AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ

ಪಾಠದ ಜೊತೆಗೆ ಆಟವೂ ಮುಖ್ಯ. ಒಂದು ವೇಳೆ ಮಕ್ಕಳಿಗೆ ಆಟಕ್ಕೆ ಅವಕಾಶ ನೀಡದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ
ಸಚಿವ ಕೆ.ಸಿ. ನಾರಾಯಣ ಗೌಡ
TV9 Web
| Edited By: |

Updated on:Aug 31, 2021 | 5:29 PM

Share

ಹಾವೇರಿ: ರಾಜ್ಯದ ಬಹುತೇಕ ಶಾಲೆಗಳಲ್ಲಿ ಮೈದಾನಗಳೇ ಇಲ್ಲ. ಹೀಗಾಗಿ ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಮೈದಾನ ಇರಬೇಕೆಂದು ನೋಟಿಸ್ ಹೊರಡಿಸಲಾಗುವುದು ಎಂದು ಹಾವೇರಿಯಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು. ಕ್ರೀಡಾ ಉತ್ತೇಜನಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಬಹುತೇಕ ಶಾಲೆಗಳಲ್ಲಿ ಕ್ರೀಡಾಂಗಣಗಳಿಲ್ಲ. ಹೀಗಾಗಿ ಪ್ರತಿ ಶಾಲೆಯಲ್ಲೂ ಆಟದ ಮೈದಾನ ಇರುವಂತೆ ವ್ಯವಸ್ಥೆ ಮಾಡುವಂತೆ ನೊಟೀಸ್ ನೀಡಲಾಗುವುದು. ಕನಿಷ್ಠ ಒಂದು ಗಂಟೆ ಆಟವಾಡಲು ಅವಕಾಶ ಆಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗುವುದು. ಪಾಠದ ಜೊತೆಗೆ ಆಟವೂ ಮುಖ್ಯ. ಒಂದು ವೇಳೆ ಮಕ್ಕಳಿಗೆ ಆಟಕ್ಕೆ ಅವಕಾಶ ನೀಡದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ನಾವು ಸರಕಾರದ ಅಭಿವೃದ್ಧಿಗೆ ಹೊರಟವರು‌. ಟೀಕೆ ಟಿಪ್ಪಣಿಗಳಿಗೆ ಹೋಗಿ ಕಾಲ‌ ಕಳೆಯೋದು ಬೇಡ. ಅವರು ಮಾತಾಡಿಕೊಳ್ಳಲಿ, ಏಕೆಂದರೆ ಅವರು ವಿರೋಧ ಪಕ್ಷದಲ್ಲಿರುವವರು. ಟೀಕೆ ಟಿಪ್ಪಣಿಗಳನ್ನ ಮಾಡದಿದ್ದರೆ ಅವರಿಗೆ ಜೀರ್ಣಕ್ರಿಯೆ ಆಗುವುದಿಲ್ಲ. ಅಭಿವೃದ್ಧಿ ಮಾಡೋಣ, ಒಳ್ಳೆಯ ಮುಖ್ಯಮಂತ್ರಿಗಳು ಇದ್ದಾರೆ. ಮಾಜಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅವರ ನಿರ್ದೇಶನವೂ ಇದೆ. ಬಸವರಾಜ ಬೊಮ್ಮಾಯಿ ಅವರಿಗೂ ಒಳ್ಳೆಯ ಕೆಲಸಗಳನ್ನ ಮಾಡುವ ಇಚ್ಛೆಯಿದೆ. ನಾವೆಲ್ಲ ಸೇರಿ ಶಕ್ತಿ ತುಂಬಿ, ಅಭಿವೃದ್ಧಿ ಕಡೆಗೆ ಹೋಗೋಣ ಎಂದು ಅವರು ಹಾವೇರಿಯ ಜಿಲ್ಲಾ ಕ್ರೀಡಾಂಗಣ ಮತ್ತು ಒಳಾಂಗಣ ಕ್ರೀಡಾಂಗಣ ವೀಕ್ಷಣೆ ನಂತರ ಅವರು ಕರೆ ನೀಡಿದರು. ಅಲ್ಲದೇ, ಜಿಲ್ಲಾ ಕ್ರೀಡಾಂಗಣದ ವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಮನೆ ಕಟ್ಟಿಸಲು ಮುಂದಾದ ಸಂಸದೆ ಸುಮಲತಾ ಅಂಬರೀಶ್; ಬುಧವಾರವೇ ಭೂಮಿ ಪೂಜೆ ಸಂಸದೆ ಸುಮಲತಾ ಅಂಬರೀಶ್ ಸ್ವಕ್ಷೇತ್ರ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಿಸಲು ಮುಂದಾಗಿದ್ದಾರೆ. ನಾಳೆ ಬುಧವಾರ (ಸೆಪ್ಟೆಂಬರ್ 1) ಸಂಸದೆ‌ ಸುಮಲತಾ ಅಂಬರೀಶ್ ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ನಾಳೆಯೇ ಅವರು ಸ್ವಂತ ಮನೆ ಕಟ್ಟಲು ಗುದ್ದಲಿ ಪೂಜೆ ನಡೆಸಲಿದ್ದಾರೆ. ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಗೆದ್ದ ಬಳಿಕ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಿ ಅಲ್ಲಿಯೇ ವಾಸಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದರು. ಈ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಸಂಸದೆ ಸುಮಲತಾ ಅಂಬರೀಶ್ ಸ್ವಂತ ಮನೆ ಕಟ್ಟಿಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಅವರು ನೆರವೇರಿಸಲಿದ್ದಾರೆ.

ಇದನ್ನೂ ಓದಿ: 

Tokyo Paralympics: ಚೊಚ್ಚಲ ಪ್ಯಾರಾಲಿಂಪಿಕ್ಸ್​ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಭಾರತೀಯ ಕ್ರೀಡಾಪಟುಗಳು ಇವರೇ ನೋಡಿ 

ರಾಜ್ಯದ ಕ್ರೀಡಾಪಟುಗಳಿಗೆ ಅಂತರಾಷ್ಟ್ರೀಯ ಮಟ್ಟದ ಕೋಚ್, ಬಜೆಟ್​ನಲ್ಲಿ ಕ್ರೀಡೆಗೆ ಹೆಚ್ಚಿನ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ

(Karnataka Sports Minister Narayana Gowda says Every school must have play ground)

Published On - 4:48 pm, Tue, 31 August 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ