AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆ ವಲಯದ 15 ನಿಲ್ದಾಣಗಳ ಮೇಲ್ದರ್ಜೆ ಕಾಮಗಾರಿಗಳಿಗೆ ಫೆ.26 ರಂದು ಪ್ರಧಾನಿ ಮೋದಿ ಚಾಲನೆ

ಅಮೃತ ಭಾರತ ನಿಲ್ದಾಣ ಯೋಜನೆಯಡಿ 2023ರ ಫೆಬ್ರವರಿಯಲ್ಲಿ ರಾಷ್ಟ್ರವ್ಯಾಪಿ 1275 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ರೈಲ್ವೆ ಸಚಿವಾಲಯವು ಪ್ರಾರಂಭಿಸಿತು. ಇದರ ಭಾಗವಾಗಿ ಈಗಾಗಲೆ ರಾಜ್ಯದ ವಿವಿಧ ಜಿಲ್ಲೆಗಳ, ತಾಲೂಕುಗಳ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಇದೀಗ ನೈಋತ್ಯ ವಲಯದ 15 ರೈಲು ನಿಲ್ದಾಣಗಳಿಗೆ ಸ್ಮಾರ್ಟ್​ ಟಚ್​ ನೀಡಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ.

ನೈಋತ್ಯ ರೈಲ್ವೆ ವಲಯದ 15 ನಿಲ್ದಾಣಗಳ ಮೇಲ್ದರ್ಜೆ ಕಾಮಗಾರಿಗಳಿಗೆ ಫೆ.26 ರಂದು ಪ್ರಧಾನಿ ಮೋದಿ ಚಾಲನೆ
ಕೆಂಗೇರಿ ರೈಲು ನಿಲ್ದಾಣ
Kiran Surya
| Edited By: |

Updated on: Feb 25, 2024 | 12:41 PM

Share

ಬೆಂಗಳೂರು, ಫೆಬ್ರವರಿ 25: ಅಮೃತ ಭಾರತ ನಿಲ್ದಾಣ ಯೋಜನೆಯಡಿ (Amrita Bharat Station Project) 372,13 ಕೋಟಿ ರೂ. ವೆಚ್ಚದಲ್ಲಿ 15 ರೈಲ್ವೆ ನಿಲ್ದಾಣಗಳನ್ನು (Railway Station) ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ (South Western Railway Department) ತಿಳಿಸಿದೆ. ಕಾಮಗಾರಿಗಳಿಗೆ ಸೋಮವಾರ (ಫೆಬ್ರವರಿ 26) ರಂದು ಪ್ರಧಾನಿ ನರೇಂದ್ರ ‌ಮೋದಿಯವರು ಬೆಳಿಗ್ಗೆ 10:45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ನೈಋತ್ಯ ರೈಲ್ವೆ ವ್ಯಾಪ್ತಿಯ ಕೆಂಗೇರಿ, ಕೃಷ್ಣರಾಜಪುರ, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್​ ಫೀಲ್ಡ್​​ ರೈಲು ನಿಲ್ದಾಣಗಳು ಒಟ್ಟು 327.13 ರೂ. ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳ್ಳಲಿವೆ.

15 ನಿಲ್ದಾಣಗಳಲ್ಲಿ ಎಸ್ಕಲೆಟರ್, ಸ್ಮಾರ್ಟ್ ಪಾರ್ಕಿಂಗ್, ಶೌಚಾಲಯ, ಉತ್ತಮ ಪ್ರವೇಶದ್ವಾರ, ಕಾಯುವ ಸ್ಥಳ, ಲಿಫ್ಟ್‌, ಸ್ವಚ್ಛತೆ, ಉಚಿತ ವೈಫೈ ವ್ಯವಸ್ಥೆ, ಮಾಹಿತಿ ವ್ಯವಸ್ಥೆ ಸಹಿತ ಅನೇಕ ಸೌಲಭ್ಯಗಳನ್ನು ಈ ಯೋಜನೆ ಒಳಗೊಂಡಿದೆ. ಹಾಗಿದ್ದರೆ ಯಾವೆಲ್ಲಾ ರೈಲು ನಿಲ್ದಾಣಕ್ಕೆ ಸ್ಮಾರ್ಟ್ ಟಚ್ ಸಿಗಲಿದೆ? ಇಲ್ಲಿದೆ ವಿವರ

  1. ಬಂಗಾರಪೇಟೆ ರೈಲು ನಿಲ್ದಾಣ – 21.5 ಕೋಟಿ ರೂ.
  2. ಚನ್ನಪಟ್ಟಣ ರೈಲು ನಿಲ್ದಾಣ – 20.9 ಕೋಟಿ ರೂ.
  3. ಧರ್ಮಪುರಿ ರೈಲು ನಿಲ್ದಾಣ – 25.4 ಕೋಟಿ ರೂ.
  4. ದೊಡ್ಡಬಳ್ಳಾಪುರ ರೈಲು ನಿಲ್ದಾಣ – 21.3 ಕೋಟಿ ರೂ.
  5. ಹಿಂದೂಪುರ ರೈಲು ನಿಲ್ದಾಣ – 23.9 ಕೋಟಿ ರೂ.
  6. ಹೊಸೂರು ರೈಲು ನಿಲ್ದಾಣ – 22.3 ಕೋಟಿ ರೂ.
  7. ಕೆಂಗೇರಿ ರೈಲು ನಿಲ್ದಾಣ – 21 ಕೋಟಿ ರೂ.
  8. ಕೃಷ್ಣರಾಜಪುರ ರೈಲು ನಿಲ್ದಾಣ – 21.1 ಕೋಟಿ ರೂ.
  9. ಕುಪ್ಪಂ ರೈಲು ನಿಲ್ದಾಣ – 17.6 ಕೋಟಿ ರೂ.
  10. ಮಲ್ಲೇಶ್ವರ ರೈಲು ನಿಲ್ದಾಣ – 20 ಕೋಟಿ ರೂ.
  11. ಮಾಲೂರು ರೈಲು ನಿಲ್ದಾಣ – 20.4 ಕೋಟಿ ರೂ.
  12. ಮಂಡ್ಯ ರೈಲು ನಿಲ್ದಾಣ – 20.1 ಕೋಟಿ ರೂ.
  13. ರಾಮನಗರ ರೈಲು ನಿಲ್ದಾಣ – 21 ಕೋಟಿ ರೂ.
  14. ತುಮಕೂರು ರೈಲು ನಿಲ್ದಾಣ – 24.1 ಕೋಟಿ ರೂ.
  15. ವೈಟ್ ಫೀಲ್ಡ್ ರೈಲು ನಿಲ್ದಾಣ – 23.3 ಕೋಟಿ ರೂ. ಮೀಸಲು ಇಡಲಾಗಿದೆ.

ಇದನ್ನೂ ಓದಿ: ಚೆನ್ನೈ-ಬೆಂಗಳೂರು-ಮೈಸೂರು ಸಂಪರ್ಕಿಸಲಿದೆ ಮಹತ್ವದ ಹೈ ಸ್ಪೀಡ್ ರೈಲು ಯೋಜನೆ; ಭೂಸ್ವಾಧೀನಕ್ಕಾಗಿ ಭೂ ಮಾಲೀಕರೊಂದಿಗೆ ಸಭೆ

ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮೇಲ್ದರ್ಜೆಗೇರಿದ/ ಏರುವ ರಾಜ್ಯದ ನಿಲ್ದಾಣಗಳು

ಆಲಮಟ್ಟಿ, ಅಳ್ನಾವರ, ಅರಸೀಕೆರೆ ಜಂಕ್ಷನ್, ಬಾದಾಮಿ, ಬಾಗಲಕೋಟ, ಬಳ್ಳಾರಿ, ಬೆಂಗಳೂರು ಕಂಟೋನ್ಮೆಂಟ್, ಬಂಗಾರಪೇಟೆ, ಬಂಟವಾಳ, ಬೆಳಗಾವಿ, ಬೀದರ್, ವಿಜಯಪುರ, ಚಾಮರಾಜ ನಗರ, ಚನ್ನಪಟ್ಟಣ, ಚನ್ನಸಂದ್ರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ದೊಡ್ಡಬಳ್ಳಾಪುರ, ಗದಗ, ಗಂಗಾಪುರ ರಸ್ತೆ, ಘಟಪ್ರಭಾ, ಗೋಕಾಕ್ ರೋಡ್,  ಹರಿಹರ, ಹಾಸನ, ಹೊಸಪೇಟೆ, ಕಲಬುರಗಿ, ಕೆಂಗೇರಿ, ಕೊಪ್ಪಳ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಬೆಂಗಳೂರು), ಕೃಷ್ಣರಾಜಪುರ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ಮಂಗಳೂರು ಸೆಂಟ್ರಲ್, ಮಂಗಳೂರು ಜಂ., ಮುನಿರಾಬಾದ್, ಮೈಸೂರು, ರಾಯಚೂರು, ರಾಮನಗರ, ರಾಣಿಬೆನ್ನೂರು, ಸಾಗರ ಜಂಬಗಾರು, ಸಕಲೇಶಪುರ, ಶಹಾಬಾದ್, ಶಿವಮೊಗ್ಗ ಟೌನ್, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂ, ಸುಬ್ರಹ್ಮಣ್ಯ ರೋಡ್, ತಾಳಗುಪ್ಪ, ತಿಪಟೂರು, ತುಮಕೂರು, ವಾಡಿ, ವೈಟ್‌ಫೀಲ್ಡ್, ಯಾದಗಿರಿ, ಯಶವಂತಪುರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ