಲೆ ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ