AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

KSEB 10ನೇ ತರಗತಿ ಪರೀಕ್ಷೆ 2021: ಜುಲೈ 19, 22ರಂದು ಎರಡು ದಿನ ಆಯ್ಕೆ(objective) ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. 6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು.....

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 12, 2021 | 3:14 PM

Share

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಂಡಿದೆ. ಕರ್ನಾಟಕದಲ್ಲಿ ಶೇ.1.48ರಷ್ಟು ಮಾತ್ರ ಪಾಸಿಟಿವಿಟಿ ವರದಿ ಇದೆ. ಸದ್ಯಕ್ಕೆ ಕೊವಿಡ್ ಎರಡನೇ ಅಲೆ ಕಡಿಮೆ ಆಗಿರುವುದರಿಂದ ಮಾರ್ಗಸೂಚಿ ಪಾಲಿಸಿ ಪರೀಕ್ಷೆ ನಡೆಸಲಾಗುತ್ತಿದೆ.

ಜುಲೈ 19, 22ರಂದು ಎರಡು ದಿನ ಆಯ್ಕೆ(objective) ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. 6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಸರ್ಕಾರ ರೂಪಿಸಿದ ಎಸ್ಒಪಿ ಪಾಲಿಸಬೇಕು ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ. ಹಂಚಟೆ ಸಂಜೀವ್ ಕುಮಾರ್ರ ಪೀಠ ಆದೇಶ ಹೊರಡಿಸಿದೆ.

10 ನೇ ತರಗತಿ/ ಎಸ್‌ಎಸ್‌ಎಲ್‌ಸಿ ಮಂಡಳಿ ಪರೀಕ್ಷೆಗೆ ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ಕೋರಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು. ವರದಿಯ ಪ್ರಕಾರ, ಜುಲೈ 19, 20 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾಜ್ಯ ಸರ್ಕಾರ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. 10ನೇ ತರಗತಿ ಮತ್ತು ಮೊದಲ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತೆ.

ಇದನ್ನೂ ಓದಿ: ಎಸ್‌ಎಸ್‌ಎಲ್​​ಸಿಗೆ ಪರೀಕ್ಷೆ: ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆ ನಿರ್ಧಾರ, ಬೃಹಸ್ಪತಿ ಶಿಕ್ಷಣ ಸಚಿವರ ನಿರ್ಧಾರ ಎಂದ ಹೆಚ್‌.ಡಿ. ಕುಮಾರಸ್ವಾಮಿ

Published On - 1:41 pm, Mon, 12 July 21

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ