AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ಕರ್ಮಕಾಂಡ: ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಒಂದಿಲ್ಲಾ ಒಂದು ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ನಾಪತ್ತೆಯಾಗಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಗೆ ಕೆಪಿಎಸ್ ಅಧಿಕಾರಿ ದೂರು ನೀಡಿದ್ದಾರೆ. ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೆಪಿಎಸ್​ಸಿ ಕರ್ಮಕಾಂಡ: ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ
ಕರ್ನಾಟಕ ಲೋಕಸೇವಾ ಆಯೋಗ
ಜಗದೀಶ ಬಿ.
| Edited By: ಆಯೇಷಾ ಬಾನು|

Updated on: Mar 30, 2024 | 9:49 AM

Share

ಬೆಂಗಳೂರು, ಮಾರ್ಚ್​.30: ಕೆಪಿಎಸ್​ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದ್ದು ಕೆಪಿಎಸ್​ಸಿ (KPSC) ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಎಫ್​ಐಆರ್​ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿದೆ.

2016 ರಲ್ಲಿ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನ ಪ್ರಶ್ನಿಸಿ   ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿ ಹಾರ್ಟ್​​ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಾರೆ: ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ

ಬಳಿಕ ಕೆಪಿಎಸ್​ಸಿ ಯ‌ ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆದಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಶೋಧ ನಡೆಸಿದ್ರು. ಆದರೆ ಕಡೆತ ಎಲ್ಲೂ ಸಿಕ್ಕಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದು ಕಡತ ನಾಪತ್ತೆ ಬಗ್ಗೆ ಕೆಪಿಎಸ್​ಸಿ ಸಹಾಯಕ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!