ನಾಳೆಯಿಂದ ಇಡೀ ವಾರ ಇಡೀ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಕಟ್ಟಾಜ್ಞೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಭೀತಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸಿಎಂ ಯಡಿಯೂರಪ್ಪ ರೆಡ್ ಅಲರ್ಟ್ ಮೋಡ್​ಗೆ ಬಂದಿದ್ದಾರೆ. ನಾಳೆಯಿಂದ 1 ವಾರ ಮಾಲ್‌ಗಳು, ಚಿತ್ರಮಂದಿರಗಳು, ಪಬ್‌ & ನೈಟ್‌ ಕ್ಲಬ್ಸ್‌, ಮೇಳ, ಸೆಮಿನಾರ್‌ಗಳು, ಕ್ರೀಡಾ ಕಾರ್ಯಕ್ರಮಗಳು, ಮದುವೆ ಸಮಾರಂಭಗಳು, ನಿಶ್ಚಿತಾರ್ಥದ ಸಮಾರಂಭಗಳು ಬಂದ್‌ ಮಾಡಿಬಿಡಿ ಎಂದು ಆದೇಶ ನೀಡಿದ್ದಾರೆ. ದೈನಂದಿನ ಅವಶ್ಯಕಗಳಾಗಿರುವ ಸಾರಿಗೆ, ಹೋಟೆಲ್ಸ್, ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. […]

ನಾಳೆಯಿಂದ ಇಡೀ ವಾರ ಇಡೀ ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ಕಟ್ಟಾಜ್ಞೆ
ಸಾಧು ಶ್ರೀನಾಥ್​

Updated on: Mar 13, 2020 | 5:57 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೊನಾ ಭೀತಿ ಹೆಚ್ಚಾಗಿದ್ದು, 5ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸಿಎಂ ಯಡಿಯೂರಪ್ಪ ರೆಡ್ ಅಲರ್ಟ್ ಮೋಡ್​ಗೆ ಬಂದಿದ್ದಾರೆ.

ನಾಳೆಯಿಂದ 1 ವಾರ ಮಾಲ್‌ಗಳು, ಚಿತ್ರಮಂದಿರಗಳು, ಪಬ್‌ & ನೈಟ್‌ ಕ್ಲಬ್ಸ್‌, ಮೇಳ, ಸೆಮಿನಾರ್‌ಗಳು, ಕ್ರೀಡಾ ಕಾರ್ಯಕ್ರಮಗಳು, ಮದುವೆ ಸಮಾರಂಭಗಳು, ನಿಶ್ಚಿತಾರ್ಥದ ಸಮಾರಂಭಗಳು ಬಂದ್‌ ಮಾಡಿಬಿಡಿ ಎಂದು ಆದೇಶ ನೀಡಿದ್ದಾರೆ. ದೈನಂದಿನ ಅವಶ್ಯಕಗಳಾಗಿರುವ ಸಾರಿಗೆ, ಹೋಟೆಲ್ಸ್, ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಆದರೆ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದೆ ಏನು ಮಾಡಬೇಕು ಎಂದು ತೀರ್ಮಾನ ಮಾಡ್ತೇವೆ ಎಂದಿದ್ದಾರೆ.

Published On - 4:19 pm, Fri, 13 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us