AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪ: ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಸಾಧ್ಯತೆ

SSLC preparatory exam: ಎಸ್​ಎಸ್​ಎಲ್​​ಸಿ ಪೂರ್ವಸಿದ್ಧತಾ ಪರೀಕ್ಷೆ ಸಹ ರಾಜಕೀಯ ವಿವಾದದ ವಸ್ತುವಾಗಿ ಪರಿಣಮಿಸಿದೆ. ಮಾರ್ಚ್ 1ರ ಶುಕ್ರವಾರ ನಡೆಯಲಿರುವ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮಾಡಿರುವ ಬದಲಾವಣೆಯೇ ಇದಕ್ಕೆ ಕಾರಣ. ಈ ವಿಚಾರವಾಗಿ ಪರೀಕ್ಷಾ ಮಂಡಲಿ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಇಂದು ಶಿಕ್ಷಣ ಇಲಾಖೆ ಅಧಿಕೃತ ಸ್ಪಷ್ಟೀಕರಣ ನೀಡುವ ನಿರೀಕ್ಷೆ ಇದೆ.

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪ: ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 05, 2024 | 7:44 AM

Share

ಬೆಂಗಳೂರು, ಫೆಬ್ರವರಿ 5: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ (sslc preparatory exam) ಮುಸ್ಲಿಂ ತುಷ್ಟೀಕರಣ (Muslim appeasement) ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಇಂದು (ಸೋಮವಾರ) ಅಧಿಕೃತವಾಗಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಫೆಬ್ರವರಿ 26ರಿಂದ ಮಾರ್ಚ್ 3ರವರೆಗೆ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಪ್ರತಿ ದಿನ ಬೆಳಗ್ಗೆ 10.15ರಿಂದ ಆರಂಭವಾಗಲಿದೆ. ಆದರೆ ಮಾರ್ಚ್ 1ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಪರೀಕ್ಷೆ ನಿಗದಿಯಾಗಿದೆ. ಮುಸ್ಲಿಮರ ನಮಾಜ್​ಗೆ ಅನುಕೂಲ ಮಾಡಿಕೊಡಲು ವೇಳಾಪಟ್ಟಿ ಬದಲಾವಣೆ ಎಂಬ ಆರೋಪ ಕೇಳಿಬಂದಿದ್ದು, ಪ್ರತಿಪಕ್ಷ ಬಿಜೆಪಿ ನಾಯಕರು ಸಹ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ನಡೆಯಲಿದೆ. ಮಾರ್ಚ್ 1ರಂದು ದ್ವಿತೀಯ ಪಿಯುಸಿ ಕನ್ನಡ, ಅರೇಬಿಕ್ ಪರೀಕ್ಷೆ ನಿಗದಿಯಾಗಿದೆ. ಮಾರ್ಚ್ 1ರ ಶುಕ್ರವಾರ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ಮಾರ್ಚ್ 1ರಂದು ಎಸ್​ಎಸ್​ಎಲ್​ಸಿ ಪ್ರಿಪರೇಟರಿ ಎಕ್ಸಾಂ​ ಮಧ್ಯಾಹ್ನ ನಿಗದಿ ಮಾಡಲಾಗಿದೆ. ಮಾರ್ಚ್ 1ರ ಮಧ್ಯಾಹ್ನ 2 ಗಂಟೆಯಿಂದ ಎಸ್​ಎಸ್​ಎಲ್​ಸಿ ವಿಜ್ಞಾನ ಪ್ರಿಪರೇಟರಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಮಂಡಳಿ ಹೇಳುವುದೇನು?

ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಕರ್ನಾಟಕ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ ಈ ಸ್ಪಷ್ಟನೆ ನೀಡಿದೆ. ಇದೀಗ ಶಿಕ್ಷಣ ಇಲಾಖೆ ಅಧಿಕೃತವಾಗಿ ಸ್ಪಷ್ಟೀಕರಣ ನೀಡುವ ನಿರೀಕ್ಷೆ ಇದೆ.

ಭಟ್ಕಳ ಹಿಂದೂ ಮುಖಂಡರಿಂದ ಖಂಡನೆ

ಎಸ್‌ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪಕ್ಕೆ ಸಂಬಂಧಿಸಿ, ಸರಕಾರದ ನಿಯಮವನ್ನು ಭಟ್ಕಳದ ಹಿಂದೂ ಮುಖಂಡ ಶ್ರೀಕಾಂತ ನಾಯ್ಕ ಖಂಡಿಸಿದ್ದಾರೆ. ಬೆಳಗ್ಗಿನ ನಮಾಜ್‌ಗೆ ಅನುಕೂಲ ಮಾಡಿಕೊಡಲು ಪರೀಕ್ಷೆಯ ವೇಳಾಪಟ್ಟಿಯನ್ನೇ ಸರಕಾರ ಬದಲಾಯಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಳಿಗ್ಗೆ ನಮಾಜ್‌ಗೆ ಅನುಕೂಲವಾಗಲು ಪರೀಕ್ಷೆ ವೇಳಾಪಟ್ಟಿಯನ್ನೇ ಶಿಕ್ಷಣ ಇಲಾಖೆ ಬದಲಾಯಿಸಿದೆ-ಹಿಂದೂ ಮುಖಂಡ ಗಂಭೀರ ಆರೋಪ

ಕಾಂಗ್ರೆಸ್ ಸರ್ಕಾರದ ನಿರ್ದೇಶನದಂತೆ ಮುಸ್ಲಿಂ ತುಷ್ಟೀಕರಣಕ್ಕಾಗಿ ರಾಜ್ಯ ಶಿಕ್ಷಣ ಇಲಾಖೆ ಸಮಯ ಬದಲಾಯಿಸಿದೆ. ಶಿಕ್ಷಣ ಕ್ಷೇತ್ರದಲ್ಲೂ ನೇರವಾಗಿ ಸರಕಾರ ಮುಸ್ಲಿಂ ತುಷ್ಟೀಕರಣದ ನಡೆಸುತ್ತಿದೆ ಎಂದು ಹಿಂದೂ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Mon, 5 February 24

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?