AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam-2: ಜೂನ್​ 14ರಿಂದ 22ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಎಸ್​ಎಸ್​​ಎಲ್​ಸಿ-2 ಪರೀಕ್ಷೆಯ ವೇಳಾಪಟ್ಟಿ ಶನಿವಾರ ಪ್ರಕಟಿಸಿದೆ. ಜೂನ್​ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿವೆ. ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

SSLC Exam-2: ಜೂನ್​ 14ರಿಂದ 22ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ
ಜೂನ್​ 7ರಿಂದ 14ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ
Vinay Kashappanavar
| Edited By: |

Updated on:May 18, 2024 | 5:23 PM

Share

ಬೆಂಗಳೂರು, ಮೇ 18: ಎಸ್​ಎಸ್​​ಎಲ್​ಸಿ-2 (SSLC-2) ಪರೀಕ್ಷೆಯ ವೇಳಾಪಟ್ಟಿ ಶನಿವಾರ ಪ್ರಕಟವಾಗಿದ್ದು, ಜೂನ್​ 14ರಿಂದ 22ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಜೂನ್​​ 07 ರಿಂದ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.

ಎಸ್​ಎಸ್​​ಎಲ್​ಸಿ ಪರೀಕ್ಷೆ 2 ವೇಳಾಪಟ್ಟಿ ಹೀಗಿದೆ

  • ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
  • ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
  • ಜೂನ್ 18: ಗಣಿತ/ಸಮಾಜ ಶಾಸ್ತ್ರ
  • ಜೂನ್ 19: ಎಲಿಮೆಂಟ್ಸ್​​ ಆಫ್​ ಮೆಕ್ಯಾನಿಕಲ್​ ಇಂಜಿನಿಯರಿಂಗ್​​ IV, ಇಂಜಿನಿಯರಿಂಗ್ ಗ್ರಾಫಿಕ್ಸ್​​2, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ IV, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್​​, ಅರ್ಥಶಾಸ್ತ್ರ
  • ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
  • ಜೂನ್ 22: ಸಮಾಜ ವಿಜ್ಞಾನ

ಇದನ್ನೂ ಓದಿ: SSLC Grace Mark: ಎಸ್​​ಎಸ್​ಎಲ್​ಸಿ ಗ್ರೇಸ್ ಮಾರ್ಕ್​ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇದೇ ಮೇ.9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.

ಇದನ್ನೂ ಓದಿ: SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಮೇ 9 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷ ಒಟ್ಟಾರೆ ಉತ್ತೀರ್ಣ ಶೇಕಡಾ 73.40 ರಷ್ಟಿದೆ. ಪರೀಕ್ಷೆಗೆ ಹಾಜರಾದ ಒಟ್ಟು 859,967 ವಿದ್ಯಾರ್ಥಿಗಳ ಪೈಕಿ 631,204 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:44 pm, Sat, 18 May 24

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’