AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ; ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ
ಸಂವಿಧಾನದ ಪ್ರತಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jun 01, 2023 | 7:43 PM

Share

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More