ಬೆಳಗಾವಿ ಯೋಧ ಜಮ್ಮುವಿನಲ್ಲಿ ಉಗ್ರರ ಗುಂಡಿಗೆ ಬಲಿ, ನಾಳೆ ಅಂತ್ಯ ಸಂಸ್ಕಾರ

ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಬೆಳಗಾವಿ ಮೂಲದ ವೀರ ಯೋಧ ಹುತಾತ್ಮರಾಗಿದ್ದಾರೆ. 22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ. ಎಂ ಎಲ್‌ಐ ಆರ್ ಸಿ ಯಲ್ಲಿ ತರಬೇತಿ ಪಡೆದು ಜಮ್ಮುವಿನ 4ನೇ ಮರಾಠ ಯೂನಿಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅಸುನೀಗಿದ್ದಾರೆ. ಯೋಧನ ಕುಟುಂಬಸ್ಥರಲ್ಲಿ ಆಕ್ರಂದನ ಮನೆ ಮಾಡಿದೆ. ನಾಳೆ […]

ಬೆಳಗಾವಿ ಯೋಧ ಜಮ್ಮುವಿನಲ್ಲಿ ಉಗ್ರರ ಗುಂಡಿಗೆ ಬಲಿ, ನಾಳೆ ಅಂತ್ಯ ಸಂಸ್ಕಾರ
ಸಾಧು ಶ್ರೀನಾಥ್​

Updated on: Nov 09, 2019 | 5:05 PM

ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಬೆಳಗಾವಿ ಮೂಲದ ವೀರ ಯೋಧ ಹುತಾತ್ಮರಾಗಿದ್ದಾರೆ.

22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ. ಎಂ ಎಲ್‌ಐ ಆರ್ ಸಿ ಯಲ್ಲಿ ತರಬೇತಿ ಪಡೆದು ಜಮ್ಮುವಿನ 4ನೇ ಮರಾಠ ಯೂನಿಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗೆ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಗುಂಡು ತಗುಲಿ ಅಸುನೀಗಿದ್ದಾರೆ. ಯೋಧನ ಕುಟುಂಬಸ್ಥರಲ್ಲಿ ಆಕ್ರಂದನ ಮನೆ ಮಾಡಿದೆ.

ನಾಳೆ ಅಂತ್ಯ ಸಂಸ್ಕಾರ:
ಹುತಾತ್ಮ ಯೋಧನಿಗೆ ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ನಾಳೆ ಸಂಜೆ ಯೋಧನ ಪಾರ್ಥಿವ ಶರೀರ ಬೆಳಗಾವಿಗೆ ಆಗಮಿಸಲಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Published On - 1:00 pm, Fri, 8 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us