AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021; ಪರೀಕ್ಷಾ ಕೇಂದ್ರ ಕನ್​ಫ್ಯೂಸ್​​ ಮಾಡ್ಕೊಂಡಿದ್ದ ವಿದ್ಯಾರ್ಥಿನಿಗೆ ಖಾಕಿ ಹೆಲ್ಪ್, ಮತ್ತೊಂದೆಡೆ ಕೊವಿಡ್ ಸೆಂಟರ್​​ನಲ್ಲೇ ವಿದ್ಯಾರ್ಥಿಗೆ ಪರೀಕ್ಷೆ

ಪರೀಕ್ಷಾ ಕೇಂದ್ರ ಕನ್ಫ್ಯೂಶನ್ನಲ್ಲಿದ್ದ ವಿದ್ಯಾರ್ಥಿನಿಗೆ ಪೊಲೀಸ್ ಕಾನ್ಸ್ ಟೇಬಲ್ ಸಹಾಯ ಮಾಡಿದ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ನಡೆದಿದೆ.

SSLC Exam 2021; ಪರೀಕ್ಷಾ ಕೇಂದ್ರ ಕನ್​ಫ್ಯೂಸ್​​ ಮಾಡ್ಕೊಂಡಿದ್ದ ವಿದ್ಯಾರ್ಥಿನಿಗೆ ಖಾಕಿ ಹೆಲ್ಪ್, ಮತ್ತೊಂದೆಡೆ ಕೊವಿಡ್ ಸೆಂಟರ್​​ನಲ್ಲೇ ವಿದ್ಯಾರ್ಥಿಗೆ ಪರೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 19, 2021 | 12:08 PM

Share

ಹುಬ್ಬಳ್ಳಿ: ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ವರೆಗೆ ಎಕ್ಸಾಂ ನಡೆಯಲಿದೆ. ಎರಡು ದಿನದಲ್ಲಿ SSLCಯ ಒಟ್ಟು 6 ವಿಷಯಗಳನ್ನ ಕವರ್ ಮಾಡಲಾಗ್ತಿದೆ. ಇಂದು ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ ನಡೆದ್ರೆ, ಜುಲೈ 22 ರಂದು ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಅಂದ್ರೆ ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತೆ. ಮತ್ತೊಂದು ಪ್ರಶ್ನೆ ಪತ್ರಿಕೆ ಮೂರು ಭಾಷಾ ವಿಷಯಗಳನ್ನ ಸೇರಿಸಿ ಸಿದ್ಧಪಡಿಸಲಾಗಿರುತ್ತದೆ. ಪ್ರತಿ ಪಶ್ನೆ ಪತ್ರಿಕೆ ಒಟ್ಟು 120 ಅಂಕಗಳನ್ನ ಒಳಗೊಂಡಿದ್ದು, ಮೂರು ಮೂರು ವಿಷಯಗಳಿಗೆ ತಲಾ 40 ಅಂಕಗಳ ಪ್ರಶ್ನೆಗಳಿರುತ್ತೆ. ಸದ್ಯ ಇಂದು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ. ಆದ್ರೆ ಈ ನಡುವೆ ಹುಬ್ಬಳ್ಳಿಯಲ್ಲಿ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.

ಪರೀಕ್ಷಾ ಕೇಂದ್ರ ಕನ್ಫ್ಯೂಶನ್ನಲ್ಲಿದ್ದ ವಿದ್ಯಾರ್ಥಿನಿಗೆ ಪೊಲೀಸ್ ಕಾನ್ಸ್ ಟೇಬಲ್ ಸಹಾಯ ಮಾಡಿದ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ನಡೆದಿದೆ. ಆದರೆ ಲ್ಯಾಮಿಂಗ್ಟನ್ ಬದಲಾಗಿ ನಗರದ ಬೇರೊಂದು ಕೇಂದ್ರದಲ್ಲಿ ವಿದ್ಯಾರ್ಥಿನಿಯ ಪರೀಕ್ಷೆ ಇತ್ತು. ಪರೀಕ್ಷೆಯ ಟೈಂ ಆದ ಹಿನ್ನೆಲೆ ಪೊಲೀಸ್ ಕಾನ್ಟಟೇಬಲ್ ತನ್ನ ಬೈಕ್ನಲ್ಲೇ ವಿದ್ಯಾರ್ಥಿನಿ ಕರೆದುಕೊಂಡು ಹೋಗಿ ಸರಿಯಾದ ಪರಿಕ್ಷಾ ಕೇಂದ್ರ ಅಂದ್ರೆ ಲ್ಯಾಮಿಂಗ್ಟನ್ ಶಾಲೆಯಿಂದ ದುರ್ಗಾದೇವಿ ಶಾಲೆಗೆ ಕರೆದುಕೊಂಡು ಹೋಗಿ ಸಹಾಯ ಮಾಡಿದ್ದಾರೆ.

ಕೊವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿ ಇನ್ನು ರಾಮನಗರದಲ್ಲಿ ಪರೀಕ್ಷೆ ಬರೆಯಲು ಕೊರೊನಾ ಪಾಸಿಟಿವ್ ವಿದ್ಯಾರ್ಥಿ ಆಗಮಿಸಿದ್ದು ಆತನಿಗೆ ಕೊವಿಡ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬಾದಗೆರೆ ಕೊವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿ ಪೋಷಕರಿಂದ ಪ್ರಮಾಣ ಪತ್ರ ಪಡೆದು ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಜುಲೈ 12 ರಂದು ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಧೃಡವಾಗಿತ್ತು. ಸದ್ಯ ವಿದ್ಯಾರ್ಥಿ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ರೀತಿ ಮತ್ತೊಂದು ಕಡೆ ಕೊಪ್ಪಳ ಜಿಲ್ಲಾಸ್ಪತ್ರೆಯ ಕೊವಿಡ್ ಕೇರ್ ಸೆಂಟರ್ನಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾರೆ. ನಿನ್ನೆ ಕುಕನೂರ ತಾಲೂಕಿನ ತಳಕಲ್ ಗ್ರಾಮದ ವಿದ್ಯಾರ್ಥಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಕುಕನೂರು ತಾಲೂಕಿನ ಇಟಗಿ ಸರ್ಕಾರಿ ಶಾಲೆಯಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ, ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಕೊವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಓರ್ವ ಪರೀಕ್ಷಾ ಸಿಬ್ಬಂದಿ, ಓರ್ವ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

Published On - 11:19 am, Mon, 19 July 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ